ಪ್ರವಾಹ ನಷ್ಟದ ವರದಿಯನ್ನು ಕೇಂದ್ರ ತಿರಸ್ಕರಿಸಿಲ್ಲ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಪ್ರವಾಹದಿಂದ ಉಂಟಾದ ಅಂದಾಜು ನಷ್ಟ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ. ರಾಜ್ಯದ ಪ್ರಸ್ತಾವ ಮತ್ತು ಕೇಂದ್ರ ಪರಿಶೀಲನಾ ತಂಡ ಸಲ್ಲಿಸಿರುವ ವರದಿ ತಾಳೆಯಾಗುತ್ತಿಲ್ಲ ಎಂದು ಹೇಳಿ ಪರಿಶೀಲಿಸಲು ತಿಳಿಸಿದೆ ಎಂದು ಸಿಎಂ ಹೇಳಿದ್ದಾರೆ.

Last Updated : Oct 4, 2019, 02:40 PM IST
ಪ್ರವಾಹ ನಷ್ಟದ ವರದಿಯನ್ನು ಕೇಂದ್ರ ತಿರಸ್ಕರಿಸಿಲ್ಲ: ಸಿಎಂ ಯಡಿಯೂರಪ್ಪ title=

ಬೆಳಗಾವಿ: ರಾಜ್ಯ ಸರ್ಕಾರ ಪ್ರವಾಹದಿಂದ ಉಂಟಾಗಿರುವ ನಷ್ಟದ ಬಗ್ಗೆ ಸಲ್ಲಿಸಿರುವ ಅಂದಾಜು ನಷ್ಟ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.

ಅತಿವೃಷ್ಟಿಯಿಂದಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಸಿಎಂ, ರಾಜ್ಯದ ಅಂದಾಜು ನಷ್ಟ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ. ರಾಜ್ಯದ ಪರ್ಸಾವ ಮತ್ತು ಕೇಂದ್ರ ಪರಿಶೀಲನಾ ತಂಡ ಸಲ್ಲಿಸಿರುವ ವರದಿ ತಾಳೆಯಾಗುತ್ತಿಲ್ಲ ಎಂದು ಹೇಳಿ ಪರಿಶೀಲಿಸಲು ತಿಳಿಸಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಈಗಾಗಲೇ ವರದಿಯ ಬಗ್ಗೆ ಸ್ಪಷ್ಟನೆ ನೀಡಲು ಸರ್ಕಾರದ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸಲಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆಯಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.
 

Trending News