ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಶಾಸಕ ಛಲವಾದಿ ನಾರಾಯಣಸ್ವಾಮಿ ದೊರು ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಸಿದ್ದರಾಮಯ್ಯ ವಿರುದ್ಧ ಜಾತಿನಿಂದನೆ ಆರೋಪ ವಿಚಾರವಾಗಿ, ಬಿಜೆಪಿ ಎಸ್ ಸಿ ಮೊರ್ಚಾ ಪರವಾಗಿ ಛಲವಾದಿ ನಾರಾಯಣಸ್ವಾಮಿ ದೂರು ಸಲ್ಲಿಸಿದ್ದಾರೆ. 


ಇದನ್ನೂ ಓದಿ : ಅಗ್ನಿಪಥ್ ಯೋಜನೆ: ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ? – ಸಿದ್ದರಾಮಯ್ಯ


ದೂರಿನ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ನನ್ನ ವಿರುದ್ಧ ಸಿದ್ದರಾಮಯ್ಯನವರು ಜಾತಿ ನಿಂದನೆ ಮಾಡಿದ್ದಾರೆ. ಸದಾ ನೀವು ಅಸ್ಪೃಶ್ಯರು, ಗುಲಾಮರು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಹೀಗಾಗಿ ಎಸ್ ಸಿ-ಎಸ್ ಟಿ ಕಾಯ್ದೆ ಅನ್ವಯ ಜಾತಿನಿಂದನೆ ದೂರು ಸಲ್ಲಿಸಿದ್ದೇನೆ. ಕೂಡಲೇ ಎಫ್ ಐ ಆರ್ ಮಾಡಬೇಕು. ಸಿದ್ದರಾಮಯ್ಯನವರನ್ನ ಕೂಡಲೇ ಬಂಧಿಸಬೇಕು. ಸಿದ್ದರಾಮಯ್ಯನವರನ್ನ ಬಂಧಿಸದಿದ್ರೆ ನಾನು ಪ್ರತಿಭಟನೆ ಮಾಡ್ತೀನಿ. ಕೂಡಲೇ ಅಟ್ರಾಸಿಟಿ ಕೇಸ್ ಅಡಿ ದೂರು ಹಾಕಬೇಕು ಎಂದು ಒತ್ತಾಯಿಸಿದ್ದಾರೆ. 


ಇದನ್ನೂ ಓದಿ : ಕೋರ್ಟ್ ಆದೇಶದ ಮೇಲೆ ಸರ್ಕಾರದ ಹೆಜ್ಜೆ: ಅಡಕತ್ತರಿಯಲ್ಲಿ ಪಿಎಸ್ಐ ಅಭ್ಯರ್ಥಿಗಳು


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.