ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರ ಬಗ್ಗೆ ಸಿದ್ದರಾಮಯ್ಯನವರು ಕನಸು ಕಾಣುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. #SidduVsDKS ಹ್ಯಾಶ್ ಟ್ಯಾಗ್ ಬಳಸಿ ಸೋಮವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

ಸಿದ್ದರಾಮಯ್ಯನವರೇ ನೀವು ಅಧಿಕಾರಕ್ಕೆ ಬರುವುದರ ಬಗ್ಗೆ ಚಿಂತಿಸುವುದನ್ನು ಬಿಟ್ಟು ನಿಮಗಾಗಿ ಒಂದು ಕ್ಷೇತ್ರವನ್ನು ಮೊದಲು ಅಂತಿಮಗೊಳಿಸಿ. ನೀವೆಲ್ಲೇ ಸ್ಪರ್ಧಿಸಿದರೂ ಡಾ.ಜಿ.ಪರಮೇಶ್ವರ್‌, ಮಲ್ಲಿಕಾರ್ಜುನ್ ಖರ್ಗೆ, ಡಿ.ಕೆ.ಶಿವಕುಮಾರ್ ನಿಮಗೆ ಖೆಡ್ಡಾ ತೋಡುವುದು ಖಚಿತ’ವೆಂದು ಕುಟುಕಿದೆ.


"ಖರ್ಗೆಯವರು ನೀಡಿರುವ ಎಚ್ಚರಿಕೆ ಮಾತುಗಳಂತೆ ನಾವು ನಡೆದುಕೊಳ್ತೇವೆ"


‘ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ರಾಜ್ಯಾದಾದ್ಯಂತ ಸಿಗುತ್ತಿರುವ ಜನ ಬೆಂಬಲದಿಂದ ಸಿದ್ದರಾಮಯ್ಯ ಕಂಗಾಲಾಗಿದ್ದಾರೆ. ರಾಹುಲ್ ಗಾಂಧಿ ಸಹಿತ ಯಾರಿಂದಲೂ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರನ್ನು ಜೋಡಿಸಲು ಸಾಧ್ಯವಿಲ್ಲ. ಇವರಿಬ್ಬರು ಒಂದಾಗಲು ಕುರ್ಚಿಯ ಆಸೆ ಬಿಡಬೇಕು, ಸಿದ್ದರಾಮಯ್ಯ ನಿಮ್ಮಿಂದ ಸಿಎಂ ಕುರ್ಚಿ ಆಸೆ ಬಿಡಲು ಸಾಧ್ಯವೇ?’ ಎಂದು ಬಿಜೆಪಿ ಪ್ರಶ್ನಿಸಿದೆ.


ಬಿಜೆಪಿ ಟೀಕಿಸಿದೆ.


ಇದನ್ನೂ ಓದಿ: ಬಿಜೆಪಿಯಲ್ಲಿ ಗಲ್ಲಿ ಕ್ರಿಕೆಟ್‌ನಂತೆ ಹಲವು ಟೀಂಗಳು ಸೃಷ್ಟಿಯಾಗಿವೆ!: ಕಾಂಗ್ರೆಸ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.