ಕಾಲಭೈರವ ಎದ್ದು ಕುಣಿಯುವ ಸಮಯ ಬಂದಿದೆ : ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

ರಾಜ್ಯದಲ್ಲಿ ಮತ್ತೆ ಜೆಡಿಎಸ್ ಸರ್ಕಾರ ಬರುವುದಕ್ಕೆ ಹರ ಹರ ಮಹದೇವ ಎಂದು ಜೋಳಿಗೆ ತೆಗೆದುಕೊಂಡು ಹೊರಡುತ್ತೇನೆ ಎಂದು ಹೇಳಿದರು.

Written by - Prashobh Devanahalli | Last Updated : Apr 17, 2022, 01:11 PM IST
  • ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ಅಧಿಕಾರ ಸ್ವೀಕಾರ
  • ಕಾಲಭೈರವ ಎದ್ದು ಕುಣಿಯುವ ಸಮಯ ಬಂದಿದೆ ಎಂದ ಇಬ್ರಾಹಿಂ
  • ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಧನ್ಯವಾದ ಎಂದು ಭಾಷಣ ಪ್ರಾರಂಭ
ಕಾಲಭೈರವ ಎದ್ದು ಕುಣಿಯುವ ಸಮಯ ಬಂದಿದೆ : ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ title=
JDS

ಬೆಂಗಳೂರು: ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇಂದು ನಗರದ ಜೆಪಿ ಭವನದಲ್ಲಿ ನಡೆದ ರಾಜ್ಯಾಧ್ಯಕ್ಷ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕಾರ ಮಾಡಿ, ಕಾಲ ಭೈರವ ಎದ್ದು ಕುಣಿಯುವ ಸಮಯ ಬಂದಿದೆ. ರಾಜ್ಯದಲ್ಲಿ ಮತ್ತೆ ಜೆಡಿಎಸ್ ಸರ್ಕಾರ ಬರುವುದಕ್ಕೆ ಹರ ಹರ ಮಹದೇವ ಎಂದು ಜೋಳಿಗೆ ತೆಗೆದುಕೊಂಡು ಹೊರಡುತ್ತೇನೆ ಎಂದು ಹೇಳಿದರು.

ಇದನ್ನು ಓದಿ: ಜೆಡಿಎಸ್‌ ಅಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ಅಧಿಕಾರ ಸ್ವೀಕಾರ

ಜೆಡಿಎಸ್ ನನಗೆ ಪಾರ್ಟಿ ಅಲ್ಲ, ಅದು ನನ್ನ ಕುಟುಂಬ. ನಾನು ಕಳೆದ ಒಂದು ವರ್ಷದಿಂದ ಏನ್ ಹೇಳಿದ್ದೆ ಅದೇ ಆಗ್ತಾಯಿದೆ. ದೇವೇಗೌಡರಿಗೆ ಸಂಸತ್ತಿನಲ್ಲಿ ಕಾಂಗ್ರೆಸ್ ಬೆಂಬಲ ವಾಪಸ್ ಪಡೆದ ವೇಳೆ ಅಟಲ್ ಬಿಹಾರಿ ವಾಜಪೇಯಿ ಅವರು ನನಗೆ ಹೇಳ್ತಾರೆ ಗೌಡರಿಗೆ ಬೆಂಬಲ ಕೊಡುತ್ತೇವೆ ಎಂದು. ಆದ್ರೆ ನಮ್ಮ ಗೌಡರು ಬೆಂಬಲ ತೆಗೆದುಕೊಳ್ಳಲು ಹೋಗಲಿಲ್ಲ. ಅದು ಗೌಡರ ರಾಜಕಾರಣ. ಈಗ ಕೆಲವರು ಗೌಡರ ಬಗ್ಗೆ ಮಾತಾಡ್ತಾರೆ. ಅವರಿಗೆ ಏನ್ ಗೊತ್ತು ಗೌಡರ ವಿಚಾರ? ಇದೇ ಗೌಡರ ಸಮ್ಮುಖದಲ್ಲಿ ಕುಮಾರಸ್ವಾಮಿ ಪಟ್ಟಾಭಿಷೇಕ ಮಾಡ್ತೀವಿ. ಮೇ ತಿಂಗಳಿನಲ್ಲಿ ನಾವೆಲ್ಲಾ ಉತ್ತರ ಕರ್ನಾಟಕ ಭಾಗಕ್ಕೆ ಹೋಗುತ್ತೇವೆ. ಇನ್ನು ಬೇರೆ ಪ್ರಶ್ನೆಯೇ ಇಲ್ಲ. ರಾಜ್ಯಾದ್ಯಂತ ಸುತ್ತಲು ಹೊರಡುತ್ತೇವೆ ಎಂದು ರಾಜ್ಯ ಪ್ರವಾಸದ ಬಗ್ಗೆ ಘೋಷಣೆ ಮಾಡಿದರು.

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಧನ್ಯವಾದ ಎಂದು ಭಾಷಣ ಪ್ರಾರಂಭ ಮಾಡಿದ ಅವರು, ಕುಮಾರಸ್ವಾಮಿ ಅವರು ನನಗಿಂತ ದೊಡ್ಡ ಪೋರ್ಟ್ ಫೋಲಿಯೋ ತಗೊಂಡಿದ್ದಾರೆ. ನಮ್ಮದು ಬರೀ ತುತ್ತೂರಿ ಊದುವುದು. ಕುಮಾರಸ್ವಾಮಿ ಸಿಎಂ ಆಗುತ್ತಾರೆ. ಕಾಲಭೈರವ ಎದ್ದು ಕುಣಿಯುವ ಸಮಯ ಬಂದಿದೆ. ಜಲವಾಹನ ಹೊರಟಿದೆ. ಮಹಾಲಿಂಗನ ಮೇಲೆ ಅಭಿಷೇಕ ಪ್ರಾರಂಭವಾಗುತ್ತದೆ. ದೇವೇಗೌಡರ ತಾಕತ್ತು ನಿಮಗೇನ್ ಗೊತ್ತು. ಇವರುಗಳಿಗೆ ವೋಟಿನ ಚಿಂತೆ. ನಮಗೆ ಜನರ ಚಿಂತೆ. ಯಾರ್ ಬೇಕಾದರೂ ಕೈ ಬಿಡ್ಲಿ, ನೀವು ಕೈ ಬಿಡಬೇಡಿ. ನಮ್ಮ ಬಳಿ ಹಣ ಇಲ್ಲ. ನಾಳೆಯಿಂದ ಎಲ್ಲಾ ಕಡೆ ಜೆಡಿಎಸ್ ಪಕ್ಷಕ್ಕೆ ಸೇರಿಕೊಳ್ಳುತ್ತಾರೆ ಎಂದರು.

ಇದನ್ನು ಓದಿ: ಹುಬ್ಬಳಿ ಘಟನೆಗೆ ಹೆಚ್​ಡಿ ಕುಮಾರಸ್ವಾಮಿ ಕಳವಳ!

ಕೆಲ ತಿಂಗಳ ಹಿಂದೆ ಸಿ.ಎಂ.ಇಬ್ರಾಹಿಂ, ವಿಧಾನ ಪರಿಷತ್ ವಿಪಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ನಂತರ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಜತೆ ಮಾತನಾಡಿದ ಬಳಿಕ ಜೆಡಿಎಸ್ ಸೇರ್ಪಡೆ ಬಗ್ಗೆ ಸಿ.ಎಂ.ಇಬ್ರಾಹಿಂ ನಿವಾಸದಲ್ಲಿ ಹೆಚ್‌ಡಿಕೆ ಹೇಳಿದ್ದರು. ಇಂದು ಅಧಿಕೃತವಾಗಿ ಸಿ.ಎಂ.ಇಬ್ರಾಹಿಂ ಅವರಿಗೆ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮುಖಂಡರ ಸಮ್ಮುಖದಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಯಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News