ಬೆಂಗಳೂರು : ರಾಜ್ಯ ಸರ್ಕಾರದ ಹೆಸರಿನಲ್ಲಿ ನಕಲಿ ನಿರಪೇಕ್ಷಣಾ ಪತ್ರ ಸಲ್ಲಿಸಿ ಸಿಬಿಎಸ್‌ಸಿ ಪಠ್ಯಕ್ರಮದಲ್ಲಿ ಶಾಲೆ ನಡೆಸುತ್ತಿದ್ದ ಆರೋಪದಡಿ ಸಾಂದೀಪಿನಿ ಇಂಟರ್‌ನ್ಯಾಷನಲ್‌ ರೆಸಿಡೆನ್ಷಿಯಲ್ ಶಾಲೆಯ ಮುಖ್ಯಸ್ಥ ಲೋಕೇಶ್ ತಾಳಿಕಟ್ಟೆಯನ್ನು ವಿಧಾನಸೌಧ ಪೊಲೀಸರು ವಿಚಾರಣೆ ನಡೆಸಿದ್ದಾರೆ.  


COMMERCIAL BREAK
SCROLL TO CONTINUE READING

ಇದನ್ನೂ ಓದಿ-Budget 2023: 1992 ರಲ್ಲಿ ಎಷ್ಟು ಆದಾಯ ತೆರಿಗೆ ಪಾವತಿಸಬೇಕಾಗುತ್ತಿತ್ತು? 30 ವರ್ಷಗಳ ಹಿಂದಿನ ಹಳೆ ಚಿತ್ರ ವೈರಲ್


ರಾಜ್ಯ ಸರ್ಕಾರದ ಪ್ರಾಥಮಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಹಾಂತಯ್ಯ ಎಸ್ ಹೊಸ್ಮಠ ದೂರಿನನ್ವಯ  ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಚಿತ್ರದುರ್ಗ ಜಿಲ್ಲೆಯ ತಾಳಿಕಟ್ಟೆಯ ಸಾಂದೀಪಿನಿ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ಮುಖ್ಯಸ್ಥರಾಗಿರುವ ಲೋಕೇಶ್ ತಾಳಿಕಟ್ಟೆ ಮೇಲೆ ಸಿಬಿಎಸ್‌ಸಿ ಪಠ್ಯಕ್ರಮ ಸಂಯೋಜನೆಗೆ ರಾಜ್ಯ ಸರ್ಕಾರ ನೀಡಬೇಕಿದ್ದ ನಿರಪೇಕ್ಷಣಾ ಪತ್ರವನ್ನ ನಕಲಿಯಾಗಿ ಸೃಷ್ಟಿಸಿರುವ ಆರೋಪವಿದೆ.


ಇದನ್ನೂ ಓದಿ : Moles On Body : ದೇಹದ ಈ ಭಾಗದ ಮೇಲೆ ಮಚ್ಚೆ ಇದ್ರೆ ಶ್ರೀಮಂತ ಗಂಡ ಸಿಗುತ್ತಾನೆ.!


ನಕಲಿ ನಿರಪೇಕ್ಷಣಾ ಪತ್ರವನ್ನ ದೆಹಲಿಯ ಸಿಬಿಎಸ್‌ಸಿ ಬೋರ್ಡ್‌ಗೆ ಸಲ್ಲಿಸಿ ಶಾಲೆ ನಡೆಸುತ್ತಿರುವುದರಿಂದ ಲೋಕೇಶ್‌ ಮೇಲೆ ಕಾನೂನು‌ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಹಾಂತಯ್ಯ ಎಸ್ ಹೊಸ್ಮಠ ದೂರು ಸಲ್ಲಿಸಿದ್ದರು. ದೂರಿನನ್ವಯ ಲೋಕೇಶ್ ತಾಳಿಕಟ್ಟೆಗೆ ನೋಟಿಸ್ ನೀಡಿ ಕರೆಸಿಕೊಂಡಿದ್ದ ವಿಧಾನಸೌಧ ಠಾಣಾ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.