ಬೆಂಗಳೂರು: ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆಹೊತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಬಿಜೆಪಿ ಆಗ್ರಹಿಸಿದೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಂತೂ ಆಟಕ್ಕುಂಟು ಲೆಕ್ಕಕ್ಕಿಲ್ಲ. ತಾವೊಬ್ಬ ಗೃಹ ಸಚಿವ ಎಂಬುದನ್ನೇ ಮಿನಿಸ್ಟರ್‌ ಸಾಹೇಬ್ರು ಮರೆತಂತಿದೆ’ ಎಂದು ಟೀಕಿಸಿದೆ.


COMMERCIAL BREAK
SCROLL TO CONTINUE READING

‘ಯತ್ರ ನಾರ್ಯಸ್ತು ಪೂಜ್ಯಂತೆ ತತ್ರ ರಮಂತೆ ದೇವತಾಃ’ ಎಲ್ಲಿ ನಾರಿಯನ್ನು ಪೂಜಿಸಲಾಗುವುದೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ ಎಂದು ಹೇಳಿದೆ ನಮ್ಮ ಸನಾತನ ಪರಂಪರೆ.  ಆದರೆ ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರವು ಮಹಿಳೆಯರನ್ನು ಪೂಜಿಸುವುದಿರಲಿ, ರಾಜ್ಯದ ಮಹಿಳೆಯರಿಗೆ ಸೂಕ್ತ ರಕ್ಷಣೆಯನ್ನು ಸಹ ನೀಡಲು ಸಂಪೂರ್ಣ ವಿಫಲ. ಕೇವಲ ತಾಲಿಬಾನ್‌ನಂತಹ ಪ್ರದೇಶದಲ್ಲಿ ನಡೆಯುತ್ತಿದ್ದ ಘಟನೆಗಳನ್ನು ಕರ್ನಾಟಕಕ್ಕೆ ವಿಸ್ತರಿದ್ದೇ ಕಾಂಗ್ರೆಸ್‌ನ  ಆರೂವರೆ ತಿಂಗಳ ಆಡಳಿತದ ಸಾಧನೆ’ ಎಂದು ಬಿಜೆಪಿ ಕಿಡಿಕಾರಿದೆ.


‘ಬೆಳಗಾವಿಯ ವಂಟಮೂರಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ನಡೆದ ಅಮಾನುಷ ಘಟನೆ ಅತ್ಯಂತ ಹೇಯ ಹಾಗೂ ನಾಗರೀಕ ಸಮಾಜವೇ ತಲೆ ತಗ್ಗಿಸುವಂತಹದ್ದು. ಆದರೆ ಈ ಘಟನೆ ನಡೆದ ಮೇಲೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಈ ಪ್ರಕರಣದಲ್ಲಿ ನಡೆದುಕೊಂಡ ರೀತಿ ಮಾತ್ರ ಕಾಂಗ್ರೆಸ್‌ನ ಮಹಿಳಾ ವಿರೋಧಿ ನೀತಿಯ ಅಸಲಿ ಮುಖವಾಡವನ್ನು ಬಿಚ್ಟಿಟ್ಟಿದೆ. ವಂಟಮೂರಿ ಘಟನೆ ನಡೆದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಾದಿಯಾಗಿ, ಸಚಿವರು ಹಾಗೂ ಶಾಸಕರು ಬೆಳಗಾವಿಯಲ್ಲಿಯೇ ಬೀಡು ಬಿಟ್ಟಿದ್ದರು. ಆದರೆ ಸೌಜನ್ಯಕ್ಕೂ ಕೂಗಳತೆ ದೂರದಲ್ಲಿ ಸಂತ್ರಸ್ತೆ ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಯ ಆರೋಗ್ಯ ವಿಚಾರಿಸಲಿಲ್ಲ, ಸರ್ಕಾರ ನಿಮ್ಮ ಜೊತೆ ಇದೆ ಎಂದು ಧೈರ್ಯ ತುಂಬಲಿಲ್ಲ. ಇದು ಕಾಂಗ್ರೆಸ್‌ನ ಅಸಲಿ ಮಹಿಳಾ ಸಬಲೀಕರಣ’ವೆಂದು ಬಿಜೆಪಿ ವ್ಯಂಗ್ಯವಾಡಿದೆ.


ಉದ್ಯಮಿಗೆ ವಂಚಿಸಲು ಯತ್ನಿಸಿದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್!


‘ಇನ್ನು ಬೆಳಗಾವಿಯ ವಂಟಮೂರಿ ಗ್ರಾಮ ಬರುವುದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ. ಅಲ್ಲಿನ ಸ್ಥಳೀಯ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ. ಸ್ವಕ್ಷೇತ್ರದಲ್ಲಿ ಕಂಡು ಕೇಳರಿಯದಂತಹ ಭೀಭತ್ಸ ಘಟನೆ ನಡೆದರೂ, ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಕುರುಡ-ಕಿವುಡ-ಮೂಗನಂತೆ ವರ್ತಿಸುತ್ತಿರುವುದು ಸಂತ್ರಸ್ತೆಗೆ ಹಾಗೂ ರಾಜ್ಯದ ಮಹಿಳಾ ಸಮುದಾಯಕ್ಕೆ ಮಾಡುತ್ತಿರುವ ಮಹಾ ಅನ್ಯಾಯ. ಇನ್ನು ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರು ಸದನದಲ್ಲಿಯೂ ನಾಪತ್ತೆ, ಸಂತ್ರಸ್ತೆಯ ಆರೋಗ್ಯ ವಿಚಾರಿಸುವಲ್ಲಿಯೂ ನಾಪತ್ತೆ. ಇದು ಕಾಂಗ್ರೆಸ್‌ ಸರ್ಕಾರದ  ಆಡಳಿತದ ಸ್ಯಾಂಪಲ್.‌ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ಅಮಾನುಷ ಘಟನೆ ನಡೆದಿದ್ದರೂ ಸಹ ಕಾಂಗ್ರೆಸ್‌ ಸಂಪೂರ್ಣ ಮೌನಕ್ಕೆ ಶರಣಾಗಿರುವುದನ್ನು ನೋಡಿದರೆ, ಕಾಂಗ್ರೆಸ್‌ ಆಡಳಿತವನ್ನು ದುರುಪಯೋಗಪಡಿಸಿಕೊಂಡು ಅಪರಾಧಿಗಳನ್ನು ರಕ್ಷಿಸುವ ಕೆಲಸಕ್ಕೆ ಮುಂದಾಗಿದೆಯಾ ಎಂಬ ಅನುಮಾನ ಮೂಡುವುದಂತು ನಿಶ್ಚಿತ’ವೆಂದು ಬಿಜೆಪಿ ಕುಟುಕಿದೆ.


ಮಹಿಳೆಗೆ ನ್ಯಾಯ ಸಿಗುವವರೆಗೂ ಬಿಜೆಪಿ ಈ ಬಗ್ಗೆ ರಾಜ್ಯಾದ್ಯಂತ ಹೋರಾಟ ನಡೆಸಲಿದೆ’ ಎಂದು ಹೇಳಿದೆ.


ಇದನ್ನೂ ಓದಿ: ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣ: ಸಂತ್ರಸ್ತೆ ಭೇಟಿಯಾದ ರಾಷ್ಟ್ರ ಬಿಜೆಪಿ ನಿಯೋಗ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.