ಹುಬ್ಬಳ್ಳಿ: ಮುಖ್ಯಮಂತ್ರಿ ಕುಮಾರಸ್ವಾಮಿ ಶುಕ್ರವಾರ ಬಿಡುಗಡೆ ಮಾಡಿದ ‘ಆಪರೇಷನ್ ಆಡಿಯೋ’ದಲ್ಲಿ ಇರುವುದು ನನ್ನದೇ ಧ್ವನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.


COMMERCIAL BREAK
SCROLL TO CONTINUE READING

ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನನ್ನ ಬಲಿ ಗುರುಮಠಕಲ್ ಜೆಡಿಎಸ್ ಶಾಸಕ ನಾಗನಗೌಡ ಅವರ ಪುತ್ರ ಶರಣ್ ಗೌಡ ಮಾತನಾಡಿದ್ದು ನಿಜ. ಆದರೆ ಸಿಎಂ ಕುಮಾರಸ್ವಾಮಿ ಅವರೇ ಅವರನ್ನು ನನ್ನ ಬಳಿ ಕಳುಹಿಸಿಕೊಟ್ಟಿದ್ದಾರೆ. ಆಡಿಯೋ ಹಿಂದೆ ಕುತಂತ್ರ ರಾಜಕಾರಣವಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯದಲ್ಲಿ ಥರ್ಡ್‍ಗ್ರೇಡ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ' ಎಂದು ಕಿಡಿಕಾರಿದರು.


ನಾಳೆ ಸದನದಲ್ಲಿ 'ಆಪರೇಷನ್ ಆಡಿಯೋ' ಸದ್ದು:
ಮುಂದುವರೆದು ಮಾತನಾಡಿದ ಅವರು, ಆಡಿಯೋದಲ್ಲಿ ಮುಖ್ಯಮಂತ್ರಿಗಳು ತಮಗೆ ಬೇಕಾಗಿರುವುದನ್ನು ಮಾತ್ರ ಬಿಡುಗಡೆ ಮಾಡಿದ್ದಾರೆ. ಉಳಿದ ಭಾಗವನ್ನು ಸೋಮವಾರ ಸದನದಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದರು.


ಇದೇ ವೇಳೆ ಸಚಿವ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮಾಡಿರುವ ‘ಸೂಟ್ ಕೇಸ್ ಸಂಸ್ಕೃತಿ’ ಆರೋಪಕ್ಕೆ ಉತ್ತರಿಸಿದ ಯಡಿಯೂರಪ್ಪ, ಇಂತಹ ಹೇಳಿಕೆಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ನಾನು ಯಾವುದೇ ತನಿಖೆಗೂ ಸಿದ್ದ ಎಂದರು.