ಮೇ 11ಕ್ಕೆ ಮುಂದೂಡಿಕೆಯಾದ ಸಂಪುಟ ಸಭೆ: ಕುತೂಹಲ ಮೂಡಿಸಿದ ನಡೆ!

ಪರಿಷ್ಕೃತ ಸೂಚನಾ ಪತ್ರ ಹೊರಡಿಸಿರುವ  ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್, ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11.30ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು.

Written by - Bhavishya Shetty | Last Updated : May 4, 2022, 12:55 PM IST
  • ಸಂಪುಟ ಸಭೆಯನ್ನು ಮೇ 11ಕ್ಕೆ ಮುಂದೂಡಲಾಗಿದೆ
  • ಪರಿಷ್ಕೃತ ಸೂಚನಾ ಪತ್ರ ಹೊರಡಿಸಿರುವ ಜಂಟಿ ಕಾರ್ಯದರ್ಶಿ
  • ಬಿಜೆಪಿ ಪಾಳಯದಲ್ಲಿ ಈಗಾಗಲೇ ಚರ್ಚೆ ನಡೆಯುತ್ತಿದೆ
 ಮೇ 11ಕ್ಕೆ ಮುಂದೂಡಿಕೆಯಾದ ಸಂಪುಟ ಸಭೆ: ಕುತೂಹಲ ಮೂಡಿಸಿದ  ನಡೆ! title=
Karnataka government

ಬೆಂಗಳೂರು: ಈ ಹಿಂದೆ ನಿಗದಿಯಾಗಿದ್ದ ಗುರುವಾರ (ಮೇ 5)ದಂದು ನಡೆಯಬೇಕಿದ್ದ ಸಂಪುಟ ಸಭೆಯನ್ನು ಮೇ 11ಕ್ಕೆ ಮುಂದೂಡಲಾಗಿದೆ. ಈ ಕುರಿತು ಸರ್ಕಾರದಿಂದ ಅಧಿಕೃತ ಮಾಹಿತಿ ಲಭಿಸಿದೆ. 

ಇದನ್ನು ಓದಿ: ಸ್ಫೋಟಕ ಅಂಶ ಬಯಲು ಮಾಡಿದ ಮಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಪರಿಷ್ಕೃತ ಸೂಚನಾ ಪತ್ರ ಹೊರಡಿಸಿರುವ  ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್, ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11.30ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು. ಅದನ್ನು ರದ್ದುಪಡಿಸಿ ಮೇ 11ರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ. 

​ಇದನ್ನು ಓದಿ: ಐಆರ್‌ಸಿಟಿಸಿಯಿಂದ ಚಾರ್‌ಧಾಮ್ ಯಾತ್ರಾ ಪ್ಯಾಕೇಜ್ ಬಿಡುಗಡೆ: ಇಲ್ಲಿದೆ ಡೀಟೇಲ್ಸ್

ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ ರಚನೆ ಕುರಿತು ಬಿಜೆಪಿ ಪಾಳಯದಲ್ಲಿ ಈಗಾಗಲೇ ಚರ್ಚೆ ನಡೆಯುತ್ತಿದೆ. ಮೇ 10ರೊಳಗೆ ಈ ಗೊಂದಲಗಳಿಗೆ ಅಂತ್ಯ ಬೀಳುವ ಸಾಧ್ಯತೆಯಿದೆ. ಕಳೆದ ದಿನವಷ್ಟೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕರ್ನಾಟಕ ಭೇಟಿ ವೇಳೆ ರಾಜ್ಯ ರಾಜಕೀಯದ ಕುರಿತು ಸಂಪೂರ್ಣ ಮಾಹಿತಿ ಕಲೆ ಹಾಕಿದ್ದಾರೆ. ಈ ಬೆನ್ನಲ್ಲೇ ಸಂಪುಟ ಸಭೆ ಮುಂದೂಡಿಕೆಯಾಗಿದ್ದು, ಕುತೂಹಲ ಹೆಚ್ಚಿಸಿದೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News