ಚಾಮರಾಜನಗರ: ಯುವತಿಯೊಬ್ಬಳನ್ನು ಟ್ಯಾಂಕ್ ಮೇಲೆ ಕೂರಿಸಿಕೊಂಡು ಬೈಕ್ ಸವಾರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ವಶಕ್ಕೆ ಪಡೆಯಲಾಗಿದೆ. ಹೆಚ್.ಡಿ ಕೋಟೆ ತಾಲ್ಲೂಕಿನ ಗ್ರಾಮವೊಂದರ ಸ್ವಾಮಿ ಎಂಬಾತ ವಶಕ್ಕೆ ಪಡೆದ ಯುವಕನಾಗಿದ್ದಾನೆ. ಗುರುವಾರ ಮಧ್ಯಾಹ್ನ 2 ರ ಸಮಯದಲ್ಲಿ ಚಾಮರಾಜನಗರ–ಗುಂಡ್ಲುಪೇಟೆ ಮುಖ್ಯರಸ್ತೆ ಯಡಪುರ ಗ್ರಾಮದ ಬಳಿ ಸ್ವಾಮಿಯು ತನ್ನ ಬೈಕಿನ ಪೆಟ್ರೋಲ್ ಟ್ಯಾಂಕಿನ ಮೇಲೆ ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿ ರೈಡಿಂಗ್ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ಲಾಗಿದ್ದ ಬಗ್ಗೆ ಜೀ ಕನ್ನಡ ನ್ಯೂಸ್ ವರದಿ ಬಿತ್ತರಿಸಿತ್ತು. ಬಳಿಕ ಈ ಪ್ರಕರಣದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು  ಕಲಂ 279 ಐಪಿಸಿ ಮತ್ತು 184 ಐಎಂವಿ  ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡು ಯುವಕನನ್ನು ವಶಕ್ಕೆ ಪಡೆದಿದ್ದಾರೆ.‌

COMMERCIAL BREAK
SCROLL TO CONTINUE READING

ಇದಕ್ಕೂ ಮೊದಲು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದ್ದ ವಿಡಿಯೋದಲ್ಲಿ, ಪಲ್ಸರ್ ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿ ಉಲ್ಟಾ ಕುಳಿತುಕೊಂಡಿದ್ದಳು ಮತ್ತು ಯುವಕ ಬೈಕ್ ಓಡಿಸುತ್ತಿರುವುದನ್ನು ಗಮನಿಸಲಾಗಿದೆ. ಅಷ್ಟೇ ಅಲ್ಲ ಟ್ಯಾಂಕ್ ಮೇಲೆ ಕುಳಿತ ಯುವತಿ ಯುವಕನನ್ನು ಬಿಗಿದಪ್ಪಿ ಮುತ್ತಿಕ್ಕುತ್ತಿರುವುದನ್ನು ಗಮನಿಸಲಾಗಿದೆ. ಈ ಸಂದರ್ಭದಲ್ಲಿ ರಸ್ತೆಯ ಮೇಲೆ ಜನರು, ಬಸ್. ಲಾರಿಗಳ ಸಂಚಾರವಿದ್ದರೂ ಕೂಡ ಈ ಜೋಡಿ ತಮಗೆ ಜಗತ್ತಿನ ಪರಿವೆ ಇಲ್ಲ ಎಂಬಂತೆ ಲವ್ವಿ ಡವ್ವಿಯಲ್ಲಿ ತೊಡಗಿದ್ದರು. ಹೆದ್ದಾರಿಯ ಮೇಲೆ ಈ ಇಬ್ಬರು ಯುವಕರ ಹುಚ್ಚಾಟ ಗಮನಿಸಿದ್ದ ಜನರು ಕೂಡ ಒಂದು ಕ್ಷಣ ದಂಗಾಗಿರಬೇಕು. 


ಇದನ್ನೂ ಓದಿ-Shocking Video: ಪತ್ನಿಯೊಂದಿಗೆ ಜಗಳವಾಡಿದ ಪತಿ, ಬೆಡ್ ಮೇಲೆ ಪತ್ನಿ ಮಾಡಿದ ಕೆಲಸ ನೋಡಿ ನೀವೂ ಬೆಚ್ಚಿಬೀಳುವಿರಿ

ಯುವಕ ಚಲಾಯಿಸುತ್ತಿದ್ದ ಬೈಕ್ ಚಾಮರಾಜ ನಗರದಲ್ಲಿ ನೊಂದಣಿಯಾಗಿದ್ದು, ಈ ಇಬ್ಬರು ಪ್ರೇಮಿಗಳು ನಡೆಸುತ್ತಿದ್ದ ಹುಚ್ಚಾಟದ ವಿಡಿಯೋ ಅನ್ನು ತಮ್ಮ ಸ್ಮಾರ್ಟ್ ಫೋನ್ ನಲ್ಲಿ ಸೆರೆಹಿಡಿದಿದ್ದ ದಾರಿಹೋಕರು, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದರು. 


ಇದನ್ನೂ ಓದಿ-Largest Comet Towards Earth: ಭೂಮಿಯತ್ತ ಅತ್ಯಂತ ವೇಗವಾಗಿ ಧಾವಿಸುತ್ತಿದೆ ಇದುವರೆಗಿನ ಅತಿ ದೊಡ್ಡ ಧೂಮಕೇತು

ಸದ್ಯ ಅದೇನೇ ಇದ್ದರು ಕೂಡ ಈ ಪ್ರಕರಣದಲ್ಲಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಬೈಕ್ ಸಮೇತ ಯುವಕನನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ. 


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.