ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬ ನಡೆಸಿದ್ದು ಅಕ್ಷರಶಃ ಮನೆಗಳ್ಳತನ!: ಬಿಜೆಪಿ

ತಪ್ಪು ಮಾಡದವರು ಯಾರು ಎಂದು ಒಪ್ಪಿಕೊಂಡು ತನಿಖೆ ಎದುರಿಸುವ ಮುಕ್ತ ಮನಸ್ಸು ನಕಲಿ ಗಾಂಧಿ ಕುಟುಂಬಕ್ಕಿಲ್ಲ. ತಪ್ಪು ಮಾಡದೇ ಇದ್ದರೆ ತನಿಖೆಯ ಅಗ್ನಿ ಪರೀಕ್ಷೆ ಎದುರಿಸಲು ಭಯವೇಕೆ? ಎಂದು BJP ಪ್ರಶ್ನಿಸಿದೆ.

Written by - Zee Kannada News Desk | Last Updated : Jun 13, 2022, 01:54 PM IST
  • ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಕಲಿ ಗಾಂಧಿ‌ ಕುಟುಂಬ ಈಗ "ಅನುಕಂಪ" ಗಿಟ್ಟಿಸುವ ನಾಟಕವಾಡುತ್ತಿದೆ
  • ತಪ್ಪು ಮಾಡದವರು ಯಾರು ಎಂದು ಒಪ್ಪಿಕೊಂಡು ತನಿಖೆ ಎದುರಿಸುವ ಮುಕ್ತ ಮನಸ್ಸು ನಕಲಿ ಗಾಂಧಿ ಕುಟುಂಬಕ್ಕಿಲ್ಲ
  • ತನಿಖೆ ಬೇಡ ಎನ್ನಲು ನಕಲಿ ಗಾಂಧಿ ಕುಟುಂಬವನ್ನು ಹೊರಗಿಟ್ಟು ಭಾರತೀಯ ದಂಡ ಸಂಹಿತೆ ರಚಿಸಲಾಗಿದೆಯೇ?
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬ ನಡೆಸಿದ್ದು ಅಕ್ಷರಶಃ ಮನೆಗಳ್ಳತನ!: ಬಿಜೆಪಿ title=
ನ್ಯಾಷನಲ್ ಹೆರಾಲ್ಡ್ ಪ್ರಕರಣ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬ ನಡೆಸಿದ್ದು ಅಕ್ಷರಶಃ ಮನೆಗಳ್ಳತನ ಎಂದು ಬಿಜೆಪಿ ಆರೋಪಿಸಿದೆ. ರಾಹುಲ್ ಗಾಂಧಿ ಇ.ಡಿ ವಿಚಾರಣೆ ವಿರೋಧಿಸಿ ದೇಶದಾದ್ಯಂತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದೆ.

‘ದೇಶಕ್ಕಾಗಿ ಮಡಿವ ಸೈನಿಕರ ಪರವಾಗಿ ಒಮ್ಮೆಯೂ ಕಾಂಗ್ರೆಸ್ ದನಿ ಎತ್ತಲಿಲ್ಲ. ರೈತರು ಆತ್ಮಹತ್ಯೆ ಮಾಡಿಕೊಂಡಾಗಲೂ ಕಾಂಗ್ರೆಸ್ ಬೀದಿಗೆ ಬರಲಿಲ್ಲ. ಆದರೆ ನಕಲಿ ಗಾಂಧಿಗಳಿಗೆ #EDNotice ನೀಡಿದರೆ ಕಾಂಗ್ರೆಸ್ ರಸ್ತೆಗೆ ಬಂದು ನಿಂತಿದೆ. ಇದು ಸಂವಿಧಾನಕ್ಕೆಸಗುತ್ತಿರುವ ಅಪಚಾರವಲ್ಲವೇ? ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ #ED ನಕಲಿ ಗಾಂಧಿ ಕುಟುಂಬದ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ತಪ್ಪು ಮಾಡದೇ ಇದ್ದರೆ ಭಯವೇಕೆ? ಸಹಾನುಭೂತಿ ಗಿಟ್ಟಿಸುವುದಕ್ಕಾಗಿ ಕಾಂಗ್ರೆಸ್ ಪ್ರತಿಭಟನೆಯ ನಾಟಕ ಹೆಣೆಯುತ್ತಿದೆ. ಇದೊಂದು ಯೋಜಿತ ಸಂಚು ಅಷ್ಟೇ!’ ಎಂದು ಕಿಡಿಕಾರಿದೆ.

‘ತಪ್ಪು ಮಾಡದವರು ಯಾರು ಎಂದು ಒಪ್ಪಿಕೊಂಡು ತನಿಖೆ ಎದುರಿಸುವ ಮುಕ್ತ ಮನಸ್ಸು ನಕಲಿ ಗಾಂಧಿ ಕುಟುಂಬಕ್ಕಿಲ್ಲ. ತಪ್ಪು ಮಾಡದೇ ಇದ್ದರೆ ತನಿಖೆಯ ಅಗ್ನಿ ಪರೀಕ್ಷೆ ಎದುರಿಸಲು ಭಯವೇಕೆ? ಅಷ್ಟಕ್ಕೂ ತನಿಖೆ ಬೇಡ ಎನ್ನಲು, ನಕಲಿ ಗಾಂಧಿ ಕುಟುಂಬವನ್ನು ಹೊರಗಿಟ್ಟು ಭಾರತೀಯ ದಂಡ ಸಂಹಿತೆ ರಚಿಸಲಾಗಿದೆಯೇ? ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಕಲಿ ಗಾಂಧಿ‌ ಕುಟುಂಬ ಈಗ "ಅನುಕಂಪ" ಗಿಟ್ಟಿಸುವ ನಾಟಕವಾಡುತ್ತಿದೆ. ತಾನು ಕಳ್ಳ ಪರರ ನಂಬೆ ಎಂಬ ಧೋರಣೆಯೇ ಕಾಂಗ್ರೆಸ್ ಅಸ್ಮಿತೆ. ನಕಲಿ ಗಾಂಧಿ ಮನೆತನದಿಂದ, ನಕಲಿ ಗಾಂಧಿ ಮನೆತನಕ್ಕಾಗಿ, ನಕಲಿ ಗಾಂಧಿ ಮನೆತನಕ್ಕೋಸ್ಕರ, ಇದು ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ!’ ಎಂದು ಬಿಜೆಪಿ ಕುಟುಕಿದೆ.

ಇದನ್ನೂ ಓದಿ: ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ: ಮತ್ತೆ ಕಾಂಗ್ರೆಸ್‌ ಕದತಟ್ಟಿದ ಮುಖಂಡ!

‘ನಕಲಿ ಗಾಂಧಿ ಕುಟುಂಬದ ಸದಸ್ಯರಿಗೆ #ED ನೋಟಿಸ್ ಜಾರಿಯಾಗುತ್ತಿದ್ದಂತೆ ದೇಶಾದ್ಯಂತ ಅಶಾಂತಿ ಸೃಷ್ಟಿ ಮಾಡಲಾಗುತ್ತಿದೆ. ಇಡಿ ಕಚೇರಿ ಎದುರು ಪ್ರತಿಭಟನೆಯ ಕರೆಯ ಹಿಂದೆ ದೇಶ ವಿರೋಧಿ ಸಂಚು ಅಡಗಿದೆ. ಉತ್ತರದ ರಾಜ್ಯಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಹೋರಾಟವನ್ನು ಕಾಂಗ್ರೆಸ್ ಕರ್ನಾಟಕಕ್ಕೆ ಆಹ್ವಾನಿಸುತ್ತಿದೆ! ಕೇವಲ ಒಂದು #EDNoticeಗಾಗಿ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಡಿ.ಕೆ.ಶಿವಕುಮಾರ್ ಅವರೇ, ನೀವೇನು ಸೊಬಗ ಅಂದುಕೊಂಡಿದ್ದೀರಾ? ಒಂದೂವರೆ ತಿಂಗಳಿಗೂ ಹೆಚ್ಚು ತಿಹಾರ್‌ ಜೈಲಿನಲ್ಲಿ ಕಂಬಿ ಎಣಿಸಿದ್ದು ನ್ಯಾಷನಲ್‌ ಹೆರಾಲ್ಡ್‌ ರೀತಿಯ ಪ್ರಕರಣದಲ್ಲಿಯೇ ಎಂಬುದನ್ನು ಮರೆತಿರಾ?’ ಎಂದು ಪ್ರಶ್ನಿಸಿದೆ.

‘ತಮ್ಮ ಪ್ರತಿ ಭಾಷಣದಲ್ಲೂ ಡಿಕೆಶಿ 'ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ' ಎಂಬುದನ್ನು ಪ್ರಸ್ತಾಪಿಸುತ್ತಾರೆ. ಅದೇ ಡಿಕೆಶಿ ಇಂದು ದೇಶದ ಸಾಂವಿಧಾನಿಕ ಮಾನ್ಯತೆ ಇರುವ ಸಂಸ್ಥೆ ನಕಲಿ ಗಾಂಧಿ ಕುಟುಂಬಕ್ಕೆ ನೀಡಿದ ನೋಟಿಸ್‌ಗೆ ನಕಲಿ ಗಾಂಧಿಗಳ ಜಪ ಮಾಡುತ್ತಿರುವುದು ವಿಪರ್ಯಾಸ. ಬಾಲ‌ ಮುದುರಿಕೊಂಡು ಕುಳಿತಿದ್ದ ನಗರ ನಕ್ಸಲರು, ಶಾಂತಿದೂತರು, ಸಿಎಎ ವಿರೋಧಿ ಹೋರಾಟಗಾರರು ಈಗ ಒಮ್ಮೆಲೇ ಎದ್ದು ನಿಂತಿದ್ದಾರೆ. #EDNotice ಬಳಿಕ ಈ ಘಟನೆ ನಡೆಯುತ್ತಿದೆ. ಹಾಗಾದರೆ ಇದು ಕಾಂಗ್ರೆಸ್ ಪ್ರೇರಿತ ರಾಷ್ಟ್ರ ವಿರೋಧಿ ಸಂಚಲ್ಲವೇ?’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

‘ಮಾತೆತ್ತಿದರೆ ತ್ಯಾಗ-ಬಲಿದಾನದ ಕುಟುಂಬ ಎಂದು ಹೇಳುವ ಕಾಂಗ್ರೆಸ್ ನಾಯಕರೇ, ನಕಲಿ ಗಾಂಧಿಗಳ ವಂಶಸ್ಥರ ಅಕ್ರಮ ಆಸ್ತಿ ದೇಶಸೇವೆಗಾಗಿ ಬರೆದುಕೊಡಲಿ. ಅಕ್ರಮಿಗಳ ಹಣ ದೇಶಸೇವೆಗಾಗಿ ಮೀಸಲಿಟ್ಟಿದ್ದರೆ, ಅಕ್ರಮ ಹಣಗಳಿಕೆಯಲ್ಲಿ #ED ಮುಂದೆ ನಿಲ್ಲಬೇಕಾದ ಪರಿಸ್ಥಿತಿ ಉದ್ಭವವಾಗುತ್ತಿರಲಿಲ್ಲ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬ ನಡೆಸಿದ್ದು ಅಕ್ಷರಶಃ ಮನೆಗಳ್ಳತನ! ಕಾಂಗ್ರೆಸ್ ಪಕ್ಷದ 5000 ಸದಸ್ಯರ ಇಡಗಂಟಿನೊಂದಿಗೆ ಆರಂಭವಾದ ಅಸೋಸಿಯೇಟ್ ಜರ್ನಲ್ ಶೇರುಗಳನ್ನು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಬಳಿಸಲಾಗಿದೆ. ಸ್ವಂತ ಮನೆಗೆ ಕನ್ನ ಹಾಕುವುದೆಂದರೆ ಇದೇ ಅಲ್ಲವೇ?’ ಎಂದು ಬಿಜೆಪಿ ಪ್ರಶ್ನಿಸಿದೆ.

ಇದನ್ನೂ ಓದಿ: ರಾಜ್ಯಕ್ಕೆ ಪ್ರಧಾನಿ ಆಗಮನ: ರಸ್ತೆ ಅಭಿವೃದ್ಧಿಗೆ ಮುಂದಾದ ಆಡಳಿತ, ವಾಹನ ಸವಾರರಿಗೆ ಸಂಕಷ್ಟ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News