ಬಾಗಲಕೋಟ : ಆನೆ ಹೋಗುತ್ತಿರುತ್ತದೆ ಶ್ವಾನ ಬೊಗಳುತ್ತಿರುತ್ತವೆ. ಆನೆ ಯಾವಾಗಲೂ ಉತ್ತರ ಕೊಡೋದಿಲ್ಲ. ಶ್ವಾನಗಳು ಬೊಗಳುತ್ತಿರುತ್ತವೆ ಎಂದು ತೇರದಾಳ ಬಿಜೆಪಿ ಶಾಸಕ ಸಿದ್ದು ಸವದಿ ಆರ್‌ಎಸ್‌ಎಸ್ ಚಡ್ಡಿ ಟೀಕೆ ಮಾಡಿದವರನ್ನು ನಾಯಿಗೆ ಹೋಲಿಸಿ ತಿರುಗೇಟು ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಿದ್ದು ಸವದಿ, ಆರ್‌ಎಸ್‌ಎಸ್ ನವರು ಯಾರಿಗೂ ಉತ್ತರ ಕೊಡೋದಕ್ಕೆ ಹೋಗೋದಿಲ್ಲ. ರಾಷ್ಟ್ರಾಭಿಮಾನಿಗಳ ಸಂಘ ಆರ್‌ಎಸ್‌ಎಸ್, ಸಂಘದ ಸಂಸ್ಕಾರ ಪಡೆದುಕೊಂಡವರು ಎಲ್ಲ ಕ್ಷೇತ್ರದಲ್ಲಿ ಇದಾರೆ. ಅದಕ್ಕಾಗಿ ದೇಶ ಇಂದು ಸುಭದ್ರವಾಗಿದೆ. ಮೋದಿ, ಅಮಿತ್ ಶಾ, ಯಡಿಯೂರಪ್ಪ ನಂತಹ  ನಾಯಕರು ಆರ್‌ಎಸ್‌ಎಸ್ ಸಂಸ್ಕಾರ ಪಡೆದುಕೊಂಡವರು. ರಾಜಕೀಯ ಕ್ಷೇತ್ರದ ಶುದ್ದೀಕರಣಕ್ಕಾಗಿ ಸಂಘ ಅನೇಕ ಮುಖಂಡರನ್ನು ರಾಜಕೀಯ ಕ್ಷೇತ್ರಕ್ಕೆ ಕಳಿಸಿದೆ. ಅಂತವರ ಬಗ್ಗೆ ಮಾತಾಡ್ತಾರೆಂದರೆ ಅವರಿಗೆ ಸಂಘದ ಬಗ್ಗೆ ಏನೂ ಗೊತ್ತಿಲ್ಲ.. ಬಹುಶಃ ಅವರು ಮೂಗಿನ ನೇರಕ್ಕೆ ಮಾತಾಡ್ತಾರೆ. ಸಂಘ ಇದೆ ಅಂತ ಅವರು ಸುಭದ್ರವಾಗಿ ದೇಶದಲ್ಲಿದ್ದಾರೆ. ಸಂಘ ಇರದೆ ಇದ್ರೆ ಇವರು ಎಲ್ಲಿ ಇರುತ್ತಿದ್ರೊ ಗೊತ್ತಿಲ್ಲ. ಘದ ಬಗ್ಗೆ ತಿಳಿದುಕೊಂಡು ಮಾತಾಡಿದ್ರೆ ಒಳ್ಳೆಯದು ಎಂದರು. 


ಇದನ್ನೂ ಓದಿ : Mukhyamantri Chandru : ಕೈಗೆ ಗುಡ್ ಬೈ ಹೇಳಿದ್ದ ಮುಖ್ಯಮಂತ್ರಿ ಚಂದ್ರು ನಾಳೆ AAP ಸೇರ್ಪಡೆ!


ಚಡ್ಡಿಯನ್ನು ಕೇವಲ ಸಂಘದವರು ಮಾತ್ರ ಹಾಕಿಕೊಳ್ಳುತ್ತಿರಲಿಲ್ಲ. ಮೊದಲು ಪೊಲೀಸರು, ಮಿಲಿಟರಿ ಒಳಗೂ ಚಡ್ಡಿಗಳಿದ್ದಾವೆ. ಅವರೆಲ್ಲರಿಗೂ ನೀವು ಅವಮಾನ ಮಾಡಿದ ಹಾಗೆ.. ನೀವು ದೇಶದ ಸಂಸ್ಕೃತಿ ಅವಮಾನ  ಮಾಡೋದಕ್ಕೆ ಮಾತ್ರ ಬಾಯಿ ತೆರೆಯುತ್ತೀರಿ. ಭಯೋತ್ಪಾದಕರು, ಉಗ್ರಗಾಮಿಗಳ ಬಗ್ಗೆ ಮಾತಾಡೋದಕ್ಕೆ ನಿಮಗೆ ಧೈರ್ಯ ಬರುವುದಿಲ್ಲ. ಅದಕ್ಕೆ ನಾನು ಭಯೋತ್ಪಾದಕರ, ಉಗ್ರಗಾಮಿಗಳ ಸಂತಾನ ಕಾಗ್ರೆಸ್ ಅಂತ ಹೇಳಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ