ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಅವರು ಕಾಂಗ್ರೆಸ್ ಕಂಡ ವಿಫಲಾಧ್ಯಕ್ಷ ಎಂದು ಬಿಜೆಪಿ ಟೀಕಿಸಿದೆ. #CongressMuktBharat ಹ್ಯಾಶ್ ಟ್ಯಾಗ್ ಬಳಸಿ ಸೋಮವಾರ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.


COMMERCIAL BREAK
SCROLL TO CONTINUE READING

ಪಕ್ಷದ ಅಧ್ಯಕ್ಷ ಸ್ಥಾನ ಪಡೆಯುವಂತೆ ನಾನು ಸೇರಿದಂತೆ ಹಲವು ನಾಯಕರು ಸೋನಿಯಾ ಗಾಂಧಿ(Sonia Gandhi)ಯವರ ಕೈ-ಕಾಲು ಹಿಡಿದುಕೊಂಡು ಭಿಕ್ಷೆ ಬೇಡಿಕೊಂಡಿದ್ದೇವು ಎಂಬ ಡಿಕೆಶಿ ಹೇಳಿಕೆಗೆ ಬಿಜೆಪಿ ಟಾಂಗ್ ನೀಡಿದೆ.


ಈಗಲ್‌ ಟನ್‌ ವಿವಾದ: ಟೀಕಾಕಾರರ ವಿರುದ್ಧ ಹೆಚ್‌ಡಿಕೆ ತೀವ್ರ ವಾಗ್ದಾಳಿ


‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದಗಳು. ದೇಶವನ್ನು ಕಾಂಗ್ರೆಸ್ ಮುಕ್ತ(Congress Mukt Bharat)ವಾಗಿಸುವ ನಮ್ಮ ಸಂಕಲ್ಪಕ್ಕೆ ನೀವು ಧ್ವನಿಯಾಗಿದ್ದೀರಿ. ಅಂತೂ ಮತ್ತೊಮ್ಮೆ ಗುಲಾಮಗಿರಿಯ ಪರಾಕಾಷ್ಠೆ ತೋರಿದ್ದೀರಿ’ ಅಂತಾ ಕುಟುಕಿದೆ. ಮೇಕೆದಾಟು ಮಾದರಿಯಲ್ಲಿ ಉದ್ಯೋಗಕ್ಕಾಗಿ ತಾಲೂಕುಗಳಲ್ಲಿ ಪಾದಯಾತ್ರೆ ಮಾಡುತ್ತೇವೆಂದು ಹೇಳಿದ್ದ ಡಿಕೆಶಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.


'2023 ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ'


‘ಡಿಕೆಶಿ ಅವರು ಕಾಂಗ್ರೆಸ್ ಕಂಡ #ವಿಫಲಾಧ್ಯಕ್ಷ. ಅಧಿಕಾರ ಸ್ವೀಕರಿಸಿ 2 ವರ್ಷ ಕಳೆದರೂ ಪದಾಧಿಕಾರಿಗಳ ನೇಮಕ ಮಾಡಲಾಗದೆ ಅಸಹಾಯಕರಾಗಿದ್ದಾರೆ. ಕರ್ನಾಟಕ ಕಾಂಗ್ರೆಸ್‌(Karnataka Congress) ಈಗ ಕನಕಪುರ ಕಾಂಗ್ರೆಸ್‌ ಆಗಿ ಪರಿವರ್ತಿತಗೊಂಡಿದೆ’ ಅಂತಾ ಟೀಕಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.