ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಧ‍್ಯಕ್ಷೆ ಸೋನಿಯಾ ಗಾಂಧಿ ಇ.ಡಿ ವಿಚಾರಣೆಗೆ ಹೋಗುತ್ತಿರುವಾಗ ನಾನು ಹುಟ್ಟಹಬ್ಬ ಆಚರಿಸಿಕೊಳ್ಳುವುದು ಸರಿಯಲ್ಲವೆಂಬ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆಗೆ ಬಿಜೆಪಿ ವ್ಯಂಗ್ಯವಾಡಿದೆ. #ಕಾಂಗ್ರೆಸ್‌ಕಲಹ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ತಮ್ಮ ತಾಳಕ್ಕೆ ತಕ್ಕ ಹಾಗೆ ಖರ್ಗೆಯವರನ್ನು ಸಿದ್ದರಾಮಯ್ಯ ಈ ಬಣ ಕುಣಿಸುತ್ತಿದೆ’ ಎಂದು ಟೀಕಿಸಿದೆ.


COMMERCIAL BREAK
SCROLL TO CONTINUE READING

‘ಸೋನಿಯಾ ಗಾಂಧಿಯವರು ಸಂಕಟದಲ್ಲಿದ್ದಾರೆಂಬ ಕಾರಣಕ್ಕಾಗಿ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು ಹುಟ್ಟುಹಬ್ಬವನ್ನೇ ನಿರಾಕರಿಸಿದ್ದಾರೆ. ಈ ಬಗ್ಗೆ ಖರ್ಗೆ ಬರೆದಿರುವುದು ತ್ಯಾಗ ಪತ್ರವೋ ಅಥವಾ ಉತ್ಸವದ ಭರಾಟೆಯಲ್ಲಿರುವವರಿಗೆ ನೀಡಿದ ಗುದ್ದೋ?’ ಎಂದು ಕುಟುಕಿದೆ.


ಇದನ್ನೂ ಓದಿ: ಸರ್ಕಾರಿ ಸೇವೆ ಪಡೆಯಲು ಲಂಚಕೊಡುವ ಪದ್ಧತಿ ಪರಿಚಯಿಸಿದ್ದೇ ಕಾಂಗ್ರೆಸ್: ಬಿಜೆಪಿ ಆರೋಪ


'ಬಿಜೆಪಿ ಸರ್ಕಾರ ‘ಟೇಕ್ ಆಪ್’ ಆಗದೆ 2021ರಲ್ಲಿಯೇ ಉಳಿದುಬಿಟ್ಟಿದೆ'


‘ಒಂದು ಕಡೆ ಸಿದ್ದು ಬಣ, ಮತ್ತೊಂದೆಡೆ ಡಿಕೆಶಿ ಬಣ. 2 ಬಣಗಳ ಲೆಕ್ಕಾಚಾರ, ಸತ್ಯಕ್ಕೆ ದೂರವಿದೆ ಎಂದು ಬೇನಾಮಿ ಅಧ್ಯಕ್ಷೆಗೆ ತಿಳಿದಿದೆ. ಹೀಗಾಗಿಯೇ ಇಂತಹ ಹೇಳಿಕೆ ಹೊರಬರುತ್ತಿದೆ. ಈ ಹೇಳಿಕೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕುರ್ಚಿಗಾಗಿ ಕಿತ್ತಾಡುತ್ತಿರುವ ಸಿದ್ದು ಹಾಗೂ ಡಿಕೆಶಿ ಅವರಿಗೆ ನೀಡಿದ ಗುದ್ದು ಎಂದು ಪರಿಗಣಿಸಬಹುದೇ?’ ಎಂದು ಬಿಜೆಪಿ ಟ್ವೀಟ್ ಮಾಡಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.