ಬೆಂಗಳೂರು: ಮುಖ್ಯಮಂತ್ರಿಗಳು ಅತಿ ಹೆಚ್ಚು ಮೊತ್ತದ ಬಜೆಟ್ ಮಂಡಿಸಿದ್ದು, ರಾಜ್ಯದ ಮೇಲೆ ಸಾಲದ ಹೊರೆ 7.6 ಲಕ್ಷ ಕೋಟಿಗೆ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ಇಂದು ಮಾತನಾಡಿದ ಅವರು, ಸಾಲದ ಹೊರೆ ತಗ್ಗಿಸುವ ಸಲುವಾಗಿ ಹಣಕಾಸಿನ ಸಚಿವರು ಯಾವುದೇ ಕ್ರಿಯಾಯೋಜನೆ ರೂಪಿಸಿಲ್ಲ ಎಂದು ವಿವರಿಸಿದರು. ಸರಕಾರದ ಬದ್ಧ ವೆಚ್ಚ, ಗ್ಯಾರಂಟಿಗಳ ವೆಚ್ಚವು ಬಜೆಟ್ನ ಶೇ 80ರಷ್ಟಾಗಿದೆ. ಬಂಡವಾಳ ವೆಚ್ಚಕ್ಕೆ ಸಿಗಬೇಕಾದಷ್ಟು ಅನುದಾನ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದರಿಂದ ರಾಜ್ಯದಲ್ಲಿ ಯಾವ ರೀತಿ ಅಭಿವೃದ್ಧಿ ಸಾಧ್ಯ ಎಂದು ಗಮನಿಸಲು ಕೋರಿದರು.
ಸಾಲದ ಪ್ರಮಾಣ ಒಂದೆಡೆ ಏರುತ್ತಿದೆ. 2025-26ನೇ ಸಾಲಿನ ಅಂತ್ಯಕ್ಕೆ ರಾಜ್ಯ ಸರಕಾರವು 45,600 ಕೋಟಿ ಬಡ್ಡಿ ಪಾವತಿಸಬೇಕಾಗುತ್ತದೆ. 2027-28ಕ್ಕೆ ಸುಮಾರು 60 ಸಾವಿರಕ್ಕೂ ಹೆಚ್ಚು ಕೋಟಿ ರೂಪಾಯಿಗಳನ್ನು ಕೇವಲ ಬಡ್ಡಿಗೇ ಮೀಸಲಿಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು. 2027-28ಕ್ಕೆ ರಾಜ್ಯದ ಒಟ್ಟು ಸಾಲ 9 ಲಕ್ಷ ಕೋಟಿ ದಾಟಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಇದನ್ನೂ ಓದಿ:ಶುಭ ಶಕುನಗಳನ್ನು ತರುವ ಕನಸುಗಳು ಇವು..! ನಿಮ್ಮ ಡ್ರೀಮ್ಸ್ ಹೇಳುತ್ತದೆ ನಿಮ್ಮ ಭವಿಷ್ಯ.. ಹೇಗೆ ಗೊತ್ತೆ..?
ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದು ಕಡೆ ಬೆಲೆ ಏರಿಕೆ ಪರಿಣಾಮವಾಗಿ ಹಣದುಬ್ಬರ ಹೆಚ್ಚಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಅತಿ ಹೆಚ್ಚು ಹಣದುಬ್ಬರ ಇದೆ. ಶೇ 5.03ರಷ್ಟು ಹಣದುಬ್ಬರ ನಮ್ಮ ರಾಜ್ಯದಲ್ಲಿದ್ದರೆ, ಪಕ್ಕದ ಮಹಾರಾಷ್ಟ್ರದಲ್ಲಿ ಅದು 3.39 ರಷ್ಟಿದೆ. ಆಂಧ್ರ ಪ್ರದೇಶದಲ್ಲಿ 4.02, ಗುಜರಾತ್ನಲ್ಲಿ 3.88 ರಷ್ಟಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ಹಣದುಬ್ಬರ ನಮ್ಮ ರಾಜ್ಯದಲ್ಲಿ ಇದೆ ಎಂದು ಗಮನ ಸೆಳೆದರು.
ಜಿಡಿಪಿ ಬೆಳವಣಿಗೆ ಬಗ್ಗೆ ಮಾತನಾಡಿದ ಅವರು, ನಮ್ಮ ಬಿಜೆಪಿ ಸರಕಾರ ರಾಜ್ಯದಲ್ಲಿ ಇದ್ದಾಗ 2022-23ರಲ್ಲಿ ಅದು 14.2 ಶೇಕಡಾದಷ್ಟಿತ್ತು. ಈ ಕಾಂಗ್ರೆಸ್ ಸರಕಾರ ಬಂದ ಬಳಿಕ 2023-24ರಲ್ಲಿ 9.6 ಶೇಕಡಾದಷ್ಟಾಗಿದೆ. ಅಂದರೆ ಹಿಂದಿನ ಬಿಜೆಪಿ ಸರಕಾರದಲ್ಲಿ 14.2 ಶೇ ಇದ್ದರೆ, ಈಗಿನ ಕಾಂಗ್ರೆಸ್ ಸರಕಾರದಲ್ಲಿ ಅದು ಶೇ 9.6ಕ್ಕೆ ಇಳಿದಿದೆ. ಆರ್ಥಿಕ ಪರಿಸ್ಥಿತಿ ಏನಾಗುತ್ತಿದೆ ಎಂದು ನಾವು ಚರ್ಚೆ ಮಾಡಬೇಕಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಸರಕಾರ ಬಂದ ಬಳಿಕ ಹಣಕಾಸಿನ ಕೊರತೆ ಕುರಿತು ಚರ್ಚೆ ನಡೆದಿದೆ. ಈ ಸರಕಾರ ಬಂದ ಬಳಿಕ 2.95ರಷ್ಟು ಹಣಕಾಸಿನ ಕೊರತೆ ಜಾಸ್ತಿ ಆಗಿದೆ. ಅದು ಬಿಜೆಪಿ ಸರಕಾರದಲ್ಲಿ 2.14ರಷ್ಟಿದ್ದರೆ, ಈಗ 2.95ಕ್ಕೆ ಏರಿದೆ. ಕೈಗಾರಿಕಾ ಬೆಳವಣಿಗೆ ವಿಷಯದಲ್ಲಿ ಇಡೀ ದೇಶದಲ್ಲಿ ಎಲ್ಲ ರಾಜ್ಯಗಳು ಸ್ಪರ್ಧೆಗಿಳಿದಿವೆ. ಕಳೆದ 20 ತಿಂಗಳಿನಿಂದ ಈ ರಾಜ್ಯ ಸರಕಾರವು ಕೈಗಾರಿಕಾ ಬೆಳವಣಿಗೆ ವಿಷಯದಲ್ಲಿ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಇದರ ಪರಿಣಾಮವಾಗಿ 2024-25ರಲ್ಲಿ ನಮ್ಮ ರಾಜ್ಯದ ಕೈಗಾರಿಕಾ ಬೆಳವಣಿಗೆಯು 5.8 ಶೇಕಡಾದಷ್ಟಿದೆ ಎಂದರು.
ಇದನ್ನೂ ಓದಿ:ಯಪ್ಪೋ... ಎನ್ ಹೇಳ್ತಿದಾಳೆ ಈಕೆ.. ಪ್ರತಿ 10 ನಿಮಿಷಗಳಿಗೊಮ್ಮೆ...! ಮೈಂಡ್ ಬ್ಲಾಕ್ ಆಗೋಯ್ತು
ಬಂಡವಾಳ ಹೂಡಿಕೆಯು ಕೇವಲ ಹಾಳೆ ಮೇಲಿದೆಯೇ ಹೊರತು ಯಾವುದೂ ಅನುಷ್ಠಾನಕ್ಕೆ ಬಂದಿಲ್ಲ. ಕಳೆದ 20 ತಿಂಗಳಿನಲ್ಲಿ ಸರಕಾರ ತಲೆ ಕೆಡಿಸಿಕೊಳ್ಳದ ಕಾರಣ ಕೈಗಾರಿಕಾ ಬೆಳವಣಿಗೆ ಕಡಿಮೆ ಆಗಿದೆ ಎಂದು ತಿಳಿಸಿದರು. ಈ ಬಜೆಟ್ ಅವಲೋಕನ ಮಾಡಿದರೆ ಇದು ರಾಜ್ಯದ ಯಾವುದೇ ವರ್ಗದ ಜನರಿಗೆ ಸಂತೃಪ್ತಿ ತಂದಿಲ್ಲ ಎಂದರಲ್ಲದೆ, ನಾಡಿನ ಕೃಷಿಕರು, ಬಡವರು, ಮಹಿಳೆಯರು, ಯುವಕರು ಸೇರಿ ಎಲ್ಲರಿಗೂ ಈ ಬಜೆಟ್ ನಿರಾಸೆ ತಂದಿದೆ. ಶಿಕ್ಷಣ, ಆರೋಗ್ಯ ಸೇರಿ ಯಾವುದೇ ಆದ್ಯತಾ ಕ್ಷೇತ್ರಗಳಿಗೂ ಗಮನ ಹರಿಸಿಲ್ಲ ಎಂದು ಟೀಕಿಸಿದರು.
ಮಡಿವಾಳರು, ಸವಿತಾ ಸಮಾಜ, ನೇಕಾರರು, ವಿಶ್ವಕರ್ಮ ಸಮುದಾಯ ಸೇರಿ ಕಾಯಕ ಸಮುದಾಯಕ್ಕೆ ಈ ಬಜೆಟ್ ಒತ್ತು ಕೊಟ್ಟಿಲ್ಲ. ಅಹಿಂದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಈ ಸರಕಾರವು ಆ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ