ಬೆಂಗಳೂರು : ಸಿದ್ದರಾಮಯ್ಯ ಅವರ 14 ನೇ ‌ಬಜೆಟ್ ಸಾಕಷ್ಟು‌ ನಿರೀಕ್ಷೆ ಹುಟ್ಟಿಸಿತ್ತು. ಆದರೆ ಇದೊಂದು ನಿರಾಶದಾಯಕ ಬಜೆಟ್  ಎಂದು ಶಾಸಕ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಅಲ್ಲದೆ ಈ ಬಜೆಟ್ ನಿಂದ ಬಹುಶಃ ಡಿಕೆಶಿ ಅವರಿಗೂ ನಿರಾಶೆಯಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. 


COMMERCIAL BREAK
SCROLL TO CONTINUE READING

ಡಿಕೆಶಿ ಅವರು ಚುನಾವಣೆ ಮೊದಲು ಪಾದಯಾತ್ರೆ ಮಾಡಿದ್ದರು. ಮೇಕೇದಾಟಿಗೆ 3 ಸಾವಿರ, ಮಹದಾಯಿಗೆ 10 ಕೋಟಿ ಮೀಸಲು ಅಂತ  ಹೇಳಿದ್ದರು. ಆದರೆ ಈಗ ಬಜೆಟ್ ನಲ್ಲಿ ಆ ಹಣ ಮೀಸಲಿಟ್ಟಿಲ್ಲ. ಈ ಬಜೆಟ್ ನೋಡಿದರೆ ಸಿದ್ದರಾಮಯ್ಯ ಅವರು ಡಿಕೆಶಿ ಮೇಲೆ ಸೇಡು ತೀರಿಸಿಕೊಂಡಂತಿದೆ ಎಂದು ಶಾಸಕ ಬಿ ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. 


ಇದನ್ನೂ ಓದಿ : ಅವಾಸ್ತವಿಕ ಗ್ಯಾರಂಟಿಗಳ ಅಪ್ರಬುದ್ಧ ಅನುಷ್ಠಾನದಿಂದ ವಿನಾಶದತ್ತ ರಾಜ್ಯದ ಆರ್ಥಿಕತೆ: ಬಿಜೆಪಿ


ಸಿದ್ದರಾಮಯ್ಯ ಅವರ ಶ್ರಮ, ಬುದ್ದಿವಂತಿಕೆ ಎಲ್ಲಾ ವ್ಯರ್ಥ ಆಗಿದೆ. ಬಜೆಟ್ ಮಂಡನೆಯಲ್ಲಿ ಕೇಂದ್ರದ ಮೇಲೆ ಗೂಬೆ ಕೂರಿಸೋದು, ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಬೈಯ್ಯೋದು ಮಾಡಿದ್ದಾರೆ. ಇಡೀ ಬಜೆಟ್ ಪೊಲಿಟಿಕಲ್ ಸ್ಟೇಟ್ಮೆಂಟ್ ಅಂದ್ರೆ ತಪ್ಪಾಗಲ್ಲ ಎಂದಿದ್ದಾರೆ. 


ಇನ್ನು ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಣ ಮೀಸಲಿಟ್ಟಿಲ್ಲ. ಇದು ನಿಜವಾಗಿಯೂ ದುರಾದೃಷ್ಟ ಎಂದಿದ್ದಾರೆ.  ಅಲ್ಲದೆ, ಬಜೆಟ್ ಮಂಡನೆ ವೇಳೆ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸಿದ್ದಾರೆ‌. ಬಿಜೆಪಿ ಆರ್ಥಿಕ ಶಿಸ್ತು ಕಾಪಾಡದಿದ್ರೆ ಇವತ್ತು ಕಷ್ಟ  ಆಗಿರುತ್ತಿತ್ತು. ಬಂಡವಾಳ ಹೂಡಿಕೆಯಲ್ಲೂ 9.8ಲಕ್ಷ ಕೋಟಿ MOU ಆಗಿದೆ. ಬಿಜೆಪಿ ಭ್ರಷ್ಟಾಚಾರ ನಡೆದಿದ್ರೆ GST ಹೆಚ್ಚಳವಾಗ್ತಿತ್ತಾ.? ಎಂದು ಪ್ರಶ್ನಿಸಿದ್ದಾರೆ. 


ಇದನ್ನೂ ಓದಿ : Karnataka Budget 2023-24: ಡಾ.ಪುನೀತ್ ರಾಜಕುಮಾರ್ ಹೆಸರಿನಲ್ಲಿ ಹೃದಯಾಘಾತ ತಡೆಗೆ ಅನುದಾನ


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=38l6m8543Vk
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.