ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ (Congress) ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂಬ ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ (Shamanur Shivashankarappa) ಹೇಳಿಕೆ ವಿಚಾರವಾಗಿ ಬಿಜೆಪಿ ವ್ಯಂಗ್ಯವಾಡಿದೆ.


COMMERCIAL BREAK
SCROLL TO CONTINUE READING

 #ಕಾಂಗ್ರೆಸ್‌ಕಲಹ ಹ್ಯಾಶ್ ಟ್ಯಾಗ್ ಬಳಸಿ ಸೋಮವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ‘ಕೈ’ ನಾಯಕರ ಬಣ ರಾಜಕೀಯವನ್ನು ಟೀಕಿಸಿದೆ. ಕಾಂಗ್ರೆಸ್ ಪಕ್ಷದಲ್ಲಿ ಇರುವುದು ಕೇವಲ ಸೋನಿಯಾ ಗಾಂಧಿ(Sonia Gandhi)ಬಣ ಆದರೆ, ಬಿಜೆಪಿಯಲ್ಲಿ ಹತ್ತಾರು ಬಣಗಳಿವೆ ಎಂದು ಹೇಳಿದ್ದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಇದೇ ವೇಳೆ ಟೀಕಾಪ್ರಹಾರ ನಡೆಸಿದೆ.


'ಸಿದ್ದರಾಮಯ್ಯ ಒಳ್ಳೆಯ ಸಿಎಂ ಆದ್ರೆ, ಹುಚ್ಚುಚ್ಚಾಗಿ ಮಾತಾಡೋದು ಬಿಡಬೇಕು'


‘ಸಿದ್ದರಾಮಯ್ಯ(Siddaramaiah)ನವರೇ ಕಾಂಗ್ರೆಸ್ ಪಕ್ಷದಲ್ಲಿ ಎಷ್ಟು ಬಣವಿದೆ? ಸೋನಿಯಾ ಗಾಂಧಿ ಬಣದ ವಿಚಾರ ಬಿಡಿ, ಅದು G23 ಮೂಲಕ ಜಗಜ್ಜಾಹೀರಾಗಿದೆ. ರಾಜ್ಯ ಕಾಂಗ್ರೆಸ್‌ನಲ್ಲಿರುವ ಬಣಗಳ ಸಂಖ್ಯೆ ಎಷ್ಟು? ಪರಿಷತ್ ವಿಪಕ್ಷ ನಾಯಕರೊಂದಿಗೆ ನಿಮ್ಮ ಸೌಹಾರ್ದ ಸಂಬಂಧ ಹೇಗಿದೆ ಎಂದು ಸ್ವಲ್ಪ ವಿವರಿಸಬಹುದೇ?’ ಅಂತಾ ಪ್ರಶ್ನಿಸಿದೆ.


Pavagada Bus Accident: ಗಾಯಾಳುಗಳ ಆರೋಗ್ಯ ವಿಚಾರಿಸಿದ ಎಚ್​ಡಿಕೆ


DK Shivakumar)ಮಾತ್ರ ಮುಖ್ಯಮಂತ್ರಿಯಾಗಬೇಕೇ, ನನ್ನ ಬಳಿಯೂ ದುಡ್ಡಿದೆ ನಾನು ಸಿಎಂ ಆಗುತ್ತೇನೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಶ್ಯಾಮನೂರು ಶಿವಶಂಕರಪ್ಪ ಅವರು ಹೇಳಿದ್ದಾರೆ. ಸಿದ್ದರಾಮಯ್ಯನವರೇ ಇವರದು ಎಷ್ಟನೇ ಬಣ?’ ಅಂತಾ ಬಿಜೆಪಿ ವ್ಯಂಗ್ಯವಾಡಿ ಪ್ರಶ್ನಿಸಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.