ಮೈಸೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಜಗಳದಲ್ಲಿ ಬಿಜೆಪಿ ಭರ್ಜರಿ ಲಾಭ ಮಾಡಿಕೊಂಡಿದೆ. ಎರಡೂ ಪಕ್ಷಗಳ ನಡುವಿನ ಒಳಜಗಳದ ಲಾಭ ಪಡೆದುಕೊಂಡ ಬಿಜೆಪಿ ಮೊದಲ ಬಾರಿಗೆ ಮೈಸೂರು ಮಹಾನಗರ ಪಾಲಿಕೆ(Mysuru City Corporation) ಮೇಯರ್ ಪಟ್ಟವನ್ನು ಅಲಂಕರಿಸುವಲ್ಲಿ ಯಶಸ್ವಿಯಾಗಿದೆ.


COMMERCIAL BREAK
SCROLL TO CONTINUE READING

ಮೈಸೂರು ಪಾಲಿಕೆಯ ಮೇಯರ್ ಪಟ್ಟ ಬಿಜೆಪಿ(BJP) ಪಾಲಾಗಿದೆ. ಬಿಜೆಪಿಯ ಅಭ್ಯರ್ಥಿ ಸುನಂದಾ ಪಾಲನೇತ್ರ(Sunanda Planethra) ಅರಮನೆ ನಗರಿಯ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಮೈಸೂರು ಪಾಲಿಕೆಯಲ್ಲಿ ಮೊದಲ ಬಾರಿಗೆ ‘ಕಮಲ’ ಅರಳಿದಂತಾಗಿದೆ. ಈ ಬಾರಿ ‘ಕೈ’ ಮತ್ತು ‘ತೆನೆ’ ಪಕ್ಷಗಳ ನಡುವಿನ ಮೈತ್ರಿ ಮುರಿದು ಬಿದಿತ್ತು. ಈ ಹಿನ್ನೆಲೆ  26 ಮತಗಳನ್ನು ಗಳಿಸಿದ್ದ ‘ಕಮಲ’ ಪಕ್ಷದ ಸುನಂದಾ ಪಾಲನೇತ್ರ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.


ಬಡಮಕ್ಕಳ ಪಾಲಿನ ಸ್ವೆಟರ್‌, ಮೊಟ್ಟೆ ಎಲ್ಲವನ್ನೂ ತಿನ್ನುತ್ತಿದ್ದಾರೆ: ಕಾಂಗ್ರೆಸ್ ಆರೋಪ


ಪಾಲಿಕೆಯಲ್ಲಿ ಹೈಡ್ರಾಮಾ: ಕಾಂಗ್ರೆಸ್ ಸದಸ್ಯರ ವಾಕ್ ಔಟ್


ಇಂದು ನಡೆದ ಮೈಸೂರು ಮಹಾನಗರ ಪಾಲಿಕೆ ಚುನಾವಣೆ(Mysore Mayor Election) ವೇಳೆ ದೊಡ್ಡ ಹೈಡ್ರಾಮಾವೇ ನಡೆಯಿತು. ಬೆಳಗ್ಗೆ ಮತ ಪ್ರಕ್ರಿಯೆ ಆರಂಭವಾದ ಕೂಡಲೇ ಜೆಡಿಎಸ್ ಸದಸ್ಯರು ತಟಸ್ಥ ನಿಲುವು ತೋರಿದ್ದರು. ಈ ವೇಳೆ ಕಾಂಗ್ರೆಸ್ ಸದಸ್ಯರು ಜೆಡಿಎಸ್ ವಿರುದ್ಧ ಧಿಕ್ಕಾರ, ಆಕ್ರೋಶ ಕೂಗಿ ವಾಕ್ ಔಟ್ ಮಾಡಿದರು. ಈ ಬಾರಿಯೂ ಮೇಯರ್ ಪಟ್ಟ ತಮಗೆ ಸಿಗಬೇಕೆಂದು ಕಾಂಗ್ರೆಸ್ ಬಿಗಿಪಟ್ಟು ಹಿಡಿದಿತ್ತು. ಆದರೆ ನಮಗೆ ಮೇಯರ್ ಸ್ಥಾನ ಕೊಡಿ ಎಂದು ಜೆಡಿಎಸ್ ನಾಯಕರು ಕೂಡ ಬಿಗಿಪಟ್ಟು ಹಿಡಿದಿದ್ದರು. ಎರಡೂ ಪಕ್ಷಗಳ ನಡುವೆ ಒಮ್ಮತದ ನಿರ್ಧಾರ ಮೂಡದ ಹಿನ್ನೆಲೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುರಿದುಬಿತ್ತು. ಇದರ ಸದುಪಯೋಗ ಪಡೆದುಕೊಂಡ ಕೇಸರಿ ಪಡೆ ಮೊದಲ ಬಾರಿಗೆ ಮೈಸೂರು ಪಾಲಿಕೆ ಮೇಯರ್ ಪಟ್ಟವನ್ನು ಅಲಂಕರಿಸುವಲ್ಲಿ ಯಶಸ್ವಿಯಾಯಿತು. ಬಿಜೆಪಿ ಕಾರ್ಯಕರ್ತರು ಪಾಲಿಕೆ ಎದುರು ಸಂಭ್ರಮಾಚರಣೆ ನಡೆಸಿದರು.  


ಇದನ್ನೂ ಓದಿ: NEP : 'ದೇಶದಲ್ಲಿ 'ಹೊಸ ರಾಷ್ಟ್ರೀಯ ಶಿಕ್ಷಣ ನೀತಿ' ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ'


ಸುನಂದಾ ಪಾಲನೇತ್ರರಿಗೆ ಸಿಎಂ ಅಭಿನಂದನೆ


ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿ ಆಯ್ಕೆಯಾದ ಬಿಜೆಪಿಯ ಸುನಂದಾ ಪಾಲನೇತ್ರ(Sunanda Planethra) ಅವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಅಭಿನಂದನೆ ಸಲ್ಲಿಸಿದ್ದಾರೆ. ಪಕ್ಷದ ಕಾರ್ಯಕರ್ತರು, ಸಂಸದರು, ಶಾಸಕರು ಹಾಗೂ ಮೈಸೂರಿನ ಜನತೆಗೆ ಸಿಎಂ ಧನ್ಯವಾದ ತಿಳಿಸಿದ್ದಾರೆ.


ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿನಂದನೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.