ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಬಳಿಕ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶಿವಮೊಗ್ಗ ಸಂಸದ ಬಿ.ಎಸ್.​ ಯಡಿಯೂರಪ್ಪ,  ಬಳ್ಳಾರಿ ಸಂಸದ ಶ್ರೀರಾಮುಲು ಹಾಗೂ ಮಂಡ್ಯ ಸಂಸದ ಪುಟ್ಟರಾಜು ಅವರ ರಾಜೀನಾಮೆ ಅಂಗೀಕಾರವಾಗಿದೆ.


COMMERCIAL BREAK
SCROLL TO CONTINUE READING

ಶಿವಮೊಗ್ಗ ಸಂಸದರಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾದರೆ, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶ್ರೀರಾಮುಲು  ಹಾಗೂ ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್​ ಮುಖಂಡ ಪುಟ್ಟರಾಜು ಶಾಸಕರಾಗಿ ಆಯ್ಕೆಯಾಗಿದ್ದರು. ಈ ಹಿನ್ನಲೆಯಲ್ಲಿ ಈ ಮೂವರು ತಮ್ಮ ಸಂಸದ ಸ್ಥಾನವನ್ನು ತ್ಯಜಿಸಿದ್ದಾರೆ.