ಬುಡ ಕುಸಿಯುವ ಮುನ್ನ ಎಚ್ಚರವಹಿಸಿ ಸಿದ್ದರಾಮಯ್ಯ: ಬಿಜೆಪಿ ವ್ಯಂಗ್ಯ

ದ್ವೇಷದ ರಾಜಕಾರಣಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

Written by - Zee Kannada News Desk | Last Updated : Aug 9, 2021, 03:08 PM IST
  • ಮೂಲ ಕಾಂಗ್ರೆಸ್ ನಾಯಕರು ವಲಸಿಗರಾದ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದಾರೆ
  • ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವ‌ ಸಿದ್ದರಾಮಯ್ಯ ಬುಡ ಕುಸಿಯುವ ಮುನ್ನ ಎಚ್ಚರಿಕೆ ವಹಿಸಲಿ
  • ಸದಾ ನೆರಮನೆಯ ದುಃಖಕ್ಕೆ ಅಳುವವರನ್ನು ಯಾರು ಮೆಚ್ಚುತ್ತಾರೆ ಸಿದ್ದರಾಮಯ್ಯ ಎಂದು ಪ್ರಶ್ನಿಸಿದ ಬಿಜೆಪಿ
ಬುಡ ಕುಸಿಯುವ ಮುನ್ನ ಎಚ್ಚರವಹಿಸಿ ಸಿದ್ದರಾಮಯ್ಯ: ಬಿಜೆಪಿ ವ್ಯಂಗ್ಯ  title=
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ

ಬೆಂಗಳೂರು: ಬುಡ ಕುಸಿಯುವ ಮುನ್ನವೇ ಎಚ್ಚರಿಕೆ ವಹಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah)ಗೆ ಕರ್ನಾಟಕ ಬಿಜೆಪಿ ವ್ಯಂಗ್ಯವಾಡಿದೆ. ವಿಪಕ್ಷ ಸ್ಥಾನದಿಂದ ಸಿದ್ದರಾಮಯ್ಯನವರನ್ನು ತೆಗೆಯುವಂತೆ ಕಾಂಗ್ರೆಸ್ ನಾಯಕರು ಹೈಕಮಾಂಡ್ ಗೆ ದೂರು ನೀಡಿದ್ದಾರೆಂಬ ವಿಚಾರವಾಗಿ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.

‘ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವ‌ ಕರ್ನಾಟಕದ ಟ್ವಿಟರ್  ಪ್ರವಚನಕಾರ ಸಿದ್ದರಾಮಯ್ಯ(Siddaramaiah)ನವರೇ ನೀವು ಏನೂ ಕೆಲಸ ಮಾಡುವುದಿಲ್ಲ, ಬರೇ ಬುರುಡೆ ಬಿಡುವುದು, ಸಂತೆ ಭಾಷಣ ಕೊಡುವುದು ಎಂದು ಆರೋಪಿಸಿ ನಿಮ್ಮವರೇ ಹೈಕಮಾಂಡ್‌ಗೆ ದೂರು ನೀಡಿದ್ದಾರೆ. ಬಹುಶಃ ಅವರೆಲ್ಲ ಮೂಲ ಕಾಂಗ್ರೆಸ್ಸಿಗರಾಗಿರಬಹುದಲ್ಲವೇ?’ ಅಂತಾ ಬಿಜೆಪಿ ಪ್ರಶ್ನಿಸಿದೆ.

ಇದನ್ನೂ ಓದಿ: Viral Video: ‘ಮಸಾಲೆ ದೋಸೆ’ ಬೊಂಬಾಟ್ ಗುರು ಎಂದ ಬ್ರಿಟಿಷ್ ರಾಯಭಾರಿ..!

#ವಲಸೆರಾಮಯ್ಯ ಹ್ಯಾಶ್ ಟ್ಯಾಗ್ ಬಳಸಿ ಸಿದ್ದರಾಮಯ್ಯ ವಿರುದ್ಧ ಟೀಕಿಸಿರುವ ಬಿಜೆಪಿ(BJP Karnataka), ‘ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಮೂಲಕ ಕಾಂಗ್ರೆಸ್ಸಿಗರು ಹೈಕಮಾಂಡ್‌ಗೆ ದೂರು ನೀಡಿದ್ದಾರೆ. ಮೂಲ ಕಾಂಗ್ರೆಸ್ಸಿಗರಿಗೆ ಈಗ ಅಸ್ಥಿತ್ವದ ಭಯ ಕಾಡುತ್ತಿದೆ. ಇದೊಂದು ರೀತಿ ಭಸ್ಮಾಸುರನ ಕತೆಯಂತೆ ಇದೆ. ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂದು ಬೊಬ್ಬೆ ಹೊಡೆಯುತ್ತಿದ್ದ ಸಿದ್ದರಾಮಯ್ಯನವರಿಗೆ ತಮ್ಮ ಪಕ್ಷದಲ್ಲಿ ಏನಾಗುತ್ತಿದೆ ಎಂಬುದು ಅರ್ಥವಾಗುವಷ್ಟರಲ್ಲೇ ವರಿಷ್ಠರಿಗೆ ದೂರು ಮುಟ್ಟಿದೆ. ಸದಾ ನೆರಮನೆಯ ದುಃಖಕ್ಕೆ ಅಳುವವರನ್ನು ಯಾರು ಮೆಚ್ಚುತ್ತಾರೆ ಸಿದ್ದರಾಮಯ್ಯ? ಬುಡ ಕುಸಿಯುವ ಮುನ್ನ ಎಚ್ಚರವಹಿಸಿ!’ ಅಂತಾ ಕುಟುಕಿದೆ.

ಇದನ್ನೂ ಓದಿ: N Mahesh : ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಶಾಸಕ ಎನ್ ಮಹೇಶ್!

‘ವರ ಕೊಟ್ಟವರ ತಲೆಯ ಮೇಲೆ ಉರಿ ಹಸ್ತ ಇಡಲು ಹೊರಟರೆ ಅವರು ಬಿಡುತ್ತಾರೆಯೇ ಸಿದ್ದರಾಮಯ್ಯ? ಅಂತಾ ಬಿಜೆಪಿ ವ್ಯಂಗ್ಯವಾಡಿದೆ. ‘ದ್ವೇಷದ ರಾಜಕಾರಣಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್. ಕಾಂಗ್ರೆಸ್‌(Congress) ಪಕ್ಷ ಅಂಬೇಡ್ಕರ್‌ ಮೇಲೆ ದ್ವೇಷ ಸಾಧಿಸಿದ ಇತಿಹಾಸವನ್ನು ಬಿಚ್ಚಿಡಬೇಕೇ ಸಿದ್ದರಾಮಯ್ಯ? ಶ್ಯಾಮ್ ಪ್ರಸಾದ್ ಮುಖರ್ಜಿ, ಪಿ.ವಿ.ನರಸಿಂಹ ರಾವ್, ಸೀತಾರಾಂ ಕೇಸರಿ, ದೇವರಾಜ ಅರಸು ವಿಚಾರದಲ್ಲಿ ಕಾಂಗ್ರೆಸ್ ಮಾಡಿದ ದ್ವೇಷದ ರಾಜಕಾರಣ ನೆನಪಿಸಿಕೊಳ್ಳಿ!’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News