ಬೆಂಗಳೂರು: ಗಂಟು ಚರ್ಮರೋಗದಿಂದ ಜಾನುವಾರುಗಳನ್ನು ಕಳೆದುಕೊಳ್ಳುತ್ತಿರುವ ರೈತರಿಗೆ ತಲಾ 50,000 ರೂಪಾಯಿ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.


COMMERCIAL BREAK
SCROLL TO CONTINUE READING

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿಂದು ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು; ಗಂಟು ಚರ್ಮ ರೋಗದಿಂದ ರಾಜ್ಯಾದ್ಯಂತ ಜಾನುವಾರುಗಳು ಸಾಯುತ್ತಿರುವ ಮಾಹಿತಿ ನಿರಂತರವಾಗಿ ಬರುತ್ತಿದೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಹೀಗೆ ಸಾವನ್ನಪ್ಪುವ ಜಾನುವಾರುಗಳ ಮರಣೋತ್ತರ ಪರೀಕ್ಷೆ ನಡೆಸಲಿಕ್ಕೂ ವೈದ್ಯರು ಇಲ್ಲದಂಥ ದುಃಸ್ಥಿತಿ ರಾಜ್ಯದಲ್ಲಿ ತಲೆದೋರಿದೆ ಎಂದು ಕಳವಳ ವ್ಯಕ್ತಪಡಿಸಿದರು.


ಇದನ್ನೂ ಓದಿ: 'ತಳಸಮುದಾಯಗಳಿಗೆ ಶಿಕ್ಷಣ ಹಾಗೂ ಉದ್ಯೋಗಕ್ಕೆ ಹೆಚ್ಚಿನ ಒತ್ತು'


ಈ ರೋಗದಿಂದ ಸಾವನ್ನಪ್ಪುವ ಒಂದು ಹಸಿವಿಗೆ ತಲಾ 20,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸರಕಾರ ಹೇಳಿದೆ. ಅದಿನ್ನೂ ಹೇಳಿಕೆ ಕೊಡುವುದರಲ್ಲೇ ಇದೆ. ಇಲ್ಲಿ ರೈತರು ಜೀವನಾಧಾರವಾಗಿರುವ ಜಾನುವಾರುಗಳನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಕೇವಲ 20,000 ರೂಪಾಯಿ ಪರಿಹಾರ ನೀಡಿದರೆ ರೈತರ ಕಷ್ಟ ಪರಿಹರಿಸಿದಂತೆ ಆಗುವುದಿಲ್ಲ. ಕನಿಷ್ಠ ಒಂದು ಹಸುವಿಗೆ 50,000 ರೂಪಾಯಿ ಪರಿಹಾರ ಕೊಡಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.


ಇದನ್ನೂ ಓದಿ: ದೇಶದ ಜನತೆಗೆ ವಾಲ್ಮೀಕಿ ಜಯಂತಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ


ಈ ಬಗ್ಗೆ ರಾಜ್ಯ ಸರಕಾರಕ್ಕೆ ಪತ್ರವನ್ನೂ ಬರೆದು ಒತ್ತಾಯ ಮಾಡಲಾಗುವುದು ಎಂದು ತಿಳಿಸಿದ ಮಾಜಿ ಮುಖ್ಯಮಂತ್ರಿಗಳು; ಅನೇಕ ದಿನಗಳಿಂದ ಈ ಸಮಸ್ಯೆಯನ್ನು ರೈತರು ಎದುರಿಸುತ್ತಿದ್ದಾರೆ. ಇಷ್ಟೊತ್ತಿಗಾಗಲೇ ಸರಕಾರ ಜಾನುವಾರುಗಳಿಗೆ ಲಸಿಕೆ ನೀಡಿ ಕ್ರಮ ವಹಿಸಬೇಕಾಗಿತ್ತು. ಆದರೆ, ಸರಕಾರ ಸಮಯ ವ್ಯರ್ಥ ಮಾಡುತ್ತಿದೆ ಎಂದು ದೂರಿದರು.


ಕನ್ನಡ ಭಾಷೆಯಲ್ಲ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.