ಶಿವಮೊಗ್ಗ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಮುಂದಿನ ವರ್ಷಗಳಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಮನಗಂಡಿದ್ದಾರೆ. ಅವರು ಭಯದಲ್ಲಿ ಅತಂತ್ರ ಸ್ಥಿತಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.


COMMERCIAL BREAK
SCROLL TO CONTINUE READING

ಬಿಜೆಪಿ ಕಾರ್ಯಕಾರಣಿ ಹಾಗೂ ವಿಶೇಷ ಸಭೆ ಇರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ(B.S.Yediyurappa) ಅವರು ರಾಜಿನಾಮೆ ನೀಡುವುದು ಒಳ್ಳೆಯದು ಎಂದು, ಡಿ.ಕೆ. ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.


B.S.Yediyurappa: ಬಿಜೆಪಿ ಕೋರ್ ಕಮಿಟಿ ಸಭೆ ಹಿನ್ನೆಲೆ ಸಿಎಂಗೆ ಶುರುವಾಗಿದೆ ತಲೆನೋವು!


ಇಂದಿನ ಕಾರ್ಯಕಾರಿಣಿ ಸಭೆಯಲ್ಲಿ ಲವ್ ಜಿಹಾದ್ ಬಗ್ಗೆ ಚರ್ಚಿಸಲಾಗುವುದು. ನಾಳಿನ ವಿಶೇಷ ಸಭೆಯಲ್ಲೂ ಚರ್ಚೆ ನಡೆಸಲಾಗುವುದು. ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಕರ್ನಾಟಕದಲ್ಲಿ ಕನ್ನಡ ಧ್ವಜ ಹಾರಿಸುವವರ ಮೇಲೆ ದಾಳಿ ನಡೆಯುತ್ತದೆ ಎಂದರೆ ಹೆಂಗೆ? ಕುಮಾರಸ್ವಾಮಿ ಪ್ರಶ್ನೆ


ಶಿವಮೊಗ್ಗಕ್ಕೆ ಆಗಮಿಸಿದ ನಳಿನ್ ಕುಮಾರ್ ಕಟೀಲ್ ಅವರಿಗೆ ಸಕ್ರೆಬೈಲು ಆನೆ ಬಿಡಾರದ ಬಳಿ ಭವ್ಯ ಸ್ವಾಗತ ಕೋರಲಾಯಿತು. ಆನೆಯ ಮೂಲಕ ನಳಿನ್ ಕುಮಾರ್ ಕಟೀಲ್ ಅವರಿಗೆ ಹೂವಿನ ಹಾರ ಹಾಕಿ ಸ್ವಾಗತ ಕೋರಲಾಯಿತು. ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ ಉಪಸ್ಥಿತರಿದ್ದರು.


Good News : ಜನವರಿ 4ರಿಂದ Mysore-Bangalore ಪ್ಯಾಸೆಂಜರ್ ರೈಲು ಸೇವೆ ಆರಂಭ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ


Android Link - https://bit.ly/3hDyh4G


iOS Link - https://apple.co/3loQYe


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.