Congress Fails Karnataka: ಬೀದರ್ನಲ್ಲಿ ಜನಿವಾರ ಧರಿಸಿದ ಕಾರಣಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಘಟನೆ ಭಾರೀ ವಿವಾದ ಹಾಗೂ ವಿರೋಧಕ್ಕೆ ಕಾರಣವಾಗಿದೆ. ಇದು ರಾಜಕೀಯ ತಿರುವು ಪಡೆದುಕೊಂಡಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಬಿಜೆಪಿ, ಭಾಷಣದಲ್ಲಿ ಬೀಗುತ್ತಿದ್ದ ಧಾರ್ಮಿಕ ಸ್ವಾತಂತ್ರ್ಯ ಇದೇನಾ? ಎಂದು ಟೀಕಿಸಿದೆ.
ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ʼಸಂವಿಧಾನವನ್ನು ತಮಗೆ ಮನಸ್ಸಿಗೆ ಬಂದ ಹಾಗೆ ತಿರುಚುವುದರಲ್ಲಿ ಕಾಂಗ್ರೆಸ್ಸಿಗರು ಸಿದ್ದಹಸ್ತರುʼ ಎಂದು ಕಿಡಿಕಾರಿದೆ. ʼಈ ಹಿಂದೆ ಶಾಲಾ- ಕಾಲೇಜುಗಳಲ್ಲಿ ಎಲ್ಲರೂ ಸಮಾನರು ಎಂಬ ನಿಟ್ಟಿನಲ್ಲಿ ವಸ್ತ್ರಸಂಹಿತೆಯ ಅಡಿಯಲ್ಲಿ ಸಮವಸ್ತ್ರವನ್ನು ಜಾರಿಗೆ ತಂದಿದ್ದೆ ನಾವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದರು. ಆದರೆ ಯಾವಾಗ ಮುಸ್ಲಿಂ ಸಮುದಾಯದ ಕೆಲವು ವಿದ್ಯಾರ್ಥಿನಿಯರು ಶಾಲಾ-ಕಾಲೇಜುಗಳಲ್ಲಿ ಸಮಾನತೆಗೆ ವಿರುದ್ಧವಾಗಿ ಹಿಜಾಬ್ ಧರಿಸಿ ಬರುತ್ತಿರುವುದನ್ನು ಪ್ರಶ್ನಿಸಿದರೆ, ಅದಕ್ಕೆ ಕಾಂಗ್ರೆಸ್ಸಿಗರು ಇದು ಬಾಬಾ ಸಾಹೇಬರು ನಮಗೆ ನೀಡಿರುವ ಧಾರ್ಮಿಕ ಸ್ವಾತಂತ್ರ್ಯಎಂದು ತೇಪೆ ಹಚ್ಚಿದರು!! ಹೇಗಿದೆ ನೋಡಿ, ಕಾಂಗ್ರೆಸ್ಸಿಗರ ಇಬ್ಬಂದಿತನ!!ʼ ಎಂದು ಬಿಜೆಪಿ ಕುಟುಕಿದೆ.
ಇದನ್ನೂ ಓದಿ: ತುಮಕೂರಿನಲ್ಲಿ ನಿಲ್ಲದ ಸಾರಿಗೆ ಅಧಿಕಾರಿಗಳ ಉಡಾಫೆ ನಡೆ
ಸಂವಿಧಾನವನ್ನು ತಮಗೆ ಮನಸ್ಸಿಗೆ ಬಂದ ಹಾಗೆ ತಿರುಚುವುದರಲ್ಲಿ ಕಾಂಗ್ರೆಸ್ಸಿಗರು ಸಿದ್ದಹಸ್ತರು!!
ಈ ಹಿಂದೆ ಶಾಲಾ- ಕಾಲೇಜುಗಳಲ್ಲಿ ಎಲ್ಲರೂ ಸಮಾನರು ಎಂಬ ನಿಟ್ಟಿನಲ್ಲಿ ವಸ್ತ್ರಸಂಹಿತೆಯ ಅಡಿಯಲ್ಲಿ ಸಮವಸ್ತ್ರವನ್ನು ಜಾರಿಗೆ ತಂದಿದ್ದೆ ನಾವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದರು.
ಆದರೆ ಯಾವಾಗ ಮುಸ್ಲಿಂ ಸಮುದಾಯದ ಕೆಲವು…
— BJP Karnataka (@BJP4Karnataka) April 19, 2025
ʼಕೆಪಿಎಸ್ಸಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಮಹಿಳೆಯೊಬ್ಬರ ಮಾಂಗಲ್ಯಸರವನ್ನು ತೆಗೆಸಿದ್ದರು. ಈ ಬಗ್ಗೆ ಮಾಧ್ಯಮದವರು ಕಾಂಗ್ರೆಸ್ಸಿಗರನ್ನು ಪ್ರಶ್ನಿಸಿದರೆ, “ಏಯ್ ಅದು ರೂಲ್ಸು ಕಣ್ರಿ” ಎಂದು ಅಬ್ಬರಿಸಿದ್ದರು. ಆದರೆ ಅದೇ ಮಾಧ್ಯಮದವರು ಹಾಗಾದರೆ ರೂಲ್ಸ್ ಪ್ರಕಾರ ಹಿಜಾಬ್ ಅನ್ನು ಏಕೆ ತೆಗೆಸಲಿಲ್ಲವೆಂದು ಮರು ಪ್ರಶ್ನೆ ಹಾಕಿದರೆ ಅದಕ್ಕೆ ಕಾಂಗ್ರೆಸ್ಸಿಗರದ್ದು “ನೋ ಕಾಮೆಂಟ್ಸ್..ನೋ ಕಾಮೆಂಟ್ಸ್”. ಈಗ ಬೀದರ್ನಲ್ಲಿ ಸಿಇಟಿ ಪರೀಕ್ಷೆಗೆ ಜನಿವಾರ ಧರಿಸಿ ಬಂದಿದ್ದ ಎಂಬ ಏಕೈಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಿಲ್ಲ, ಸಾಲದ್ದಕ್ಕೆ ಜನಿವಾರವನ್ನು ಕಟ್ ಮಾಡಿಕೊಂಡು ಬಾ, ಹಾಗಿದ್ದರೆ ಮಾತ್ರ ಪರೀಕ್ಷೆ ಬರೆಯಲು ನಿನಗೆ ಅವಕಾಶ ನೀಡುತ್ತೇವೆಂದು ಅಲ್ಲಿನ ಸಿಬ್ಬಂದಿ ಹೇಳಿದರು ಎಂದು ಪರೀಕ್ಷೆ ವಂಚಿತ ವಿದ್ಯಾರ್ಥಿ ಅಳಲು ತೋಡಿಕೊಂಡಿದ್ದಾನೆʼ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಸಿಇಟಿ ಪರೀಕ್ಷೆಯ ಹಾಲ್ ಟಿಕೆಟ್ ನಲ್ಲಿ ಆಗಲಿ ಅಥವಾ ಇತರ ಯಾವುದೇ ಮಾರ್ಗಸೂಚಿಯಲ್ಲಿ ಜನಿವಾರ ಧರಿಸಬಾರದು ಎಂದು ಎಲ್ಲಿಯೂ ಸಹ ಉಲ್ಲೇಖವಾಗಿರಲಿಲ್ಲ. ಹಾಗಿದ್ದ ಮೇಲೆ ಜನಿವಾರ ಧರಿಸಿದ ವಿದ್ಯಾರ್ಥಿಗೆ ಪರೀಕ್ಷೆ ಕುಳಿತುಕೊಳ್ಳಲು ಅವಕಾಶ ನೀಡದಿರುವುದು ಏಕೆ..ಈ ಅನ್ಯಾಯಕ್ಕೆ ಯಾರು ಹೊಣೆ..??
ದೂರದ ಉತ್ತರಪ್ರದೇಶದಲ್ಲಿ ದನಗಳ್ಳನ ಮೇಲೆ…
— BJP Karnataka (@BJP4Karnataka) April 19, 2025
ʼಸಿಇಟಿ ಪರೀಕ್ಷೆಯ ಹಾಲ್ ಟಿಕೆಟ್ನಲ್ಲಿ ಆಗಲಿ ಅಥವಾ ಇತರ ಯಾವುದೇ ಮಾರ್ಗಸೂಚಿಯಲ್ಲಿ ಜನಿವಾರ ಧರಿಸಬಾರದು ಎಂದು ಎಲ್ಲಿಯೂ ಸಹ ಉಲ್ಲೇಖವಾಗಿರಲಿಲ್ಲ. ಹಾಗಿದ್ದ ಮೇಲೆ ಜನಿವಾರ ಧರಿಸಿದ ವಿದ್ಯಾರ್ಥಿಗೆ ಪರೀಕ್ಷೆ ಕುಳಿತುಕೊಳ್ಳಲು ಅವಕಾಶ ನೀಡದಿರುವುದು ಏಕೆ.. ಈ ಅನ್ಯಾಯಕ್ಕೆ ಯಾರು ಹೊಣೆ..?? ದೂರದ ಉತ್ತರಪ್ರದೇಶದಲ್ಲಿ ದನಗಳ್ಳನ ಮೇಲೆ ಹಲ್ಲೆಯಾದರೆ ತಮ್ಮ ಮನಸ್ಸಿಗೆ ಅಪಾರ ದುಃಖವಾಗಿದೆ ಎಂದು ಪುಟಗಟ್ಟಲೆ ಟ್ವೀಟಿಸುವ ಸಿಎಂ ಸಿದ್ದರಾಮಯ್ಯನವರು, ತಮ್ಮದೆ ಆಡಳಿತವಿರುವ ರಾಜ್ಯದಲ್ಲಿ ವಿದ್ಯಾರ್ಥಿಯೊಬ್ಬನ ಉಜ್ವಲ ಭವಿಷ್ಯವನ್ನು ಮಂಕಾಗಿಸಿರುವ ಘಟನೆಯ ಬಗ್ಗೆ ಏಕೆ ಇದುವರೆಗೂ ಬಾಯ್ಬಿಟ್ಟಿಲ್ಲ..?? ಸಂವಿಧಾನದ ಬಗ್ಗೆ ಮಾರುದ್ದ ಭಾಷಣ ಬಿಗಿಯುವ ಕಾಂಗ್ರೆಸ್ಸಿಗರಿಗೆ ಜನಿವಾರ ಧರಿಸಿದ ವಿದ್ಯಾರ್ಥಿಯ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿರುವುದು ಕಣ್ಣಿಗೆ ಕಾಣಿಸುತ್ತಿಲ್ಲವೇ..!! ಉತ್ತರಿಸಿ ಕಾಂಗ್ರೆಸ್ ನಾಯಕರೇ ..??ʼ ಎಂದು ಬಿಜೆಪಿ ಪ್ರಶ್ನಿಸಿದೆ.
ಇದನ್ನೂ ಓದಿ: ಬಳ್ಳಾರಿ ಜಿಲ್ಲೆಯಾದ್ಯಂತ ಸುರಿದ ಧಾರಾಕಾರ ಮಳೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.