ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ‘ಪರ್ಸೆಂಟೇಜ್ ಪಿತಾಮಹʼ: ಬಿಜೆಪಿ ಆರೋಪ

ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಅವರ ಅಕ್ಕಪಕ್ಕದಲ್ಲೇ ಪರ್ಸೆಂಟೇಜ್ ವ್ಯವಹಾರ ನಡೆಯುತ್ತಿತ್ತು ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ಬಗ್ಗೆ #ಬುರುಡೆರಾಮಯ್ಯರ ಸ್ಪಷ್ಟೀಕರಣ ಏನು?

Written by - Zee Kannada News Desk | Last Updated : Apr 26, 2022, 04:07 PM IST
  • ಸಿದ್ದರಾಮಯ್ಯ ಅವರ ಅಕ್ಕಪಕ್ಕದಲ್ಲೇ ಪರ್ಸೆಂಟೇಜ್ ವ್ಯವಹಾರ ನಡೆಯುತ್ತಿತ್ತು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ
  • ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ‘ಪರ್ಸೆಂಟೇಜ್ ಪಿತಾಮಹʼ ಎಂದರೆ ತಪ್ಪಾಗಲಾರದು
  • ಜೈಲು ಪಾಲಾಗುವ ಭಯದಿಂದ ಸಿದ್ದರಾಮಯ್ಯ ಲೋಕಾಯುಕ್ತ ಸಂಸ್ಥೆಯನ್ನೇ ಉಸಿರುಗಟ್ಟಿಸಿದರು
ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ‘ಪರ್ಸೆಂಟೇಜ್ ಪಿತಾಮಹʼ: ಬಿಜೆಪಿ ಆರೋಪ title=
ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗಂಭೀರ ಆರೋಪ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಪರ್ಸೆಂಟೇಜ್ ವ್ಯವಹಾರ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಪರ್ಸೆಂಟೇಜ್ ವ್ಯವಹಾರ ನಡೆಯುತ್ತಿತ್ತು. ಸಿದ್ದರಾಮಯ್ಯನವರ ಪಕ್ಕದಲ್ಲೇ ಪರ್ಸೆಂಟೇಜ್ ವ್ಯವಹಾರ ಮಾಡ್ತಾ ಇದ್ರು. ಅದಕ್ಕೆ ನಾನು ಕಾಂಗ್ರೆಸ್ ಬಿಟ್ಟು ಬಂದೆ ಎಂದು ಜೆಡಿಎಸ್ ರಾಜ್ಯಾಧ‍್ಯಕ್ಷ ಸಿಎಂ ಇಬ್ರಾಹಿಂ ಆರೋಪಿಸಿದ್ದಾರೆ.

ಇನ್ನು ಡೈರಿ ಪ್ರಕರಣ ಸಂಬಂಧ ಜೆಡಿಎಸ್‌ ಎಂಎಲ್‌ಸಿ ಗೋವಿಂದರಾಜು ಸ್ಪಷ್ಟನೆ ನೀಡಿದ್ದು, ಕಪ್ಪದ ಸತ್ಯ ಒಪ್ಪಿಕೊಂಡಿದ್ದಾರೆ. ಗೋವಿಂದರಾಜು ಮನೆಯಲ್ಲಿ ಸಿಕ್ಕ ಡೈರಿಯಲ್ಲಿ ಕಾಂಗ್ರೆಸ್ ನಾಯಕರ ಹೆಸರು ಕೋಡ್ ರೀತಿಯಲ್ಲಿ ಉಲ್ಲೇಖವಾಗಿದ್ದರ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ಕೇಳಿದ್ದರು. ಐಟಿ ಅಧಿಕಾರಿಗಳಿಗೆ ಉತ್ತರಿಸಿರುವ ಗೋವಿಂದರಾಜು, ‘ಕೋಡ್‍ವರ್ಡ್‍ಗಳಲ್ಲಿದ್ದ ಹೆಸರು ಕಾಂಗ್ರೆಸ್ ನಾಯಕರದ್ದಾಗಿದ್ದು, ತನ್ನ ವೈಯಕ್ತಿಕ ಲೆಕ್ಕಾಚಾರಗಳಿಗೆ ಬರೆದುಕೊಂಡಿದ್ದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ5 ವರ್ಷಗಳಲ್ಲಿ 55 ಲಕ್ಷ ಉದ್ಯೋಗ ಸೃಷ್ಟಿ: ಅಶ್ವತ್ಥನಾರಾಯಣ

ಇದೀಗ ಇದೇ ವಿಚಾರವನ್ನಿಟ್ಟುಕೊಂಡು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ಬುರುಡೆರಾಮಯ್ಯ ಕರ್ನಾಟಕ ರಾಜ್ಯದ ‘ಪರ್ಸೆಂಟೇಜ್ ಪಿತಾಮಹʼ ಎಂದು ಟೀಕಿಸಿದೆ. ‘ಸಿದ್ದರಾಮಯ್ಯನವರೇ ಗೋವಿಂದರಾಜ್ ಡೈರಿಯಲ್ಲಿ ನಿಮ್ಮ ಪರ್ಸಂಟೇಜ್ ವ್ಯವಹಾರದ ಲೆಕ್ಕವಿತ್ತೇ? ಅಡಿಯಿಂದ ಮುಡಿಯವರೆಗೂ ಭ್ರಷ್ಟಾಚಾರವನ್ನು ಹೊದ್ದು ಮಲಗಿದ ಸರ್ಕಾರ ನಿಮ್ಮದಾಗಿತ್ತು ಎಂಬುದು ಡೈರಿಯೇ ಹೇಳುತ್ತಿತ್ತು. ತಾನು ಕಳ್ಳ ಪರರ ನಂಬ ಎಂಬ ಮಾತು ಸಿದ್ದರಾಮಯ್ಯರಿಗೆ ಹೇಳಿ ಮಾಡಿಸಿದ ಹಾಗಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

‘ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಅವರ ಅಕ್ಕಪಕ್ಕದಲ್ಲೇ ಪರ್ಸೆಂಟೇಜ್ ವ್ಯವಹಾರ ನಡೆಯುತ್ತಿತ್ತು ಎಂದು ಸಿದ್ದರಾಮಯ್ಯನವರ ಆಪ್ತ‌ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ಬಗ್ಗೆ #ಬುರುಡೆರಾಮಯ್ಯ ಅವರ ಸ್ಪಷ್ಟೀಕರಣ ಏನು? ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದ ‘ಪರ್ಸೆಂಟೇಜ್ ಪಿತಾಮಹʼ ಎಂದರೆ ತಪ್ಪಾಗಲಾರದು’ ಎಂದು ಬಿಜೆಪಿ ಆರೋಪಿಸಿದೆ.

ಇದನ್ನೂ ಓದಿ: PSI Scam: ‘ತನಿಖಾಧಿಕಾರಿಯಂತೆ ವರ್ತಿಸಿದ ಪ್ರಿಯಾಂಕ್ ಖರ್ಗೆ ಈಗ ಸೊಬಗನಂತೆ ವರ್ತಿಸುತ್ತಿದ್ದಾರೆ’

‘ಸಿದ್ದರಾಮಯ್ಯನವರೇ ಅರ್ಕಾವತಿ ಕರ್ಮಕಾಂಡಕ್ಕೆ ಸಂಬಂಧಪಟ್ಟಂತೆ ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ಆ ಪ್ರಕರಣದ ತನಿಖೆ ಸರಿಯಾಗಿ ನಡೆದರೆ ನೀವು ಜೈಲು ಪಾಲಾಗುತ್ತಿದ್ದಿರಲ್ಲವೇ? ಆ ಭಯದಿಂದಲೇ ಜೈಲು ವಾಸ ತಪ್ಪಿಸಿಕೊಳ್ಳಲು ಲೋಕಾಯುಕ್ತ ಸಂಸ್ಥೆಯನ್ನೇ ಉಸಿರುಗಟ್ಟಿಸಿದಿರಿ’ ಎಂದು ಬಿಜೆಪಿ ಟೀಕಿಸಿದೆ.

‘ಅಧಿಕಾರದಲ್ಲಿದ್ದಾಗಲೇ ಲೋಕಾಯುಕ್ತ ಸಂಸ್ಥೆಯನ್ನು ಸಿದ್ದರಾಮಯ್ಯನವರು ಅಂಗವಿಕಲಗೊಳಿಸಿದರು. #ಬುರುಡೆರಾಮಯ್ಯ ಅವರೇ, ನಿಮ್ಮ ಸುತ್ತಲೂ ಇರುವ ಪರ್ಸೆಂಟೇಜ್ ಕುಳಗಳನ್ನು ರಕ್ಷಣೆ ಮಾಡಲು ಈ ಕೆಲಸ ಮಾಡಿದ್ದೇ? ಭ್ರಷ್ಟಾಚಾರಕ್ಕೆ ಹಿಂಬಾಗಿಲ ಮೂಲಕ ಪ್ರೋತ್ಸಾಹಿಸಿದ #ಮೀರ್‌ಸಾದಿಕ್‌ ಇಂದು ಸೊಬಗನಂತೆ ವರ್ತಿಸುತ್ತಿದ್ದಾರೆ’ ಎಂದು ಕಿಡಿಕಾರಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News