ಬಿಎಸ್‌ವೈ ಪುನರ್ ಜನ್ಮ ಆಗಿದ್ದು ನಾನು ಮಂತ್ರಿ ಆದ್ಮೇಲೆ, ನಿರಾಣಿ ನನ್ನ ಮುಂದೆ ಬಚ್ಚಾ: ಯತ್ನಾಳ್

Basangouda Patil Yatnal: ಮುರುಗೇಶ್ ನಿರಾಣಿ ನನ್ನ ಮುಂದೆ ಬಚ್ಚಾ, ಇಂತಹವರನ್ನು ಸಿಎಂ ಮಾಡಿದರೆ ವಿಧಾನಸೌಧಕ್ಕೆ ಅವಮಾನಕರ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಏಕವಚನದಲ್ಲಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು. 

Written by - Prashobh Devanahalli | Edited by - Chetana Devarmani | Last Updated : Dec 21, 2022, 12:11 PM IST
  • ಮುರುಗೇಶ್ ನಿರಾಣಿ ನನ್ನ ಮುಂದೆ ಬಚ್ಚಾ
  • ಇಂತಹವರನ್ನು ಸಿಎಂ ಮಾಡಿದರೆ ವಿಧಾನಸೌಧಕ್ಕೆ ಅವಮಾನಕರ
  • ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ
ಬಿಎಸ್‌ವೈ ಪುನರ್ ಜನ್ಮ ಆಗಿದ್ದು ನಾನು ಮಂತ್ರಿ ಆದ್ಮೇಲೆ, ನಿರಾಣಿ ನನ್ನ ಮುಂದೆ ಬಚ್ಚಾ: ಯತ್ನಾಳ್  title=
ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ: ಮುರುಗೇಶ್ ನಿರಾಣಿ ನನ್ನ ಮುಂದೆ ಬಚ್ಚಾ, ಇಂತಹವರನ್ನು ಸಿಎಂ ಮಾಡಿದರೆ ವಿಧಾನಸೌಧಕ್ಕೆ ಅವಮಾನಕರ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಏಕವಚನದಲ್ಲಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು. ಸುವರ್ಣ ಸೌಧದಲ್ಲಿ ಕಲಾಪಕ್ಕೂ ಮುನ್ನ ಮಾತಾನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್, ಅವನು ಮಂತ್ರಿ ಹೇಗಾದ ಏನೆಲ್ಲಾ ಪ್ರಲಾಪ ಮಾಡಿದ ಎಲ್ಲಾ ಗೊತ್ತಿದೆ. ಬಾಳ ಮಾತಾಡಿದ್ರೆ ಎಲ್ಲಾ ಬಿಡುಗಡೆ ಮಾಡಬೇಕಾಗುತ್ತೆ. ನಾನು ಕೇಂದ್ರದ ಮಂತ್ರಿ ಆದಾಗ ಯಡಿಯೂರಪ್ಪ ಪಾತ್ರ ಏನು ಇಲ್ಲ. ಯಡಿಯೂರಪ್ಪ ಪುನರ್ ಜನ್ಮ ಆಗಿದ್ದು ನಾನು ಮಂತ್ರಿ ಆದಮೇಲೆ ಎಂದು ಕಿಡಿಕಾರಿದರು.

ಇದನ್ನೂ ಓದಿ : ದೇಶದ ಬಹುತೇಕ ಕ್ರಾಂತಿಕಾರಿಗಳನ್ನು ಬ್ರಿಟಿಷರಿಗೊಪ್ಪಿಸಿದವರೇ ಕಾಂಗ್ರೆಸಿಗರು: ಬಿಜೆಪಿ ಆಕ್ರೋಶ

ನಾನು ಪಾರ್ಟಿ ಕಟ್ಟುವಾಗ ನಿರಾಣಿ ಎಲ್ಲಿದ್ದರು. ನಮ್ಮ‌ ಮನೆಗೆ ಟಿಕೆಟ್ ಕೇಳ್ಕೊಂಡು ಬರ್ತಾ ಇದ್ದ. ಈಗ ಬಹಳ ಮಾತಾಡ್ತಾರೆ. ಅವರು ಹಿಂದು ದೇವತೆಗಳ‌ ಬಗ್ಗೆ ಒಂದು ಆಡಿಯೋ ಬಿಟ್ಟಿದ್ದರು. ಅವರು ನಮಗೀಗ ಹಿಂದು ಸ್ವಾಮೀಜಿ ಬಗ್ಗೆ ಮಾತಾಡಬೇಡ ಅಂತಾರೆ ಎಂದು ಅಸಮಾಧಾನ ಹೊರಹಾಕಿದರು.

ಪಂಚಮಸಾಲಿ 2A ಮೀಸಲಾತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಈಗಲೂ ಸರ್ಕಾರದ ಮೇಲೆ ವಿಶ್ವಾಸ ಇದೆ,ನಾಳೆ ಮೀಸಲಾತಿ ಪ್ರಕಟ ಅಗುತ್ತೆ, ಯಾವುದೇ ಸಂಶಯ ಇಲ್ಲ ಎಂದರು.

ಇದನ್ನೂ ಓದಿ : Imran Khan Audio Viral : ಮಹಿಳೆಯೊಂದಿಗೆ ಇಮ್ರಾನ್ ಖಾನ್ ಸೆಕ್ಸ್ ಟಾಕ್! ಆಡಿಯೋ ವೈರಲ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News