BBMP ಚುನಾವಣೆ ಮೇಲೆ ‘ಕೇಸರಿ ಪಡೆ’ ಕಣ್ಣು: ಚುರುಕಾಗಿರುವಂತೆ ಕಾರ್ಯಕರ್ತರಿಗೆ ಬಿಜೆಪಿ ಕರೆ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ ವಸಲೆ ಶಾಸಕರಿಗೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಅವಕಾಶ ನೀಡಲಾಗಿದೆ. ಆದರೆ ಯಾವುದೇ ಶಾಸಕರು ನೇರವಾಗಿ ಯಾವುದೇ ಅಭ್ಯರ್ಥಿಯನ್ನು ಪ್ರಕಟಿಸುವಂತಿಲ್ಲ.

Written by - Prashobh Devanahalli | Last Updated : Jan 30, 2022, 09:32 AM IST
  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮೇಲೆ ಬಿಜೆಪಿ ಕಣ್ಣು
  • ಚುನಾವಣೆಯಲ್ಲಿ ಬಹುಮತ ಸಾಧಿಸಲು ಪಕ್ಷ ಮತ್ತು ಸರ್ಕಾರದಿಂದ ಸಂಕಲ್ಪ
  • ಬಿಬಿಎಂಪಿ ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನ ಗೆಲ್ಲಲು ಮಾಸ್ಟರ್ ಪ್ಲಾನ್
BBMP ಚುನಾವಣೆ ಮೇಲೆ ‘ಕೇಸರಿ ಪಡೆ’ ಕಣ್ಣು: ಚುರುಕಾಗಿರುವಂತೆ ಕಾರ್ಯಕರ್ತರಿಗೆ ಬಿಜೆಪಿ ಕರೆ title=
ಬಿಬಿಎಂಪಿ ಚುನಾವಣೆ ಮೇಲೆ ಬಿಜೆಪಿ ಕಣ್ಣು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ(BBMP Elections 2022) ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಈ ನಿಟ್ಟಿನಲ್ಲಿ ಸಕಲ ತಯಾರಿ ಮಾಡಿಕೊಳ್ಳುತ್ತಿದೆ. ಮುಂದಿನ 4 ತಿಂಗಳಲ್ಲಿ ಪಾಲಿಕೆ ಚುನಾವಣೆ ಬಹುತೇಕ ಖಚಿತವಾಗಿದ್ದು, ಬಹುಮತ ಸಾಧಿಸಲು ಪಕ್ಷ ಮತ್ತು ಸರ್ಕಾರ ಸಂಕಲ್ಪ ಮಾಡಿದೆ. ಈಗಾಗಲೇ ಚುನಾವಣೆಗಾಗಿ ಸಕಲ ತಯಾರಿ ನಡೆಸಿಕೊಂಡಿರುವ ಬಿಜೆಪಿ(BJP), ಚುನಾವಣೆಗೂ ಮುನ್ನ ಶಾಸಕರು, ಸಂಸದರು, ಮುಖಂಡರ ಅಭಿಪ್ರಾಯ ಸಂಗ್ರಹಿಸುತ್ತಿದೆ.

ಬಿಜೆಪಿ ಮಾಸ್ಟರ್ ಪ್ಲಾನ್

ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ವಿಭಾಗದ ಸದಸ್ಯರ ಜೊತೆ ಈ ಬಗ್ಗೆ ಚರ್ಚೆ ನಡೆಸುತ್ತಿದ್ದು, ಚುನಾವಣೆ(BBMP Elections)ಯಲ್ಲಿ ಅತಿಹೆಚ್ಚು ಸ್ಥಾನ ಗೆಲ್ಲಲು ಸಕಲ ರೀತಿಯಲ್ಲೂ ರೂಪುರೇಷೆ ತಯಾರು ಮಾಡುತ್ತಿದೆ. ಸುಪ್ರೀಂಕೋರ್ಟ್ ಆದೇಶ ಬಂದ ಕೂಡಲೇ ಚುನಾವಣೆ ನಡೆಸಲು ನಿರ್ಧರಿಸಿದ್ದು, ಚುನಾವಣೆಗೂ ಮುನ್ನ ಅಭ್ಯರ್ಥಿ ಆಯ್ಕೆಗೆ ಮಾನದಂಡ ರೂಪಿಸಲು ಪ್ಲಾನ್ ಮಾಡಿದೆ.

ಇದನ್ನೂ ಓದಿ: R Ashok : 'ರಾಜ್ಯದಲ್ಲಿ ಜನವರಿ 31ರಿಂದ ನೈಟ್ ಕರ್ಫ್ಯು ತೆರವು'

ಉತ್ತಮ ಟ್ರ್ಯಾಕ್ ರೆಕಾರ್ಡ್ ಮತ್ತು ಗೆಲ್ಲುವ ಅಭ್ಯರ್ಥಿ ಆಯ್ಕೆ ಮಾಡಲು ಕೇಸರಿ ಪಡೆ ನಿರ್ಧರಿಸಿದೆ. ಪಾರದರ್ಶಕವಾಗಿ ರಾಜ್ಯ ಬಿಜೆಪಿ(BJP)ಯಿಂದಲೇ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಪ್ರತಿಯೊಂದು ವಾರ್ಡುಗಳಿಗೆ ಭೇಟಿ ನೀಡಿ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಲು ನಿರ್ಧಾರ ಮಾಡಲಾಗಿದೆ. ಪ್ರತಿ ವಾರ್ಡಿನಲ್ಲಿ ಒಬ್ಬರಾಗಬಹುದು ಅಥವಾ ಐದು ಜನರಾಗಬಹುದು ಅಭ್ಯರ್ಥಿಗಳ ಪಟ್ಟಿ ಮಾಡಿ ಮಂಡಲದಲ್ಲಿ ನೀಡಬೇಕು ಎಂದು ಸೂಚಿಸಲಾಗಿದೆ. ಮಂಡಲದಲ್ಲಿ ಸ್ಕ್ರೀನಿಂಗ್ ಮಾಡಿ ನಿರ್ಧಾರ ಮಾಡುವುದು, ಬಳಿಕ ಆ ಪಟ್ಟಿಯನ್ನು ರಾಜ್ಯದ ಹೈಕಮಾಂಡ್‌ಗೆ ನೀಡುವುದು ಹೀಗೆ ಅಭ್ಯರ್ಥಿ ಆಯ್ಕೆ ಕಸರತ್ತು ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಶಾಸಕರಿಗೂ ಅವಕಾಶ ನೀಡಲಾಗಿದೆ.

ವಲಸೆ ಶಾಸಕರಿಗೂ ಅವಕಾಶ

ರಾಜ್ಯದಲ್ಲಿ ಬಿಜೆಪಿ ಸರ್ಕಾರ(BJP Government) ಅಧಿಕಾರಕ್ಕೆ ಬರಲು ಕಾರಣರಾದ ವಸಲೆ ಶಾಸಕರಿಗೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಅವಕಾಶ ನೀಡಲಾಗಿದೆ. ಆದರೆ ಯಾವುದೇ ಶಾಸಕರು ನೇರವಾಗಿ ಯಾವುದೇ ಅಭ್ಯರ್ಥಿಯನ್ನು ಪ್ರಕಟಿಸುವಂತಿಲ್ಲ. ಪಕ್ಷ ಮತ್ತು ವಲಸೆ ಶಾಸಕರ ಕ್ಷೇತ್ರದಲ್ಲಿ 50-50 ಅನುಪಾತದಲ್ಲಿ ಅಭ್ಯರ್ಥಿ ಆಯ್ಕೆ ನಡೆಯಲಿದೆ. ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜ್ ಕ್ಷೇತ್ರದಲ್ಲಿ 50:50 ಅನುಪಾತಕ್ಕೆ ಅವಕಾಶ ನೀಡಲಾಗಿದೆ. ವಲಸೆ ಶಾಸಕರು ಕೂಡ ಪ್ರತಿ ವಾರ್ಡಿಗೆ ಕನಿಷ್ಠ ಮೂರು ಜನರ ಹೆಸರು ಸೂಚಿಸಬೇಕು. ಅಭ್ಯರ್ಥಿ ಹೆಸರನ್ನು ಫೈನಲ್ ಮಾಡುವ ಅವಕಾಶ ವಲಸೆ ಶಾಸಕರಿಗ ಇರುವುದಿಲ್ಲ. ಎಲ್ಲಾ ಅಭ್ಯರ್ಥಿಗಳು ಫೈನಲ್ ಆದ ಬಳಿಕ ಪಕ್ಷವೇ ಅಧಿಕೃತವಾಗಿ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಅಂತಾ ತಿಳಿದುಬಂದಿದೆ. ಈ ಬಾರಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿರುವ ಬಿಜೆಪಿ ಚುರುಕಾಗಿರುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದೆ.

ಇದನ್ನೂ ಓದಿ: BC Nagesh : ಸೋಮವಾರದಿಂದ ಎಲ್ಲಾ ಶಾಲಾ ತರಗತಿಗಳು ಆರಂಭ : ಸಚಿವ ನಾಗೇಶ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News