ಇಳಕಲ್ ತಾಲೂಕಿನ ತುಂಬ ಕ್ರಾಸ್ ಬಳಿ ಬೆಂಕಿಗಾಹುತಿಯಾದ ಕ್ಯಾಂಟರ್!
ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯ ತುಂಬ ಗ್ರಾಮದ ಬಳಿ ಹಸಿ ಅರಿಶಿಣ ತುಂಬಿಕೊಂಡಿದ್ದ ಕ್ಯಾಂಟರ್ ವಾಹನವೊಂದು ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ಮಧ್ಯಾಹ್ನ ೨ ಗಂಟೆಯ ಸುಮಾರಿಗೆ ನಡೆದಿದೆ.
ಇಳಕಲ್: ಆಂದ್ರಪ್ರದೇಶದ ಕಡಪಾದಿಂದ ಅರಿಶಿನ ಕೊಂಬುಗಳನ್ನು ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ವಾಹನ "ತುಂಬ" ಗ್ರಾಮದ ಬಳಿ ಬೆಂಕಿ ಹತ್ತಿದ್ದನ್ನು ಚಾಲಕ ನೋಡಿ ಹೆದರಿಕೊಂಡು ಚಲಿಸುತ್ತಿದ್ದ ಕ್ಯಾಂಟರ್ ವಾಹನದಿಂ ಹೊರಗೆ ಜಿಗಿದಿದ್ದಾನೆ.
ಇದನ್ನೂ ಓದಿ-ತಾಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
ಹೀಗಾಗಿ ಕ್ಯಾಂಟರ್ ವಾಹನ ಅಲ್ಲಿಯೇ ಪಲ್ಟಿಯಾಗಿ ಬಿದ್ದು ಧಗಧಗನೇ ಉರಿಯಲು ತೊಡಗಿದೆ. ಸ್ಥಳದಲ್ಲಿ ಇದ್ದ ಜನರು ಅಗ್ನಿಶಾಮಕ ಠಾಣೆಗೆ ಕರೆ ಮಾಡಿದರೂ ಯಾವುದೇ ಪ್ರಯೋಜನವಾಗದೇ ಕ್ಯಾಂಟರ್ ವಾಹನ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಇದನ್ನೂ ಓದಿ-ತಾಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊನೆಗೆ ಲಿಂಗಸಗೂರ ಅಗ್ನಿಶಾಮಕ ದಳದ ವಾಹನ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿತು. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸ್ ಐ ಮಲ್ಲು ಸತ್ತಿಗೌಡರ ಅವರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.