ಮಂಡ್ಯ ಲೋಕಸಭಾ ಕ್ಷೇತ್ರ: ಎಪ್ರಿಲ್ 4ರಂದು ಸುಮಲತಾ ಪರ ಎಸ್.ಎಂ. ಕೃಷ್ಣ ಪ್ರಚಾರ

ಪಕ್ಷದ ನಿರ್ದೇಶನದಂತೆ ಪ್ರಚಾರ ಮಾಡುತ್ತಿರುವುದಾಗಿ ತಿಳಿಸಿರುವ ಎಸ್.ಎಂ. ಕೃಷ್ಣ.

Last Updated : Apr 1, 2019, 12:18 PM IST
ಮಂಡ್ಯ ಲೋಕಸಭಾ ಕ್ಷೇತ್ರ: ಎಪ್ರಿಲ್ 4ರಂದು ಸುಮಲತಾ ಪರ ಎಸ್.ಎಂ. ಕೃಷ್ಣ ಪ್ರಚಾರ title=
File Image

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಪ್ರಚಾರ ಮಾಡುವುದಾಗಿ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.

ನಿನ್ನೆಯಷ್ಟೇ ಕೇಂದ್ರ ಸಚಿವ, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ. ಸದಾನಂದ ಗೌಡರ ಪರ ಪ್ರಚಾರ ಮಾಡಿದ ಅವರು, ಏಪ್ರಿಲ್ 4ರಂದು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ.

ಪಕ್ಷದ ನಿರ್ದೇಶನದಂತೆ ತಾವು ಪ್ರಚಾರ ಮಾಡುತ್ತಿರುವುದಾಗಿ ತಿಳಿಸಿರುವ ಎಸ್.ಎಂ. ಕೃಷ್ಣ, ಮತದಾರರು ಬಿಜೆಪಿಗೆ ಮತ ಹಾಕುವ ಮೂಲಕ ದೇಶದ ಅಭಿವೃದ್ಧಿಗೆ ದಾರಿ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅದು ಮಂಡ್ಯದಿಂದ ಮಾತ್ರ ಎಂದು ತಿಳಿಸಿದ್ದ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಲಭಿಸದ ಕಾರಣ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಬಿಜೆಪಿ ಅವರಿಗೆ ಅಧಿಕೃತವಾಗಿ ಬೆಂಬಲ ಘೋಷಿಸಿದೆ.
 

Trending News