ಪಶ್ಚಿಮ ಬಂಗಾಳ: ಯುವ ಸಂಸದ ಮತ್ತು ಬಿಜೆಪಿ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ, ಕೈಲಾಶ್ ವಿಜಯ್ ವರ್ಗೀಯ, ದಿಲೀಪ್ ಘೋಷ್ ಮತ್ತು ಇತರ ಹಲವಾರು ಮುಖಂಡರ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.


COMMERCIAL BREAK
SCROLL TO CONTINUE READING

ಡಿಸೆಂಬರ್ 7 ರಂದು ಸಿಲಿಗುರಿಯಲ್ಲಿ ನಡೆದ ಪಕ್ಷದ 'ಉತ್ತರ ಕನ್ಯಾ ಅಭಿಜಾನ್" ಮೆರವಣಿಗೆಯಲ್ಲಿ ಹಿಂಸಾಚಾರ ನಡೆದಿದದ್ದು ಇವರು ಪ್ರೋತ್ಸಾಹ ನೀಡಿದ್ದಾರೆ ಎಂಬ ಆರೋಪದಲ್ಲಿ ಎಫ್‌ಐಆರ್(FIR) ದಾಖಲಾಗಿದೆ.


ಗ್ರಾ. ಪಂ. ಚುನಾವಣೆ: ಅಭ್ಯರ್ಥಿಗಳಿಂದ ಚುನಾವಣೆ ಪ್ರಚಾರಕ್ಕೆ 'ಹೈಟೆಕ್ ಟಚ್'..!


ಸಿಲಿಗುರಿ ಪೊಲೀಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ವೀಕ್ಷಕ ಕೈಲಾಶ್ ವಿಜಯವರ್ಗಿಯಾ, ಸಂಸದ ಮತ್ತು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ, ರಾಜ್ಯ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ವಿರುದ್ಧ ಸು ಮೋಟೋ ಪ್ರಕರಣ ದಾಖಲಾಗಿದೆ. ಸೌಮಿತ್ರಾ ಖಾನ್, ಸಯಂತನ್ ಬೋಸ್, ಸುಕಂತಾ ಮಜುಂದರ್, ನಿಸಿತ್ ಪ್ರಮಣಿಕ್, ರಾಜು ಬಿಸ್ಟಾ, ಜಾನ್ ಬಿರ್ಲಾ, ಖೋಗನ್ ಮುರ್ಮು, ಸಾಂಕು ದೇಬ್ ಪಾಂಡಾ ಮತ್ತು ಪ್ರವೀಣ್ ಅಗರ್ವಾಲ್ ಮತ್ತು ಇತರರ ಮೇಲೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ನೂತನ ಸಂಸತ್ ಭವನ ಕಟ್ಟಡಕ್ಕೆ 'ಕರ್ನಾಟಕದ ಪುರೋಹಿತರಿಂದ ಭೂಮಿ ಪೂಜೆ' ನೆರವೇರಿಸಿದ ಪ್ರಧಾನಿ ಮೋದಿ


ಪಕ್ಷದ ಕಾರ್ಯಕರ್ತರನ್ನು ಹಿಂಸಾಚಾರಕ್ಕೆ ಪ್ರೋತ್ಸಾಹಿಸಿದ್ದು, ಕಾನೂನು ಸುವ್ಯವಸ್ಥೆ ಧಕ್ಕೆ, ಪೊಲೀಸರೊಂದಿಗೆ ಘರ್ಷಣೆ ಮತ್ತು ಸರ್ಕಾರದ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಲು ಮುಂದಾಗಿದ್ದ ಆರೋಪದ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ನೀತಿ ವಿರೋಧಿಸಿ ಬಿಜೆಪಿ ಉಗ್ರ ಪ್ರತಿಭಟನೆ ನಡೆಸಲು ಮುಂದಾಗಿತ್ತು. ಈ ವೇಳೆ ಪೊಲೀಸರು ಅವರನ್ನು ತಡೆದಾಗ ಘರ್ಷಣೆ ಉಂಟಾಗಿತ್ತು. ಸಚಿವಾಲಯದ ಬಳಿ ಎರಡು ಹಂತಗಳಲ್ಲಿ ಬ್ಯಾರಿಕೇಡ್‌ಗಳನ್ನು ಮುರಿಯುವ ಯತ್ನ ಮಾಡಲಾಗಿಯಿತು. ಪೊಲೀಸರು ಅಶ್ರವಾಯು ಸಿಡಿಸಿ, ಜಲಫಿರಂಗಿ ನೆರವಿನಿಂದ ಪರಿಸ್ಥಿತಿ ಹತೋಟಿಗೆ ತಂದಿದ್ದರು.


'ಕಾಂಗ್ರೆಸ್​​ ಅವತ್ತು ಮಾಡಿದ ಅವಮಾನಕ್ಕೆ ಇವತ್ತು ಸೇಡು ತೀರಿಸಿಕೊಂಡಿದ್ದೇವೆ’