ಪಹಲ್ಗಾಮ್ ಭಯೋತ್ಪಾದಕ ದಾಳಿ ಸಮರ್ಥಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಶೇರ್ :ಮಂಗಳೂರಿನ ವ್ಯಕ್ತಿ ವಿರುದ್ದ ಪ್ರಕರಣ ದಾಖಲು

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಸಮರ್ಥಿಸಿಕೊಂಡ ಆರೋಪದ ಮೇಲೆ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕೇಸು ದಾಖಲಾಗಿದೆ. ಶಾಂತಿ ಕದಡುವ  ಪೋಸ್ಟ್ ಶೇರ್ ಮಾಡಿರುವ ಹಿನ್ನೆಲೆಯಲ್ಲಿ ಫೇಸ್‌ಬುಕ್ ಬಳಕೆದಾರರ ವಿರುದ್ಧ ದೂರು ದಾಖಲು ಮಾಡಲಾಗಿದೆ.   

Written by - Ranjitha R K | Last Updated : Apr 25, 2025, 03:44 PM IST
  • ಭಯೋತ್ಪಾದಕ ದಾಳಿಯನ್ನು ಸಮರ್ಥಿಸಿಕೊಂಡ ಆರೋಪ
  • ವ್ಯಕ್ತಿ ವಿರುದ್ದ ಮಂಗಳೂರಿನಲ್ಲಿ ಎಫ್ಐಆರ್ ದಾಖಲು
  • ಪೋಸ್ಟ್ ಗೆ ಕಾಮೆಂಟ್ ವಿಭಾಗದಲ್ಲೂ ಭಾರೀ ವಿರೋಧ
ಪಹಲ್ಗಾಮ್ ಭಯೋತ್ಪಾದಕ ದಾಳಿ ಸಮರ್ಥಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಶೇರ್ :ಮಂಗಳೂರಿನ ವ್ಯಕ್ತಿ ವಿರುದ್ದ ಪ್ರಕರಣ ದಾಖಲು

Pahalgam attack latest news in kannada : ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಸಮರ್ಥಿಸಿಕೊಂಡ ಆರೋಪದ ಮೇಲೆ 'ನಿಚ್ಚು ಮಂಗಳೂರು' ಎಂಬ ಫೇಸ್‌ಬುಕ್ ಬಳಕೆದಾರರ ವಿರುದ್ಧ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಉಳ್ಳಾಲ ನಿವಾಸಿ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲು ಮಾಡಲಾಗಿದೆ. ಗಲಭೆಯನ್ನು ಪ್ರಚೋದಿಸುವ ಉದ್ದೇಶದಿಂದ ವಿಷಯವನ್ನು ಪ್ರಕಟಿಸಿದ್ದಕ್ಕಾಗಿ ಮತ್ತು ಶಾಂತಿ ಕದಡುವ  ಅಥವಾ ಹಾನಿಯನ್ನುಂಟುಮಾಡುವ ಹೇಳಿಕೆಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಕಾಯ್ದೆ, 2023ರ ಸೆಕ್ಷನ್ 192 ಮತ್ತು 353(1)(ಬಿ) ಅಡಿಯಲ್ಲಿ ಬಳಕೆದಾರರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. 

ಇದನ್ನೂ ಓದಿ : ಬಾಣಂತಿ ಸಾವು ಪ್ರಕರಣ: ಜೀ  ಕನ್ನಡ ನ್ಯೂಸ್ ವರದಿಗೆ ವೈದ್ಯೆ, ಸ್ಟಾಫ್ ನರ್ಸ್ ತಲೆದಂಡ

ಪೊಲೀಸರ ಪ್ರಕಾರ, ಈ ಪೋಸ್ಟ್ ಸಾರ್ವಜನಿಕ ಶಾಂತಿಯನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ಭಾಷೆಯನ್ನು ಹೊಂದಿದೆ. ದೂರಿನಲ್ಲಿ ಪೋಸ್ಟ್‌ನ ಸ್ಕ್ರೀನ್‌ಶಾಟ್‌ಗಳು ಮತ್ತು ಬಳಕೆದಾರರ ಪ್ರೊಫೈಲ್ ಅನ್ನು ಪುರಾವೆಯಾಗಿ ಸೇರಿಸಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಸಾಮಾಜಿಕ ಮಾಧ್ಯಮದಲ್ಲಿ ಮಾಡಿರುವ ಪೋಸ್ಟ್‌ನಲ್ಲಿ, ಬಳಕೆದಾರರು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಹತ್ಯೆಗಳನ್ನು 2023 ರ ಪಾಲ್ಘರ್ ರೈಲ್ವೆ ನಿಲ್ದಾಣದ ಗುಂಡಿನ ದಾಳಿಗೆ ಹೋಲಿಸಿದ್ದಾರೆ. ಇದರಲ್ಲಿ ರೈಲ್ವೆ ರಕ್ಷಣಾ ಪಡೆ ಅಧಿಕಾರಿಯೊಬ್ಬರು ಹಿರಿಯ ಸಹೋದ್ಯೋಗಿ ಸೇರಿದಂತೆ ನಾಲ್ವರು ಜನರನ್ನು ಗುಂಡಿಕ್ಕಿ ಹತ್ಯೆ ನಡೆಸಿದ್ದರು. ಇಲ್ಲಿ ಹತ್ಯೆಗೀಡಾದವರ ಮೇಲೆ ಗುಂಡು ಹಾರಿಸುವ ಮೊದಲು ಅಧಿಕಾರಿ ಮುಸ್ಲಿಮರೇ ಎಂದು ಕೇಳಿದ್ದರು ಎಂದು  ಬಳಕೆದಾರರು ಹೇಳಿಕೊಂಡಿದ್ದಾರೆ. ಆ ಸಂದರ್ಭದಲ್ಲಿ ಆ ಭಯೋತ್ಪಾದಕನನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿದ್ದರೆ, ಶ್ರೀನಗರದಲ್ಲಿ ಇಂತಹ ಕೃತ್ಯ ನಡೆಯುತ್ತಿರಲಿಲ್ಲ ಎಂದು ಬರೆದುಕೊಂಡಿದ್ದಾರೆ. 

ಇದನ್ನೂ ಓದಿ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ: ಸರ್ವಪಕ್ಷ ಸಭೆಯಲ್ಲಿ ಹಲವು ನಿರ್ಣಯ

ಈ ಪೋಸ್ಟ್‌ಗೆ ಕಾಮೆಂಟ್‌ ವಿಭಾಗದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ.  ತಮ್ಮ ಪೋಸ್ಟ್ ಮೂಲಕ ವ್ಯಕ್ತಿ ದ್ವೇಷವನ್ನು ಹರಡುತ್ತಿದ್ದಾರೆ, ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆ ಎಂದು  ಬಹುತೇಕ ಮಂದಿ ಆಕ್ರೋಶ ಹೊರ ಹಾಕಿದ್ದಾರೆ. 
ಒಬ್ಬ ಬಳಕೆದಾರರು, "ಅದು ಕೂಡಾ ತಪ್ಪು, ಇದು ಕೂಡಾ ತಪ್ಪು.ಇಲ್ಲಿ  ಯಾವುದೇ ಸಮರ್ಥನೆಯ ಅಗತ್ಯವಿಲ್ಲ" ಎಂದು ಹೇಳಿದ್ದಾರೆ. ಮತ್ತೊಬ್ಬ ವ್ಯಕ್ತಿ  "ನೀವು ಈ ರೀತಿಯ ಪೋಸ್ಟ್ ಪೋಸ್ಟ್ ಮಾಡಿದ್ದೀರಿ ಎಂಬ ಕಾರಣಕ್ಕಾಗಿ, ನೀವು ಉತ್ತಮ ಚಿಂತಕರಲ್ಲ. ನೀವು ಹೇಡಿ ಎಂದು ಕಾಮೆಂಟ್ ಮಾಡಿದ್ದಾರೆ. 

ಈ ಮಧ್ಯೆ, ಪ್ರೊಫೈಲ್‌ನ ಡಿಸ್ಪ್ಲೇ ಚಿತ್ರದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿಯನ್ನು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

 

Trending News