ರಾಮ, ಧರ್ಮದ ಹೆಸರಲ್ಲಿ ಬಿಜೆಪಿ ರಾಜಕೀಯ: ಸಚಿವ ತಂಗಡಗಿ ವಾಗ್ದಾಳಿ

Shivraj Thangadagi On Ram Mandir: ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಸಚಿವ‌ ಶಿವರಾಜ್ ತಂಗಡಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  

Written by - Prashobh Devanahalli | Last Updated : Jan 23, 2024, 04:09 PM IST
  • ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ
  • ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ
  • ಸಚಿವ‌ ಶಿವರಾಜ್ ತಂಗಡಗಿ ಬಿಜೆಪಿ ವಿರುದ್ಧ ವಾಗ್ದಾಳಿ
ರಾಮ, ಧರ್ಮದ ಹೆಸರಲ್ಲಿ ಬಿಜೆಪಿ ರಾಜಕೀಯ: ಸಚಿವ ತಂಗಡಗಿ ವಾಗ್ದಾಳಿ title=

ಉಡುಪಿ: ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ. ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರು. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉಡುಪಿ ಜಿಲ್ಲೆಗೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ. ನಾವು ಪ್ರತಿದಿನ ಎದ್ದು ದೇವರ ಮನೆಯಲ್ಲಿ ನಮಸ್ಕಾರ ಮಾಡಿಯೇ ಮನೆಯಿಂದ ಹೊರಡುವುದು. ನಾನು ಕಿಷ್ಕಿಂದೆ ಜಿಲ್ಲೆಯಲ್ಲಿರುವವನು. ಪ್ರತಿ ವರ್ಷ ಆಂಜನೇಯ ಮಾಲೆ ಹಾಕುತ್ತೇನೆ. ಭಕ್ತಿ ಹಾಗೂ ಲೋಕ ಕಲ್ಯಾಣಕ್ಕಾಗಿ ಮಾಲೆ ಹಾಕುತ್ತೇನೆ. ಈ ರೀತಿ ದೇವರ ಹೆಸರಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಛೇಡಿಸಿದರು. 

ಇದನ್ನೂ ಓದಿ: ಅಕ್ಕ ಅಕ್ಕ ಎಂದುಕೊಂಡೆ ಕೊಂದೆ ಬಿಟ್ಟಾ..? ಗಂಡ ಹೇಳಿದ ಕೊಲೆ ಕಥೆ!

ಚುನಾವಣೆ ಬಂದಾಗ ಬಿಜೆಪಿಗೆ ಧರ್ಮ, ಮಸೀದಿ, ಪಾಕಿಸ್ತಾನ ನೆನಪಾಗುತ್ತದೆ. ಬಿಜೆಪಿಗೆ ಅಭಿವೃದ್ಧಿ ಮತ್ತು ಬಡವರ ಬಗ್ಗೆ ಚಿಂತನೆ ಬೇಕಾಗಿಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಕಿಡಿಕಾರಿದರು. 

ಮತ್ತೊಬ್ಬರ ಹೆಗಲ ಮೇಲೆ ಬಂದೂಕು ಇಟ್ಟು ಬಿಜೆಪಿ ದೇಶ ಆಳಿದೆ. ಕರ್ನಾಟಕದಲ್ಲಿ ಆದ ಪರಿಸ್ಥಿತಿ ದೇಶದಲ್ಲೂ ಬಿಜೆಪಿಗೆ ಬರಲಿದೆ ಎಂದು ಹೇಳಿದರು.‌

ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ವಿಚಾರದ ಬಗ್ಗೆ ಪಕ್ಷದ ಅಧ್ಯಕ್ಷರು,  ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅಧಿಕಾರ ನೀಡುವಾಗ ಸಮನಾಗಿ ಜಿಲ್ಲಾವಾರು ಹಂಚಿಕೆ ಮಾಡಬೇಕಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕನ್ನಡಕ್ಕೆ ಶಾಸ್ತ್ರೀಯ  ಮಾನ್ಯತೆ ಸಿಕ್ಕರೂ ಅನುದಾನ ಸಿಗುತ್ತಿಲ್ಲ ಎಂಬ ಪ್ರಶ್ನೆಗೆ, ಈ ತಿಂಗಳ ಅಂತ್ಯಕ್ಕೆ ನಾನು ದೆಹಲಿಗೆ ಭೇಟಿ ನೀಡಲಿದ್ದು, ಕೇಂದ್ರ  ಸಂಸ್ಕೃತಿ ಖಾತೆ ಸಚಿವರನ್ನು ಭೇಟಿ ಮಾಡಿ‌ ಈ ಬಗ್ಗೆ ಮನವಿ ಮಾಡುತ್ತೇನೆ ಎಂದರು. 

ಇದನ್ನೂ ಓದಿ: ರಾಮನನ್ನೇ ಇಬ್ಭಾಗ ಮಾಡಲು ಹೊರಟಿದೆ ಕಾಂಗ್ರೆಸ್: ಸಚಿವ ಜೋಶಿ ಆಕ್ರೋಶ 

ತಮಿಳುನಾಡಿನಲ್ಲಿ ಅಲ್ಲಿನ‌ ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಿ ಕೇಂದ್ರ ಸರ್ಕಾರ ವಿಶೇಷ‌ ಅನುದಾನ ನೀಡುತ್ತಿದೆ. ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ಅನ್ಯಾಯವೆಸಗುತ್ತಿದೆ ಎಂದು ದೂರಿದರು. 

ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿಯ ಒಬ್ಬ ಸಂಸದರು ಕೂಡ ಧನಿ ಎತ್ತುವುದಿಲ್ಲ. ಪ್ರಧಾನಿ ಎದುರು ನಿಂತು ಮಾತನಾಡುವ ಧೈರ್ಯ ಕೂಡ 25 ಸಂಸದರಿಗೆ ಇಲ್ಲ. ಪ್ರಧಾನಿ ಕಂಡರೆ ರಾಜ್ಯದ ಸಂಸದರಿಗೆ ಭಯ ಎಂದು ಕುಟುಕಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News