ಕಾಂಗ್ರೆಸ್ ಸರ್ಕಾರದಿಂದ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ: ಯಾವ ಪುರುಷಾರ್ಥಕ್ಕೆ ಎಂದು ಬಿಜೆಪಿ ಆಕ್ರೋಶ

ರಾಜ್ಯದ ಭವಿಷ್ಯವನ್ನು ಅಡಮಾನ ಇಟ್ಟು ಕಾಂಗ್ರೆಸ್ ನೀಡಿದ ಅವೈಜ್ಞಾನಿಕ ಯೋಜನೆಗಳಿಂದ ಇಂದು ಕರ್ನಾಟಕದಾದ್ಯಂತ ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಅನುಭವಿಸಬೇಕಾಗಿ ಬಂದಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

Written by - Puttaraj K Alur | Last Updated : Aug 9, 2023, 02:23 PM IST
  • ‘ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು’ ಎಂಬ ವರಸೆಯನ್ನು #ATMSarkara ತೋರುತ್ತಿದೆ
  • ಶಾಲಾ ಮಕ್ಕಳ ಬಿಸಿಯೂಟಕ್ಕೆ ಸರಿಯಾಗಿ ತರಕಾರಿಗಳನ್ನು ಪೂರೈಸುತ್ತಿಲ್ಲ, ಅಭಿವೃದ್ಧಿಗೆ ಬೊಕ್ಕಸದಲ್ಲಿ ಹಣವಿಲ್ಲ
  • ಯಾವ ಪುರುಷಾರ್ಥಕ್ಕೆ ಜನರ ತೆರಿಗೆ ಹಣದಲ್ಲಿ ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದೀರಿ..?
ಕಾಂಗ್ರೆಸ್ ಸರ್ಕಾರದಿಂದ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ: ಯಾವ ಪುರುಷಾರ್ಥಕ್ಕೆ ಎಂದು ಬಿಜೆಪಿ ಆಕ್ರೋಶ title=
ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ!

ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ ನೀಡಲಾಗುವುದು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್‌ ಸುಳಿವು ನೀಡಿದ್ದಾರೆ. ಇದೇ ವಿಚಾರವಾಗಿ ಗುರುವಾರ ಟ್ವೀಟ್ ಮಾಡಿರುವ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

‘ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು" ಎಂಬ ವರಸೆಯನ್ನು #ATMSarkara ತೋರುತ್ತಿದೆ. ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡುತ್ತಿಲ್ಲ, ಶಾಲಾ ಮಕ್ಕಳ ಬಿಸಿಯೂಟಕ್ಕೆ ಸರಿಯಾಗಿ ತರಕಾರಿಗಳನ್ನು ಪೂರೈಸುತ್ತಿಲ್ಲ, ಅಭಿವೃದ್ಧಿಗೆ ಬೊಕ್ಕಸದಲ್ಲಿ ಹಣವಿಲ್ಲ ಎಂದು ಉಪ ಮುಖ್ಯಮಂತ್ರಿಗಳೇ ಸ್ಪಷ್ಟೀಕರಣ ನೀಡಿದ್ದಾರೆ. ರಾಜ್ಯ ಇಷ್ಟೆಲ್ಲಾ ಸಂಕಷ್ಟಗಳನ್ನು ಎದುರಿಸುತ್ತಿದ್ದರೂ, ಯಾವ ಪುರುಷಾರ್ಥಕ್ಕೆ ಜನರ ತೆರಿಗೆ ಹಣದಲ್ಲಿ ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದೀರಿ..?’ ಎಂದು ಬಿಜೆಪಿ ಪ್ರಶ್ನಿಸಿದೆ.

ಇದನ್ನೂ ಓದಿ: ಅನ್ನದಾತರ ಕೈಹಿಡಿದ ಕಪ್ಪು ಬಂಗಾರ.. ಕಾಳುಮೆಣಸಿಗೆ ಡಿಮ್ಯಾಂಡಪ್ಪೋ..ಡಿಮ್ಯಾಂಡ್‌..!

‘ರಾಜ್ಯದ ಭವಿಷ್ಯವನ್ನು ಅಡಮಾನ ಇಟ್ಟು ಕಾಂಗ್ರೆಸ್ ನೀಡಿದ ಅವೈಜ್ಞಾನಿಕ ಯೋಜನೆಗಳಿಂದ ಇಂದು ಕರ್ನಾಟಕದಾದ್ಯಂತ ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಅನುಭವಿಸಬೇಕಾಗಿ ಬಂದಿದೆ. ಅಂಗನವಾಡಿ ಮಕ್ಕಳಿಗೆ ತರಕಾರಿಗೂ ದುಡ್ಡು ಕೊಡದ #ATMSarkara ಅಧಿಕಾರಕ್ಕೆ ಬಂದ ಮೇಲೆ ಕಟ್ಟಡಗಳ ಬಾಡಿಗೆಯೇ ನೀಡಿಲ್ಲ. ಅಲ್ಲದೆ ಮಾತೃವಂದನೆ ಕಾರ್ಯಕ್ರಮದಡಿ ಬಾಣಂತಿಯರಿಗೆ ಸಿಗಬೇಕಾದ ₹5,000 ನೀಡಲು ಸಿಎಂ ಸಿದ್ದರಾಮಯ್ಯನವರ ಅಸಮರ್ಥ ಸರ್ಕಾರ ಹೆಣಗಾಡುತ್ತಿದೆ’ ಎಂದು ಬಿಜೆಪಿ ಟೀಕಿಸಿದೆ.

‘ಬಿಬಿಎಂಪಿ ಗುತ್ತಿಗೆದಾರರಿಗೆ ಬಾಕಿ ಉಳಿದ ಕಾಮಗಾರಿಗಳ ಬಿಲ್ ಪಾವತಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಮಿಷನ್ ಕೇಳುತ್ತಿದ್ದಾರೆ. ಕಾರ್ಯನಿರತ ಗುತ್ತಿಗೆದಾರರ ಸಂಘ, ಡಿ.ಕೆ ಶಿವಕುಮಾರ್ ಅವರು ಅಜ್ಜಯ್ಯನ ಮೇಲೆ ಪ್ರಮಾಣ ಮಾಡಿ ಕಮಿಷನ್ ಕೇಳಿಲ್ಲವೆಂದು ಹೇಳಲಿ ಅಂತಾ ಸವಾಲು ಹಾಕಿದೆ. ಆದರೆ ಡಿಸಿಎಂ ಸಾಹೇಬರು ನಂಗೇನು ಗೊತ್ತೇ ಇಲ್ಲವೆಂದು ನುಣುಚಿಕೊಳ್ಳುವುದರ ಜೊತೆಗೆ ಸವಾಲು ಹಾಕಿದ ಗುತ್ತಿಗೆದಾರರಿಗೆ ಬಿಲ್ ಕೊಡುವುದಿಲ್ಲವೆಂದು ಬೆದರಿಕೆ ಹಾಕಿದ್ದಾರೆ’ ಅಂತಾ ಬಿಜೆಪಿ ಕುಟುಕಿದೆ.

ಇದನ್ನೂ ಓದಿ: ಸೋಲಿನಿಂದ ಎಚ್.ಡಿ.ಕುಮಾರಸ್ವಾಮಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ಕಾಣುತ್ತಿದೆ: ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News