ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಹುಮತ ವಿಶ್ವಾಸ ಕಳೆದುಕೊಂಡಿದ್ದು, ಅವರಿಗೆ ಸಿಎಂ ಸ್ಥಾನದಲ್ಲಿ ಮುಂದುವರೆಯಲು ಯಾವುದೇ ನೈತಿಕತೆಯಿಲ್ಲ. ಕೂಡಲೇ ರಾಜೀನಾಮೆ ನೀಡಬೇಕೆಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೋಮವಾರ ಒತ್ತಾಯಿಸಿದ್ದಾರೆ.


COMMERCIAL BREAK
SCROLL TO CONTINUE READING

ಇಂದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿಎಂ ಕುಮಾರಸ್ವಾಮಿ ಅವರು ಸದನದ ವಿಶ್ವಾಸ ಕಳೆದುಕೊಂಡಿದ್ದು, ಆ ಸ್ಥಾನದಲ್ಲಿ ಮುಂದುವರೆಯಲು ಯಾವುದೇ ನೈತಿಕ ಹಕ್ಕಿಲ್ಲ. ಈ ಕೂಡಲೇ ಅವರು ಸಿಎಂ ಸ್ಥಾನಕ್ಕೆ  ರಾಜೀನಾಮೆ ನೀಡಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ" ಎಂದು ಹೇಳಿದರು.



ಇಂದು ಬೆಳಗ್ಗೆಯಿಂದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆಸಲಾಗಿದ್ದು, ನಾಳೆ ಸಿಎಂ ರಾಜೀನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಯೊಂದು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಯಡಿಯೂರಪ್ಪ ಹೇಳಿದರು. 


ಮುಂದುವರೆದು ಮಾತನಾಡಿದ ಅವರು, ಪ್ರಮಾಣ ವಚನಕ್ಕೆ ದಿನಾಂಕ ನಿಗದಿ ಮಾಡುವುದಾಗಲಿ, ಮತ್ತೊಂದಾಗಲಿ ನಾನು ಮಾಡಿಲ್ಲ, ಮಾಡುವುದೂ ಇಲ್ಲ, ಎಲ್ಲವೂ ಅದಾಗುವ ಕಾಲಕ್ಕೆ ತಾನಾಗಿಯೇ ಆಗುತ್ತದೆ  ಎಂದು ಯಡಿಯೂರಪ್ಪ ಹೇಳಿದರು.