ಬೆಂಗಳೂರು: 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ ಹೊತ್ತುರಿದು‌, #CongressMukthKarnataka ಆಗಲಿದೆ ಎಂದು ಬಿಜೆಪಿ ಟೀಕಿಸಿದೆ. #ಕಾಂಗ್ರೆಸ್‌ಕಲಹ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕೈ’ ಪಕ್ಷದ ವಿರುದ್ಧ ಕಿಡಿಕಾರಿದೆ.


COMMERCIAL BREAK
SCROLL TO CONTINUE READING

ನವ ಸಂಕಲ್ಪ ಶಿಬಿರಕ್ಕೆ ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ಕೈಕೊಟ್ಟಿದ್ದಾರೆ. ಕಾಂಗ್ರೆಸ್ ನವ ಸಂಕಲ್ಪ ಶಿಬಿರದಲ್ಲಿ ಅಸಮಾಧಾನದ ಬೆಂಕಿ ಹತ್ತಿಕೊಂಡಿದೆ. ಈ ಬೆಂಕಿಯ ಕಾವಿನಿಂದ 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ ಹೊತ್ತುರಿದು‌, #CongressMukthKarnataka ಆಗಲಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.


ಕಲಬುರಗಿಯಲ್ಲಿ ಬಸ್ ಅಪಘಾತ: ಮೃತರಿಗೆ ಪರಿಹಾರದ ಬಗ್ಗೆ ಸಿಎಂ ಜೊತೆ ಚರ್ಚೆ- ಶ್ರೀರಾಮುಲು


‘ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಸಿಎಂ ಇಬ್ರಾಹಿಂ ಮಾತುಗಳನ್ನು ಕಾಂಗ್ರೆಸ್‌ ನಾಯಕರು ನಿರ್ಲಕ್ಷಿಸಿದರು. ಇಂದು ಅದೇ ಇಬ್ರಾಹಿಂ ಮಾತಿಗೆ ಬೆಲೆಕೊಡಲೇ ಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಕಾಂಗ್ರೆಸ್‌ ಈಗ, ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಸೋಲಿಸುತ್ತದೋ ಅಥವಾ ಅಲ್ಪಸಂಖ್ಯಾತ ರಾಜ್ಯಾಧ್ಯಕ್ಷರ ಮಾತನ್ನು ತಿರಸ್ಕರಿಸುತ್ತದೋ?’ ಎಂದು ಪ್ರಶ್ನಿಸಿದೆ.


ಜೆಡಿಎಸ್‌ ಪಕ್ಷದ ಪರವಾಗಿ ವಕಾಲತ್ತು ಆರಂಭಿಸಿದಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ವೈಮನಸ್ಸು ಮರೆಯುವ ಮಾತುಗಳನ್ನಾಡುತ್ತಿದ್ದಾರೆ. ಅತಂತ್ರವಾದಲ್ಲಿ ಖರ್ಗೆ ಮುಖ್ಯಮಂತ್ರಿಯಾಗುವ ಭಯವೇ? ದಲಿತರನ್ನು ಕಟ್ಟಿ ಹಾಕಲು ಈಗಲೇ ರಣ ತಂತ್ರವೇ?’ ಎಂದು ಬಿಜೆಪಿ ಪ್ರಶ್ನಿಸಿದೆ.


KCET ಪ್ರವೇಶ ಕಾರ್ಡ್ 2022 ಬಿಡುಗಡೆ: ಈ ರೀತಿ ಡೌನ್‌ಲೋಡ್ ಮಾಡಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.