ಬೆಂಗಳೂರು: ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮಹಿಳೆಯೊಬ್ಬರು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಎಎನ್ಐ ವರದಿ ಮಾಡಿದ್ದು, ಪ್ರತಾಪ್ ಸಿಂಹ ಅವರು ಸೋಶಿಯಲ್ ಮೀಡಿಯಾದಲ್ಲಿ ತಮಗೆ ಕಳುಹಿಸಿದ್ದರು ಎನ್ನಲಾದ ಸಂದೇಶಗಳು, ಆಡಿಯೋ, ಫೋಟೋಗಳನ್ನು ಆ ಮಹಿಳೆ ಆಯೋಗಕ್ಕೆ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ದೂರು ನೀಡಿದ್ದಾರೆ. 



ಇದೇ ಏಪ್ರಿಲ್ 18ರಂದು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಪ್ರತಾಪ್ ಸಿಂಹ ಅವರು ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಚುನಾವಣಾ ಫಲಿತಾಂಶ ಮೇ 23ಕ್ಕೆ ಪ್ರಕಟವಾಗಲಿದೆ.