ಬೆಂಗಳೂರು: ಅಖಂಡವಾಗಿದ್ದ ಭಾರತವನ್ನು ತುಂಡು ಮಾಡಿದ್ದ ಕಾಂಗ್ರೆಸ್‌ ಇಂದು ಭಾರತ ಒಗ್ಗೂಡಿಸಿ (ಭಾರತ್‌ ಜೋಡೋ) ಎಂಬ ಬೃಹನ್ನಾಟಕವಾಡುತ್ತಿದೆ ಎಂದು ಕಾಂಗೆಸ್‌ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆದಿದೆ.


COMMERCIAL BREAK
SCROLL TO CONTINUE READING

ಇಂದು (ಸೆ.7) ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆ ಆರಂಭವಾಗುತ್ತಿದೆ. ಈ ನಿಟ್ಟಿನಲ್ಲಿ ಟ್ಟೀಟ್‌ ಮೂಲಕ ವ್ಯಂಗ್ಯವಾಡಿರುವ ಕಮಲಪಾಳಯ, ಅಖಂಡವಾಗಿದ್ದ ಭಾರತವನ್ನು ತುಂಡು ಮಾಡಿದ್ದೇ ಕಾಂಗ್ರೆಸ್. ಅದೇ ಕಾಂಗ್ರೆಸ್‌ ಈಗ ಭಾರತ್‌ ಜೋಡೋ ಎಂಬ ಬೃಹನ್ನಾಟಕ ಮಾಡುತ್ತಿದೆ. ಕಾಂಗ್ರೆಸ್‌ ಪಕ್ಷಕ್ಕೆ ನಿಜಕ್ಕೂ ಭಾರತವನ್ನು ಜೋಡಿಸುವ ಆಸೆಯಿದ್ದರೆ, ಪಾಕಿಸ್ತಾನದಿಂದ ಭಾರತ್‌ ಜೋಡೋ ಯಾತ್ರೆ ಆರಂಭಿಸಲಿ’ ಎಂದು ಸವಾಲ್‌ ಹಾಕಿದೆ.


ಇದನ್ನೂ ಓದಿ: Bharat Jodo Yatra : ಇಂದಿನಿಂದ ಕಾಂಗ್ರೆಸ್ 'ಭಾರತ್ ಜೋಡೋ ಯಾತ್ರೆ' ಆರಂಭ : ಭರ್ಜರಿ ತಯಾರಿಯಲ್ಲಿ ಕೈ!


ಅಲ್ಲದೆ, ತಮ್ಮ ರಾಜಕೀಯ ಹಸಿವಿಗಾಗಿ ಭಾರತವನ್ನೇ ಇಭ್ಭಾಗ ಮಾಡಿದ ಕಾಂಗ್ರೆಸ್‌ ಇಂದು ಭಾರತವನ್ನು‌ ಜೋಡಿಸುವ ಯಾತ್ರೆ ಮಾಡುತ್ತಿದೆ. ಕಾಂಗ್ರೆಸ್ಸಿಗರೇ, ಮೊದಲು ಹರಿದು ಹಂಚಿಹೋಗುತ್ತಿರುವ ನಿಮ್ಮ ಪಕ್ಷವನ್ನು ಜೋಡಿಸಿಕೊಳ್ಳಿ ಎಂದು ವ್ಯಂಗ್ಯವಾಡಿದೆ. ಇನ್ನು ಕಾಂಗ್ರೆಸ್‌ ಭಾರತ್‌ ಜೋಡೋ ಯಾತ್ರೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ದೆಹಲಿ, ಪಂಜಾಬ್, ಚಂಡೀಗಡ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಹಾದುಹೋಗಲಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.