ಆರ್ ಎಸ್ ಎಸ್ ನಾಯಕರೊಂದಿಗೆ ಬಿಜೆಪಿ ಸಮಾಲೋಚನೆ

ಮುಂಬರುವ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ಮುಖಂಡರು ಬೆಂಗಳೂರಿನ ಆರ್ ಎಸ್ ಎಸ್ ಕಚೇರಿ ಕೇಶವಕೃಪಾದಲ್ಲಿಂದು ಸಭೆ ನಡೆಸಲಿದ್ದಾರೆ.  

Last Updated : Aug 30, 2017, 03:49 PM IST
ಆರ್ ಎಸ್ ಎಸ್ ನಾಯಕರೊಂದಿಗೆ ಬಿಜೆಪಿ ಸಮಾಲೋಚನೆ  title=

ಬೆಂಗಳೂರು : ಮುಂಬರುವ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ಮುಖಂಡರು ಬೆಂಗಳೂರಿನ ಆರ್ ಎಸ್ ಎಸ್ ಕಚೇರಿ ಕೇಶವಕೃಪಾದಲ್ಲಿಂದು ಸಭೆ ನಡೆಸಲಿದ್ದಾರೆ.  

ಅಮಿತ್ ಶಾ ರಾಜ್ಯ ಭೇಟಿ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದ್ದು ರಾಜ್ಯದ ಆರ್ ಎಸ್ ಎಸ್ ಪ್ರಮುಖರು ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಸಭೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಅನಂತಕುಮಾರ್, ಸಂಸದರಾದ ನಳೀನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಷಿ, ಶಾಸಕರಾದ ಸಿ.ಟಿ. ರವಿ, ಮಾಜಿ ಶಾಸಕ ಸಿ.ಎಂ. ಉದಾಸಿ, ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಪಾಲ್ಗೊಳ್ಳುವರು.

ಜೊತೆಗೆ ಆರ್ ಎಸ್ ಎಸ್ ನಾಯಕರಾದ ಮುಕುಂದ್, ಸುಧೀರ್, ಗುರುಪ್ರಸಾದ್, ಶಂಕರಾನಂದ, ನರೇಂದ್ರ, ವಿ. ನಾಗರಾಜ್ ಸೇರಿದಂತೆ ರಾಜ್ಯ ಪ್ರಮುಖ ಆರ್ ಎಸ್ ಎಸ್ ನಾಯಕರು ಸಹ ಭಾಗಿಯಾಗಲಿದ್ದಾರೆ.

Trending News