ಹೊಸಕೋಟೆ : ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್ಆರ್ ಟಿಸಿ  ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ದಂಪತಿ ಸೇರಿ ಸ್ಥಳದಲ್ಲೇ ನಾಲ್ಕು ಜನ ಮೃತಪಟ್ಟಿದ್ದಾರೆ. 20ಕ್ಕೂ ಅಧಿಕ ಜನರಿಗೆ ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥೀತಿ ಗಂಭೀರವಾಗಿದೆ ಎನ್ನಲಾಗಿದೆ. 


COMMERCIAL BREAK
SCROLL TO CONTINUE READING

ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ನಿಂತಿದ್ದ ಲಾರಿಗೆ ಕೆಎಸ್ಆರ್ ಟಿಸಿ  ಬಸ್ ಡಿಕ್ಕಿ ಹೊಡೆದಿದೆ.  ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿಯ ಮೈಲಾಪುರ ಗೇಟ್ ಬಳಿ  ದುರ್ಘಟನೆ ಸಂಭವಿಸಿದೆ. ಕಲ್ಲು ತುಂಬಿ ನಿಲ್ಲಿಸಿದ್ದ ಲಾರಿಗೆ ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. 


ಇದನ್ನೂ ಓದಿ : Sonia Gandhi : ಭಾರತ್‌ ಜೋಡೋ ಯಾತ್ರೆಗೆ ಕೈ ಅಧಿನಾಯಕಿ ಬಲ : ಇಂದು ರಾಜ್ಯಕ್ಕೆ ಸೋನಿಯಾ ಭೇಟಿ


ಬಸ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಬಸ್ಸಿನಲ್ಲಿದ್ದ ಆಂಧ್ರ  ಮೂಲದ ಗಂಡ ಹೆಂಡತಿ ಸ್ಥಳದಲ್ಲೇ ಅಸು ನೀಗಿದ್ದಾರೆ. ಮೂವರು ಮಕ್ಕಳು ಸೇರಿದಂತೆ 20ಕ್ಕೂ ಅಧಿಕ ಜನರಿಗೆ ಗಾಯವಾಗಿದೆ. ಮುಂಜಾನೆ 1.30ರ ಸಮಯದಲ್ಲಿ ಈ ಘಟನೆ ನಡೆದಿದೆ.


ಗಾಯಾಳುಗಳನ್ನು ಹೊಸಕೋಟೆಯ ಖಾಸಗಿ ಆಸ್ವತ್ರೆಗೆ ದಾಖಳಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಹಾಗೂ ಹೊಸಕೋಟೆ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನ ನಡೆಸಿದ್ದಾರೆ. 


ಇದನ್ನೂ ಓದಿ : Watch: ಸುರಿಯುವ ಸೋನೆಯಲ್ಲಿಯೂ ಭಾಷಣ ನಿಲ್ಲಿಸದ ರಾಹುಲ್..!


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.