ಮೈಸೂರು: ನನ್ನ ಬದುಕು ತೆರೆದ ಪುಸ್ತಕ ಯಾರು ಬೇಕಾದರೂ ನೋಡಬಹುದು. ಕಾಶಪ್ಪನವರು ಏನಾದರೂ ಮಾತನಾಡಲಿ. ಮಾಧ್ಯಮದ ಮಂದೆ ಬಂದು ಯಾರಾದರೂ ಏನಾದರೂ ಮಾತನಾಡಲಿ. ಅವರ ಬಾಯಿ ಮುಚ್ಚಿಸಲು ನಾನು ಯಾರು. ನಾನು ಇನ್ನು ಮುಂದೆ ಅವರ ವಿಚಾರಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಬಿಜೆಪಿ ಮುಖಂಡ ವಿಜಯೇಂದ್ರ ಪ್ರತಿಕ್ರಿಯಿಸಿದರು.


COMMERCIAL BREAK
SCROLL TO CONTINUE READING

ಬಾರ್‌ನಲ್ಲಿ ನಡೆದ ಗಲಾಟೆಯನ್ನು ನಾನು ನೆನಪು ಮಾಡಿದೆ ಅಷ್ಟೆ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ ಟೀಕೆ ಮಾಡಿಲ್ಲ ದಿನ ಬೆಳಗಾದರೆ ಅವರಿವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದು ನನ್ನ ಕೆಲಸವಲ್ಲ ಎಂದು ಬಿಜೆಪಿ(BJP) ಮುಖಂಡ ವಿಜಯೇಂದ್ರ ಹೇಳಿದರು.


Tik‌ Tok ಖರೀದಿಗೆ ಆಸಕ್ತಿ ತೋರಿದ ಬೆಂಗಳೂರು ಮೂಲ ಕಂಪನಿ..!


ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ವಿಜಯೇಂದ್ರ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್(Vijayanand Kashappanava) ವಾಗ್ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದರು. ದಿನ ಬೆಳಗಾದರೆ ಅವರಿವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದು ನನ್ನ ಕೆಲಸವಲ್ಲ. ನಾನು ರಾಜ್ಯದ ಜನರ ಹೃದಯದಲ್ಲಿ ಇರಲು ಕೆಲಸ ಮಾಡುತ್ತಿದ್ದೇನೆ ಎಂದು ವಿಜಯೇಂದ್ರ ಹೇಳಿದರು.


Siddaramaiah: 'ಅಹಿಂದ ಸಮಾವೇಶದ ಬದಲು ಕಾಂಗ್ರೆಸ್ ಸಮಾವೇಶ ಮಾಡುವೆ'


ಒಮ್ಮೆ ಶಾಸಕರಾದವರು ಸಿಎಂ ಯಡಿಯೂರಪ್ಪ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಿ ಅಂತಾ ಹೇಳಿದ್ದೇ. ಮತ್ತ್ಯಾವ ಹೇಳಿಕೆ ನೀಡಿಲ್ಲ ಎಂದು ಬಿ ವೈ ವಿಜಯೇಂದ್ರ ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.


BY Vijayendra, Kashappanavar, BS Yediyurappa, CM of Karnataka,