ತೆಲಂಗಾಣ : ಹೈದರಾಬಾದ್ ನಗರದ ಪದ್ಮಜಾ ಪಾಮ್ ಗ್ರೋವ್ ರೆಸಾರ್ಟ್ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಬೀದರ್ ಕಾಂಗ್ರೆಸ್ ನಾಯಕ ಜನಾಬ್ ಅಯಾಜ್ ಖಾನ್ ಸೋನ್ ಮಗನ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ ಸಚಿವ ಶಿವಾನಂದ ಪಾಟೀಲ್‌ ಅವರ ಮೇಲೆ ಹಣದ ಸುರಿಮಳೆ ಸುರಿಸಲಾಗಿದೆ. ಈ ಕುರಿತ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.


COMMERCIAL BREAK
SCROLL TO CONTINUE READING

ಹೌದು.. ಕರ್ನಾಟಕ ಸರ್ಕಾರದ ಕ್ಯಾಬಿನೆಟ್ ಸಚಿವರಾದ ಜನಾಬ್ ರಹೀಮ್ ಖಾನ್ ಅವರ ಮಗನ ಮದುವೆ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ಜರುಗಿತು. ಈ ವಿವಾಹ ಮಹೋತ್ಸವದಲ್ಲಿ ಸಚಿವ ಶಿವಾನಂದ ಪಾಟೀಲ್ ಅವರು ಉಪಸ್ಥಿತರಿದ್ದರು. ಈ ವೇಳೆ ಅವರ ಮೇಲೆ ಹಣದ ಸುರಿಮಳೆಗೈಯಲಾಯಿತು. ಸಚಿವರ ಕಾಲಡಿ ನೋಟುಗಳ ರಾಶಿ ಬಿದ್ದಿದ್ದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.



ಇದನ್ನೂ ಓದಿ: ಕ್ರೀಡಾಪಟುಗಳಿಗೆ ಎಲ್ಲಾ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿಯ ಬಗ್ಗೆ ಕ್ರಮ : ಸಿಎಂ ಸಿದ್ದರಾಮಯ್ಯ


ಸಚಿವರ ಕಾಲ ಕೆಳಗೆ ರಾಶಿ ರಾಶಿ ಹಣ ಕಂಡ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ಸರಿಯಾಗಿ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಜನರ ನೋವಿಗೆ ಸ್ಪಂದಿಸಬೇಕಿದ್ದ ನಾಯಕರು ಈ ರೀತಿ ವರ್ತನೆ ತೋರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿ ಅಂತ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.