ಬೆಂಗಳೂರು: ಬೆಂಗಳೂರು ಮಹಾನಗರದ ಕೇಂದ್ರ, ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ಬಿಜೆಪಿ ಯುವ ಮೋರ್ಚಾ (BJP youth Morcha) ವತಿಯಿಂದ ಇಂದು ವೈಯಾಲಿಕಾವಲ್‍ನಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು.


COMMERCIAL BREAK
SCROLL TO CONTINUE READING

ರಾಮನಗರ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಎದುರಲ್ಲೇ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ (Congress MP DK Suresh) ಮತ್ತು ಸಚಿವ ಡಾ.ಅಶ್ವತ್ಥ ನಾರಾಯಣ ಅವರ ನಡುವೆ ನಡೆದ ಜಟಾಪಟಿ ವಿಷಯ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾಯಿಂದ ಪ್ರತಿಭಟನೆ ನಡೆಸಿ ಮನೆಗೆ ಮುತ್ತಿಗೆ ಯತ್ನ ಮಾಡಲಾಯಿತು.


ಮೈಕ್ ಕಸಿದು, ತಳ್ಳಾಟ ನಡೆಸಿದ್ದಾರೆ. ಅಲ್ಲದೆ, ಅಸಭ್ಯ ಹಾಗೂ ಗೂಂಡಾ ವರ್ತನೆ ತೋರಿದ್ದಾರೆ ಎಂದು ಘೋಷಣೆ ಕೂಗಿದ ಕಾರ್ಯಕರ್ತರು, ಡಿ.ಕೆ.ಸುರೇಶ್ ಮನೆ ಮುಂದೆ ಪ್ರತಿಭಟನೆ ನಡೆಸಿದರು. ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮನೆಗೆ ಮುತ್ತಿಗೆ ಹಾಕಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.


 ಬಿಜೆಪಿಯೊಳಗೆ ಎಲ್ಲ ಗೂಂಡಾಗಳಿದ್ದಾರೆ, ಇದೊಂದು ಜಂಗಲ್ ರಾಜ್ ರೀತಿ ಆಗಿದೆ: ರಾಮಲಿಂಗರೆಡ್ಡಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.