ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರಿಗೆ ಯಾವುದೇ ಷರತ್ತುಗಳಿಲ್ಲದೆ ಬಸ್ ಪ್ರಯಾಣ ಉಚಿತವಾಗಿರುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಬುಧವಾರ ಸಭೆ ಕರೆದಿದ್ದು, ಈ ಯೋಜನೆಗೆ ತಗಲುವ ವೆಚ್ಚದ ವರದಿಯನ್ನು ಅವರಿಗೆ ಸಲ್ಲಿಸಲಾಗುವುದು ಎಂದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ-Rajasthan: ಸಚಿನ್ ಪೈಲಟ್ ಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ? 4 ಗಂಟೆಗಳ ಕಾಲ ನಡೆದ ಮೀಟಿಂಗ್ ನಲ್ಲಿ ನಡೆದಿದ್ದೇನು?


ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಮುಖ್ಯಸ್ಥರೊಂದಿಗಿನ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, “ಪ್ರಣಾಳಿಕೆಯಲ್ಲಿ ನಾವು ಈ ಯೋಜನೆಗೆ ಮಹಿಳೆಯರನ್ನು ವರ್ಗೀಕರಿಸಿಲ್ಲ.ಹಾಗಾಗಿ ಎಲ್ಲಾ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅರ್ಹರಾಗಿರುತ್ತಾರೆ.ಮುಖ್ಯಮಂತ್ರಿಗಳು ಬುಧವಾರ ಸಚಿವ ಸಂಪುಟ ಸಭೆ ಕರೆದಿದ್ದು,ಬಳಿಕ ಘೋಷಣೆ ಮಾಡಲಿದ್ದಾರೆ. ಈ ಯೋಜನೆಯ ವೆಚ್ಚದ ವರದಿಯನ್ನು ನಾವು ನಾಳೆ ಸಿಎಂಗೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.


ಇದನ್ನೂ ಓದಿ-Banking Frauds: ಬ್ಯಾಂಕ್ ಗ್ರಾಹಕರಿಗೆ ಶಾಕ್ ನೀಡಿದ ಆರ್ಬಿಐ, ಗ್ರಾಹಕರು ಏನ್ ಮಾಡ್ಬೇಕು?


ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣಕ್ಕೆ ಅವಕಾಶ ನೀಡುವುದಾಗಿ ಘೋಷಿಸಿತ್ತು, ಈ ಹಿನ್ನೆಲೆಯಲ್ಲಿ ಈಗ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಬೆನ್ನಲ್ಲೇ ಈಗ ಕಾಂಗ್ರೆಸ್ ಸರ್ಕಾರ ತನ್ನ ಆಶ್ವಾಸನೆಯನ್ನು ಜಾರಿಗೆಗೊಳಿಸಲು ಹೊರಟಿದೆ.


ಈ ವಿಚಾರವಾಗಿ ಸರ್ಕಾರದ ಮೇಲೆಯೂ ಸಹಿತ ಒತ್ತಡ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಈಗ ಕಾಂಗ್ರೆಸ್ ಸರ್ಕಾರ ಈ ಘೋಷಣೆಯನ್ನು ಜಾರಿಗೆ ತರಲು ಮುಂದಾಗಿದೆ.ಇತ್ತೀಚೆಗಷ್ಟೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟವು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಕೆಲವು ಮಹಿಳಾ ಪ್ರಯಾಣಿಕರು ಈಗಾಗಲೇ ಬಸ್‌ಗಳಲ್ಲಿ ಪ್ರಯಾಣಿಸುವಾಗ ಟಿಕೆಟ್ ದರವನ್ನು ಪಾವತಿಸಲು ನಿರಾಕರಿಸುತ್ತಿರುವುದರಿಂದ ಯೋಜನೆಯನ್ನು ಶೀಘ್ರವಾಗಿ ಜಾರಿಗೆ ತರುವಂತೆ ಕೋರಿದ್ದಾರೆ. ಯೋಜನೆಯ ವೆಚ್ಚವನ್ನು ಅಂದಾಜಿಸಿ ಕೆಎಸ್‌ಆರ್‌ಟಿಸಿಗೆ ಮುಂಗಡ ಪರಿಹಾರ ನೀಡುವಂತೆ ಸಿಬ್ಬಂದಿ ಮುಖ್ಯಮಂತ್ರಿಯವರನ್ನು ಕೋರಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.