ತುಮಕೂರು: ಅನಾರೋಗ್ಯದಿಂದ ಬಳಲುತ್ತಿರುವ ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಗ್ಯ ವಿಚಾರಿಸಿದರು. 


COMMERCIAL BREAK
SCROLL TO CONTINUE READING

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ. ಶ್ರೀಗಳ ಪಾದಮುಟ್ಟಿ ನಮಸ್ಕರಿಸಿದೆ, ಅವರು ಪ್ರಸಾದ ಸೇವಿಸಿ ಹೋಗುವಂತೆ ಕೈ ಸನ್ನೆ‌ ಮಾಡಿದರು. ಒಂದು ವಾರದ ಬಳಿಕ ಶ್ರೀಗಳು ಜನರಿಗೆ ದರ್ಶನ ನೀಡಲಿದ್ದಾರೆ. ಭಕ್ತಾಧಿಗಳು ಆತಂಕಪಡುವ ಅಗತ್ಯವಿಲ್ಲ. ಶ್ರೀಗಳ ಆರೋಗ್ಯದ ಕುರಿತಂತೆ ವೈದ್ಯರ ಜೊತೆ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದರು.


ಶ್ರೀಗಳಿಗೆ ಕಳೆದ ಐದಾರು ದಿನಗಳಿಂದ ಕಫ ಕಟ್ಟಿಕೊಂಡಿದ್ದರಿಂದ ಸೋಂಕು ಕಾಣಿಸಿಕೊಂಡಿದ್ದು, ಶ್ವಾಸಕೋಶಕ್ಕೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಡಾ.ಪರಮೇಶ್ ನೇತೃತ್ವದಲ್ಲಿ ಮಠದಲ್ಲಿಯೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆದಿದೆ.