ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರದ ಪರವಾಗಿ ಮತ ಚಲಾಯಿಸುವಂತೆ ಕೊಳ್ಳೇಗಾಲ ಕ್ಷೇತ್ರದ ಏಕೈಕ ಬಿಎಸ್‌ಪಿ ಶಾಸಕ ಎನ್‌. ಮಹೇಶ್‌ ಅವರಿಗೆ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಸೂಚನೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಮೈತ್ರಿ ಸರ್ಕಾರದ ಪರವಾಗಿ ಮತಚಲಾಯಿಸುವ ಬಗ್ಗೆ ಭಾನುವಾರ ಬೆಳಿಗ್ಗೆ ಪ್ರತಿಕ್ರಿಯಿಸಿದ್ದ ಕೊಳ್ಳೇಗಾಲ ಶಾಸಕ ಎನ್. ಮಹೇಶ್, ಮಾಯಾವತಿ ಅವರು ತಟಸ್ಥವಾಗಿರಲು ಹೇಳಿದ್ದಾರೆ. ನಮ್ಮ ವರಿಷ್ಠರ ಸೂಚನೆ ಮೇರೆಗೆ ಸೋಮವಾರ ಸದನಕ್ಕೆ ಹೋಗುವುದಿಲ್ಲ ತಟಸ್ಥವಾಗಿರುತ್ತೇನೆ ತಿಳಿಸಿದ್ದರು. ಇದರಿಂದಾಗಿ ಜೆಡಿಎಸ್ ಪ್ರಮುಖರು ಆತಂಕಕ್ಕೊಳಗಾಗಿದ್ದರು.


ಇದರ ಬೆನ್ನಲ್ಲೇ ಭಾನುವಾರ ಸಂಜೆ ಮಾಯಾವತಿ ತಮ್ಮ ಪಕ್ಷದ ಶಾಸಕ ಮಹೇಶ್​​ಗೆ ಮೈತ್ರಿ ಸರ್ಕಾರದ ಪರವಾಗಿ ಮತ ಚಲಾಯಿಸುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.