ಬೆಂಗಳೂರು: ಬಿಜೆಪಿ ನಾಯಕ ಸಿಟಿ ರವಿ ಪಿಎಚ್‍ಡಿ ಪೂರ್ಣಗೊಳಿಸಿದ್ದು, ಇನ್ಮುಂದೆ ಡಾ.ಸಿಟಿ ರವಿ ಆಗಲಿದ್ದಾರೆ. ‘ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳ ಒಂದು ಅಧ್ಯಯನ’ ವಿಷಯದ ಬಗ್ಗೆ ಮೌಖಿಕ ಪರೀಕ್ಷೆಯನ್ನು ಸಿಟಿ ರವಿಯವರು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ತಮ್ಮ ಪಿಎಚ್​ಡಿಯ ಮಹಾ ಪ್ರಬಂಧ ಸಲ್ಲಿಸಿದ್ದಾರೆ.  


COMMERCIAL BREAK
SCROLL TO CONTINUE READING

ಈ ಬಗ್ಗೆ ಸಿಟಿ ರವಿ ತಮ್ಮ ಟ್ವಿಟರ್ ಖಾತೆಯಲ್ಲಿ ಸಂತಸ ಹಂಚಿಕೊಂಡಿಕೊಂಡು ಮಾಹಿತಿ ನೀಡಿದ್ದಾರೆ. ‘ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ಕೆ.ಜೆಸುರೇಶ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ, ಪಿಎಚ್.ಡಿ ಪದವಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗಕ್ಕೆ ನಾನು ಸಲ್ಲಿಸಿದ್ದ ಮಹಾ ಪ್ರಬಂಧ "ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳು: ಒಂದು ಅಧ್ಯಯನ" ಇದರ ಮೌಖಿಕ ಪರೀಕ್ಷೆಯನ್ನು ಇಂದು ಯಶಸ್ವಿಯಾಗಿ  ಪೂರ್ಣಗೊಳಿಸಿದ್ದೇನೆ. ನನ್ನ ಸಂಶೋಧನಾ ಕಾಲದಲ್ಲಿ ಸಹಕರಿಸಿದ ಸರ್ವರಿಗೂ ಹೃದಯಪೂರ್ವಕ ಧನ್ಯವಾದಗಳು’ ಎಂದು ಸಿಟಿ ರವಿ ಹೇಳಿದ್ದಾರೆ.


ಪಾರ್ಲೆ-ಜಿ ಬಿಸ್ಕೆಟ್ ಮೇಲಿದ್ದ ಬೇಬಿ ಫೋಟೋ ನಾಪತ್ತೆ..! ಯಾರು ಈ ಯುವಕ..?


ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸಿಟಿ ರವಿ, ಇದೀಗ ಅದೇ ವಿವಿಯಲ್ಲಿ ಪಿಎಚ್​ಡಿ ಪದವಿ ಪಡೆದುಕೊಳ್ಳಲಿದ್ದಾರೆ. ಪಿಎಚ್​ಡಿಗೆ ಸಂಬಂಧಿಸಿದಂತೆ ಇತ್ತೀಚೆಗೆ ನವದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದ ಸಿಟಿ ರವಿ ಮಾಹಿತಿ ಕಲೆಹಾಕಿದ್ದರು.  


ಚಿಕ್ಕಮಗಳೂರು ಕ್ಷೇತ್ರದಲ್ಲಿ ಸತತ 4 ಬಾರಿ ಗೆಲುವು ಸಾಧಿಸಿ ಸಚಿವರಾಗಿ, ಬಳಿಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಸಿಟಿ ರವಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡರು. ಸದ್ಯ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಅವರು ರಾಜಕೀಯದ ಜೊತೆಗೆ ಶಿಕ್ಷಣ ಪಡೆದುಕೊಂಡಿದ್ದಾರೆ.  


ಇದನ್ನೂ ಓದಿ: 40,000 crore scam: ಯತ್ನಾಳ್ ಹೇಳಿದ ಆ ‘ರಾತ್ರಿ ರಹಸ್ಯ’ ಯಾವುದು ವಿಜಯೇಂದ್ರ?- ಕಾಂಗ್ರೆಸ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.