ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ದೇವಸ್ಥಾನಗಳ ಹುಂಡಿಗೆ ಕನ್ನ ಹಾಕುವ ಕನ್ನರಾಮಯ್ಯ ಆಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಘೋಷಿಸಿದ ಬೋಗಸ್ ಗ್ಯಾರಂಟಿಗಳನ್ನು ನಿರ್ವಹಿಸಲು ಸಾಧ್ಯವಾಗದೇ ಹೀಗೆ ದೇವಸ್ಥಾನಗಳ ಹುಂಡಿಗೆ ಕನ್ನ ಹಾಕುವ ಕೃತ್ಯ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಅಲ್ಲದೆ, ಪೂರ್ವಾಪರ ತಯಾರಿ ಮಾಡದೆ ಘೋಷಿಸಿದ ಗ್ಯಾರಂಟಿಗಳು ಎಲ್ಲಾ ಬೋಗಸ್ ಆಗಿವೆ. ಅವನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ ಇಂಥದ್ದನ್ನೆಲ್ಲ ಮಾಡುತ್ತಿದ್ದಾರೆ ಎಂದು ಸಚಿವ ಜೋಶಿ ಆರೋಪಿಸಿದರು.


ಇದನ್ನೂ ಓದಿ:ಭಾಗ್ಯಲಕ್ಷ್ಮಿ ಯೋಜನೆ ಸ್ಥಗಿತಗೊಳಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ : ಲಕ್ಷ್ಮಿ ಹೆಬ್ಬಾಳ್ಕರ್


ಗ್ಯಾರಂಟಿ ಯೋಜನೆಗಳನ್ನು ನಿರ್ವಹಿಸುವಲ್ಲಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮಿತಿಮೀರಿದೆ. ಇದನ್ನು ನಾವಲ್ಲ; ಕಾಂಗ್ರೆಸ್ ನವರೇ ಹೇಳುತ್ತಿದ್ದಾರೆ ಎಂದು ಜೋಶಿ ತಿಳಿಸಿದರು. ಸಿಎಂ ಸಿದ್ದರಾಮಯ್ಯ, ಸುಳ್ಳುರಾಮಯ್ಯ ಆದರು. ಸಾಲರಾಮಯ್ಯ ಆದರು. ಈಗ ಹಿಂದೂ ದೇಗುಲಗಳ ಹುಂಡಿಗಳಿಗೆ ಕನ್ನ ಹಾಕುವಂಥ ಕನ್ನರಾಮಯ್ಯ ಆಗಿದ್ದಾರೆ. ರಾಜ್ಯ ಸರ್ಕಾರ ಸಂಪೂರ್ಣ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಇದನ್ನೆಲ್ಲ ಡೈವರ್ಟ್ ಮಾಡಲು ಏನು ಬೇಕೋ ಅದನ್ನು ಮಾಡುತ್ತಿದ್ದಾರೆ ಎಂದು ಸಚಿವ ಜೋಶಿ ವಾಗ್ದಾಳಿ ನಡೆಸಿದರು.


ಯುಪಿಎ ಕಾಲದಲ್ಲಿ ಬಂದ ಅನುದಾನದ ಲೆಕ್ಕ ಕೊಡಿ: ಯುಪಿಎ ಅವಧಿಯಲ್ಲಿ ನೀವೇ ಅಧಿಕಾರದಲ್ಲಿ ಇದ್ರೀ. ಆಗ ಎಸ್ಟು ಅನುದಾನ ಬಂದಿದೆ?. ಈಗಲೂ ನೀವೇ ಇದ್ದೀರಿ. ಈಗ NDA ಅವಧಿಯಲ್ಲಿ ಎಷ್ಟು ಬಂದಿದೆ ಲೆಕ್ಕ ಕೊಡಿ ಫಸ್ಟು ಎಂದು ಸಚಿವ ಪ್ರಹ್ಲಾದ ಜೋಶಿ ಕೇಳಿದ್ದಾರೆ. ಇನ್ನು ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ 60000 ಲಕ್ಷ ಕೋಟಿ ಬಂದಿದೆ. NDA ಅವಧಿಯಲ್ಲಿ 2.85 ಲಕ್ಷ ಕೋಟಿ ತೆರಿಗೆ ಹಂಚಿಕೆ ಕೊಟ್ಟಿದೆ. ಇದನ್ನೆಲ್ಲ ವಿಧಾನಸಭೆಗೆ ವಿವರಣೆ ಕೊಟ್ಟಿದ್ದೇವೆ ಎಂದು ಸಚಿವ ಜೋಶಿ ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.