ಸಿಎಂ, ಶ್ಯಾಡೋ ಸಿಎಂ & ಡಮ್ಮಿ ಡಿಸಿಎಂ ಇಲ್ಲಿವರೆಗೂ ಮಾಡಿದ್ದು ಬರೀ ಕಲೆಕ್ಷನ್-ಕಮಿಷನ್-ಕರಪ್ಷನ್!!

ಸಿಎಂ ಸಿದ್ದರಾಮಯ್ಯ ಹಾಗೂ ಶ್ಯಾಡೋ ಸಿಎಂ ಯತೀಂದ್ರ ಸಿದ್ದರಾಮಯ್ಯ ಮತ್ತು ಡಮ್ಮಿ ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ ಕಾಂಗ್ರೆಸ್ ಸರ್ಕಾರ ಶುರುವಾತಿನಿಂದ ಹಿಡಿದು ಇಲ್ಲಿಯವರೆಗೂ ಮಾಡಿದ್ದು ಬರೀ ಕಲೆಕ್ಷನ್-ಕಮಿಷನ್-ಕರಪ್ಷನ್!! ಎಂದು ಬಿಜೆಪಿ ಕಿಡಿಕಾರಿದೆ.

Written by - Puttaraj K Alur | Last Updated : Nov 18, 2023, 08:32 PM IST
  • ಕಾಂಗ್ರೆಸ್ ಸರ್ಕಾರ ಶುರುವಾತಿನಿಂದ ಇಲ್ಲಿಯವರೆಗೂ ಮಾಡಿದ್ದು ಬರೀ ಕಲೆಕ್ಷನ್-ಕಮಿಷನ್-ಕರಪ್ಷನ್!!
  • ಶ್ಯಾಡೋ ಸಿಎಂ ಯತೀಂದ್ರ ಸಿದ್ದರಾಮಯ್ಯನವರು ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಿದ್ದಾರೆ
  • ಸಿಎಂ ಸಿದ್ದರಾಮಯ್ಯ ರಂಗ್‌ ಬಿರಂಗಿ ಕತೆಗಳನ್ನು ಹೆಣೆಯುತ್ತಿರುವುದು ಅಸಹ್ಯದ ಪರಮಾವಧಿ
ಸಿಎಂ, ಶ್ಯಾಡೋ ಸಿಎಂ & ಡಮ್ಮಿ ಡಿಸಿಎಂ ಇಲ್ಲಿವರೆಗೂ ಮಾಡಿದ್ದು ಬರೀ ಕಲೆಕ್ಷನ್-ಕಮಿಷನ್-ಕರಪ್ಷನ್!! title=
'ಕಲೆಕ್ಷನ್-ಕಮಿಷನ್-ಕರಪ್ಷನ್'

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಶ್ಯಾಡೋ ಸಿಎಂ ಯತೀಂದ್ರ ಸಿದ್ದರಾಮಯ್ಯ ಮತ್ತು ಡಮ್ಮಿ ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ ಕಾಂಗ್ರೆಸ್ ಸರ್ಕಾರ ಶುರುವಾತಿನಿಂದ ಹಿಡಿದು ಇಲ್ಲಿಯವರೆಗೂ ಮಾಡಿದ್ದು ಬರೀ ಕಲೆಕ್ಷನ್-ಕಮಿಷನ್-ಕರಪ್ಷನ್!! ಎಂದು ಬಿಜೆಪಿ ಕಿಡಿಕಾರಿದೆ.

‘ಕರ್ನಾಟಕದ ಶ್ಯಾಡೋ ಸಿಎಂ ಡಾ.ಯತೀಂದ್ರ ಸಿದ್ದರಾಮಯ್ಯನವರು, “ಹಲೋ ಅಪ್ಪಾ- ನಾನು ಹೇಳಿದ್ದಷ್ಟೆ ಮಾಡಬೇಕು” ಎಂದು ಆವಾಜ್‌ ಮೇಲೆ ಆವಾಜ್‌ ಹಾಕಿದ್ದು, ಶಾಲೆಗಳಿಗೆ ಬಣ್ಣ ಬಳಿಸುವುದಕ್ಕಲ್ಲ ಬದಲಿಗೆ ತಮ್ಮ #ATMSarkaraದ ಕಲೆಕ್ಷನ್‌ ಬಯಲಾಟಕ್ಕಾಗಿ ಎಂಬುದು ಸಾಕ್ಷಿ ಸಮೇತ ಸಾಬೀತು!! “ನೆಲಕ್ಕೆ ಜಾರಿ ಬಿದ್ದರೂ ಮೀಸೆಗೆ ಮಣ್ಣು ಹತ್ತಿಲ್ಲ” ಎಂಬ ಪ್ರವೃತ್ತಿಯ ಸಿಎಂ ಸಿದ್ದರಾಮಯ್ಯನವರು ಇದಕ್ಕೂ ರಂಗ್‌ ಬಿರಂಗಿ ಕತೆಗಳನ್ನು ಹೆಣೆಯುತ್ತಿರುವುದು ಅಸಹ್ಯದ ಪರಮಾವಧಿ’ ಎಂದು ಬಿಜೆಪಿ ಕುಟುಕಿದೆ.

ಇದನ್ನೂ ಓದಿ: ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಸಮರ!

‘ಹಲೋ ಅಪ್ಪಾ’ ಎಂದಿದ್ದು ವರುಣಾದ ಶಾಲೆಗಳಿಗೆ ಬಣ್ಣ ಬಳಿಸಲು ಎಂದು ಹಸಿ ಹಸಿ ಸುಳ್ಳಿನ ಸೌಧ ಕಟ್ಟಿದ್ದ ಸಿಎಂರನ್ನು, ಸಿದ್ದರಾಮಯ್ಯರವರು ಎಂದು ಕರೆಯಬೇಕೋ ಅಥವಾ ಸುಳ್ಳುರಾಮಯ್ಯರವರು ಎಂದು ಕರೆಯಬೇಕೋ ಎಂಬುದು ಸದ್ಯ ಆರೂವರೆ ಕೋಟಿ ಕನ್ನಡಿಗರಿಗಿರುವ ಗೊಂದಲ!! ಶ್ಯಾಡೋ ಸಿಎಂ ಯತೀಂದ್ರರವರು ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿ ರೆಡ್‍ಹ್ಯಾಂಡ್‌ ಆಗಿ ಸಿಕ್ಕಿಬಿದ್ದರೂ ಅದಕ್ಕೆ ಸಿಎಸ್‍ಆರ್‌ ಎಂಬ ಕಪೋಲಕಲ್ಪಿತ ಕತೆಗಳನ್ನು ಕಟ್ಟಿದ್ದ ಸಿಎಂ ಸಿದ್ದರಾಮಯ್ಯ ‍& ಕಂಪನಿ, ಈಗ ಏಕಾಏಕಿ ವಿವೇಕಾನಂದ ಎಂಬ ಪೊಲೀಸ್ ಇನ್ಸ್‌ಪೆಕ್ಟರ್‌ ಅವರನ್ನು ವರ್ಗಾವಣೆ ಪಟ್ಟಿಯಲ್ಲಿ ನಂಬರ್‌ 4ರಲ್ಲಿ ಕೂರಿಸಿದ್ದು ಏಕೆ ಎಂಬ ಪ್ರಶ್ನೆಗೆ ಉತ್ತರಿಸಲು ಮಾತ್ರ ತಡಬಡಾಯಿಸುತ್ತಾರೆ’ ಎಂದು ಬಿಜೆಪಿ ಕುಟುಕಿದೆ.

‘ನಾವು ಸರ್ಕಾರ ನಡೆಸುತ್ತೇವೆ, ನಾವು ವರ್ಗಾವಣೆ ಮಾಡಬಾರದಾ? ಎಲ್ಲರೂ ಅವರವರ ಸರ್ಕಾರದಲ್ಲಿ ವರ್ಗಾವಣೆ ಮಾಡುತ್ತಾರೆ ಎನ್ನುತ್ತಿರುವ ಸಿಎಂ ಸಿದ್ದರಾಮಯ್ಯರವರೇ, ಅಲ್ಲಿಗೆ ನಿಮ್ಮ ಮಗ ವರ್ಗಾವಣೆ ದಂಧೆಯಲ್ಲಿ ನಿರತರಾಗಿದ್ದಾರೆ ಎಂಬುದನ್ನು ಬಹಿರಂಗವಾಗಿ ನೀವು ಒಪ್ಪಿಕೊಂಡಂತೆ!! ಹೇರಳವಾಗಿ ತಪ್ಪುಗಳನ್ನು ಮಾಡುವುದು, ಆ ತಪ್ಪುಗಳನ್ನು ಮುಚ್ಚಿ ಹಾಕಲು ಸುಳ್ಳಿನ ಮಹಲುಗಳನ್ನೇ ನಿರ್ಮಿಸುವುದು ಸಿಎಂ ಸಿದ್ದರಾಮಯ್ಯರವರಿಗೆ ಹಾಗೂ ಕಾಂಗ್ರೆಸ್ಸಿಗರಿಗೆ ದೈನಂದಿನ ಕಾಯಕವಾಗಿಬಿಟ್ಟಿದೆ. ಕೊಂಚವೂ ನಾಚಿಕೆಯಿಲ್ಲದೆ ತಾವು ನುಡಿಯುವ ಸುಳ್ಳುಗಳನ್ನೇ ಸತ್ಯ ಎಂದು ವಾದಿಸುವುದು ಮುಖ್ಯಮಂತ್ರಿ ಹುದ್ದೆಗೆ ಶೋಭೆ ತರುವುದಿಲ್ಲವೆಂಬ ಅಂಶವನ್ನು ಸಿದ್ದರಾಮಯ್ಯರವರು ಮನಗಂಡರೆ ಒಳಿತು’ ಎಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮತ್ತು ಯತೀಂದ್ರ ಕಾಸಿಗಾಗಿ ಹುದ್ದೆ ವಿಡಿಯೋ ಲೀಕ್!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News