ಬೆಂಗಳೂರು: ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Higher Education Minister Dr.C.N.Ashwatha Narayana) ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸೋಮವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Higher Education Minister Dr.C.N.Ashwatha Narayana) ಅವರು, ಬೇರೆಬೇರೆ ರಾಜ್ಯಗಳಲ್ಲಿ ಇಂತಹ ಪರೀಕ್ಷೆಗೆ ಗೊತ್ತುಪಡಿಸಿಕೊಂಡಿರುವ ಸಂಭವನೀಯ ದಿನಾಂಕಗಳ ಬಗ್ಗೆ ತಿಳಿದುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.


ಇದನ್ನೂ ಓದಿ- "ಅರ್ಥಪೂರ್ಣ ಕಾರ್ಯಕ್ರಮದ ಮೂಲಕ ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗುವುದು"


ಇದರಂತೆ ಜೂನ್ 16ರಂದು ಬೆಳಿಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, 17ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಹಾಗೂ 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಸಿಇಟಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಇದರಂತೆ, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 5ರಿಂದ 20ರವರೆಗೆ ಸಿಇಟಿಯಲ್ಲಿ (CET) ತಮ್ಮ ಹೆಸರು ನೋಂದಾಯಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ಲೈನ್ ಮೂಲಕವೇ ನಿಗದಿತ ಶುಲ್ಕ ಸಲ್ಲಿಸಲು ಏ.22ರವರೆಗೆ ಅವಕಾಶವಿದೆ ಎಂದು ಸಚಿವರು ಮಾಹಿತಿ ನೀಡಿದರು.


ಇದನ್ನೂ ಓದಿ- ರಾಜ್ಯದ ಆರು ಸ್ಥಳಗಳಲ್ಲಿ ಚಿತ್ರ ಕಲಾ ಗ್ಯಾಲರಿಗಳನ್ನು ಪ್ರಾರಂಭಿಸಲು ಕ್ರಮ‌-ಸಿಎಂ ಬೊಮ್ಮಾಯಿ


ಶುಲ್ಕ ಪಾವತಿಸಿದ ನಂತರ, ತಮ್ಮ ಅರ್ಜಿಯಲ್ಲೇನಾದರೂ ಮಾಹಿತಿಯನ್ನು ಪರಿಷ್ಕರಿಸುವುದಿದ್ದರೆ ಅಂಥವರಿಗೇ ಮೇ 2ರಿಂದ 6ವರೆಗೆ ಕಾಲಾವಕಾಶ ಇರಲಿದೆ. ಇದಾದ ಬಳಿಕ ವಿದ್ಯಾರ್ಥಿಗಳು ಮೇ 30ರಿಂದ ಪ್ರವೇಶಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.