ಹೈಕೋರ್ಟ್ ವಕೀಲೆ ಚೈತ್ರಾಗೌಡ ಸಾವು ಪ್ರಕರಣ: ಸಿಸಿಬಿಗೆ ತನಿಖೆ ವರ್ಗಾವಣೆ

Chaitra Gowda suicide case: ಚೈತ್ರಾರ ಸಾವಿನ ಹಿಂದೆ ಅಪರಿಚಿತ ಕೈವಾಡವಿದೆ. ಈ ಬಗ್ಗೆ ಸೂಕ್ತ ತನಿಖೆಗೆ ಆಗ್ರಹಿಸಿ ಬೆಂಗಳೂರು ನಗರ ವಕೀಲರ ಸಂಘವು ಸಹ ಪೊಲೀಸ್ ಕಮಿಷನರ್ ಹಾಗೂ ಉತ್ತರ ವಿಭಾಗದ ಡಿಸಿಪಿಗೆ ಪತ್ರ ಬರೆದಿತ್ತು. ಚೈತ್ರಾ ಅತ್ಯಂತ ದಿಟ್ಟ ಹಾಗೂ ಧೈರ್ಯವಂತೆ, ಅವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ ಅಂತಾ ವಕೀಲರ ಸಂಘದ ಸದಸ್ಯರು ತಿಳಿಸಿದ್ದರು. ​

Written by - Puttaraj K Alur | Last Updated : May 31, 2024, 12:27 PM IST
  • ಹೈಕೋರ್ಟ್ ವಕೀಲೆ, ಕೆಎಎಸ್ ಅಧಿಕಾರಿ ಪತ್ನಿ ಚೈತ್ರಾ ಗೌಡ ಅನುಮಾನಾಸ್ಪದ ಸಾವು ಪ್ರಕರಣ
  • ಹೈಕೋರ್ಟ್ ವಕೀಲೆ ಚೈತ್ರಾ ಗೌಡ ಸಾವು ಪ್ರಕರಣವನ್ನು ಸಿಸಿಬಿ ತನಿಖೆಗೆ ವರ್ಗಾಯಿಸಲಾಗಿದೆ
  • ಮೇ 11ರಂದು ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚೈತ್ರಾಗೌಡ ಸಾವನ್ನಪ್ಪಿದ್ದರು
ಹೈಕೋರ್ಟ್ ವಕೀಲೆ ಚೈತ್ರಾಗೌಡ ಸಾವು ಪ್ರಕರಣ: ಸಿಸಿಬಿಗೆ ತನಿಖೆ ವರ್ಗಾವಣೆ title=
ಹೈಕೋರ್ಟ್‌ ವಕೀಲೆ ಸಾವು ಪ್ರಕರಣ!

High court advocate’s suicide case: ಹೈಕೋರ್ಟ್ ವಕೀಲೆ ಹಾಗೂ ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ ಚೈತ್ರಾ ಗೌಡ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಸಿಬಿ ತನಿಖೆಗೆ ವರ್ಗಾಯಿಸಲಾಗಿದೆ.

ಕೆಐಡಿಬಿ ಅಧಿಕಾರಿ ಶಿವಕುಮಾರ್ ಅವರ ಪತ್ನಿ 34 ವರ್ಷದ ಚೈತ್ರಾ ಗೌಡ ಹೈಕೋರ್ಟ್ ವಕೀಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೇ 11ರಂದು ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚೈತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ: ನೀತಾ ಅಂಬಾನಿಯ ಈ ನೆಕ್ಲೆಸ್ ಬೆಲೆ ಎಷ್ಟು ಗೊತ್ತಾ ? ಅದು ಕೇವಲ 178 ರೂಪಾಯಿಗೆ ಸಿಗುತ್ತದಂತೆ !!

ಚೈತ್ರಾರ ಸಾವಿನ ಸುತ್ತ ಹಲವು ಅನುಮಾನಗಳು ಮೂಡಿದ್ದವು. ಮರಣೋತ್ತರ ಪರೀಕ್ಷೆಯ ವರದಿಯು ಅವರ ಸಾವಿನ ಹಿಂದೆ ಯಾವುದೇ ದುಷ್ಕೃತ್ಯವಿಲ್ಲವೆಂದು ಹೇಳಿತ್ತು. ಆದರೆ ಅವರ ಸಹೋದ್ಯೋಗಿಗಳು, ಚೈತ್ರಾರ ಸಾವಿನ ಬಗ್ಗೆ ಶಂಕಿಸಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

ಚೈತ್ರಾರ ಸಾವಿನ ಹಿಂದೆ ಅಪರಿಚಿತ ಕೈವಾಡವಿದೆ. ಈ ಬಗ್ಗೆ ಸೂಕ್ತ ತನಿಖೆಗೆ ಆಗ್ರಹಿಸಿ ಬೆಂಗಳೂರು ನಗರ ವಕೀಲರ ಸಂಘವು ಸಹ ಪೊಲೀಸ್ ಕಮಿಷನರ್ ಹಾಗೂ ಉತ್ತರ ವಿಭಾಗದ ಡಿಸಿಪಿಗೆ ಪತ್ರ ಬರೆದಿತ್ತು. ಚೈತ್ರಾ ಅತ್ಯಂತ ದಿಟ್ಟ ಹಾಗೂ ಧೈರ್ಯವಂತೆ, ಅವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ ಅಂತಾ ವಕೀಲರ ಸಂಘದ ಸದಸ್ಯರು ತಿಳಿಸಿದ್ದರು. ಪ್ರಕರಣ ಸಂಬಂಧ ಚೈತ್ರಾರ ಪತಿಯನ್ನು ಸಹ ಪೊಲೀಸರು ವಿಚಾರಣೆ ನಡೆಸಿದ್ದಾರೆ. 

ಇದನ್ನೂ ಓದಿ2ನೇ ಖಾಸಗಿ ನಿರ್ಮಿತ ರಾಕೆಟ್ : ಭಾರತೀಯ ಬಾಹ್ಯಾಕಾಶ ಸ್ಟಾರ್ಟ್ಅಪ್ ಅಗ್ನಿಕುಲ್ ಯಶಸ್ವಿ ಉಡಾವಣೆ

ಚೈತ್ರಾರ ಮನೆಯಲ್ಲಿ ಸಿಕ್ಕ ಡೆತ್​ನೋಟ್​ನಲ್ಲಿ 3 ತಿಂಗಳ ಹಳೆಯ ದಿನಾಂಕಗಳನ್ನು ನಮೂದಿಸಲಾಗಿದೆ. ತಾನು ಖಿನ್ನತೆಗೆ ಒಳಗಾಗಿರುವುದಾಗಿ, ತನ್ನ ಸಾವಿಗೆ ಯಾರೂ ಕಾರಣರಲ್ಲವೆಂದು ಅವರು ಬರೆದಿದ್ದರು. ಈ ಡೆತ್ ನೋಟ್‌ಗಳನ್ನು ಕೈಬರಹದ ವಿಶ್ಲೇಷಣೆಗಾಗಿ ಕಳುಹಿಸಲಾಗಿತ್ತು, ಇದನ್ನು ಅವರೇ ಬರೆದಿದ್ದಾರೆಂದು ದೃಢವಾಗಿದೆ. ಇದೀಗ ಸಿಸಿಬಿ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ಚೈತ್ರಾರ ಜೊತೆಗೆ ಮಾತನಾಡಿರುವ ವ್ಯಕ್ತಿಗಳ ಕಾಲ್ ಲಿಸ್ಟ್ ತೆಗೆಯಲು ಅಧಿಕಾರಿಗಳು ಮುಂದಾಗಿದ್ದಾರೆ.

ಸದ್ಯ ಚೈತ್ರಾರ ಮೊಬೈಲ್ ಲಾಕ್ ಆಗಿದ್ದು, ಅದನ್ನು ಓಪನ್ ಮಾಡಲು ಅಧಿಕಾರಿಗಳು ತಂತ್ರಜ್ಞಾನದ ನೆರವು ಪಡೆದುಕೊಳ್ಳುತ್ತಿದ್ದಾರೆ. ಅಲ್ಲದೇ, ಚೈತ್ರಾ ಸಾವಿಗೂ ಹಿಂದಿನ 15 ದಿನಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಸಿಸಿಬಿ ಅಧಕಾರಿಗಳ ತನಿಖೆ ಬಳಿಕವೇ ಚೈತ್ರಾರ ಸಾವಿನ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದುಬರಲಿದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News