ಚಾಮರಾಜನಗರ: ಭಾರತ ಸಂವಿಧಾನ ಅಂಗೀಕಾರಗೊಂಡು 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಂಚರಿಸಿದ ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಕ್ಕೆ ಮೈಸೂರು ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ ಬಂದಿದೆ. 


COMMERCIAL BREAK
SCROLL TO CONTINUE READING

ಸ್ತಬ್ದ ಚಿತ್ರದ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುಳಿತಿರುವ ಪ್ರತಿಮೆಯನ್ನು ಆಕರ್ಷಕವಾಗಿ ನಿರ್ಮಿಸಲಾಗಿದೆ. ಸಂವಿಧಾನ ಪೀಠಿಕೆಯನ್ನು ಪುಸ್ತಕದ ಮಾದರಿಯಲ್ಲಿ ಪ್ರದರ್ಶಿಸಲಾಗಿದೆ. 


ಬಸವತತ್ವ, ಸಾವಿತ್ರಿ ಜ್ಯೋತಿಬಾಪುಲೆ, ನಾಲ್ವಡಿ ಕೃಷ್ಣರಾಜ ಒಡೆಯರ್‍ರವರ ಕೊಡುಗೆ ಸೇರಿದಂತೆ ಜಿಲ್ಲೆಯ ಪ್ರಮುಖ ಕೊಡುಗೆಗಳನ್ನು ಸ್ತಬ್ದ ಚಿತ್ರದಲ್ಲಿ ಸ್ಮರಿಸಲಾಗಿದೆ. ಸಂವಿಧಾನಿಕ ಹಕ್ಕುಗಳ ಸಂರಕ್ಷಣೆ ಸಂದೇಶ, ವನ್ಯಜೀವಿ ಪ್ರಕೃತಿ ಸಂರಕ್ಷಣೆ ಸಂದೇಶ, ಇನ್ನಿತರ ವೈಶಿಷ್ಟ್ಯಗಳನ್ನು ಸ್ತಬ್ದ ಚಿತ್ರ ಒಳಗೊಂಡಿದೆ. 


ಇದನ್ನೂ ಓದಿ: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಸಚಿವ ಶಿವರಾಜ್ ತಂಗಡಗಿ 


ಇದರೊಂದಿಗೆ ರಾಜ್ಯ ಸರ್ಕಾರ ಸಾಕಾರಗೊಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಸ್ತಬ್ದಚಿತ್ರದಲ್ಲಿ ಪ್ರದರ್ಶಿಸಲಾಗಿದೆ. ಕಳೆದ ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಎರಡು ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಗಳಿಗೆ ಚಾಲನೆ ದೊರೆತು ಜಿಲ್ಲೆಯ 130 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಗೃತಿ ಸ್ತಬ್ದ ಚಿತ್ರ ಸಂಚರಿಸಿದೆ. 


ನಗರ ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಅದ್ದೂರಿ ಸ್ವಾಗತ ನೀಡಿ ಜನತೆ ಹಬ್ಬದಂತೆ ಸಂಭ್ರಮಿಸಿದ್ದಾರೆ.  ಜನರಿಂದ ಸಂವಿಧಾನ ಜಾಗೃತಿಗೆ ಅಭೂತಪೂರ್ವ ಬೆಂಬಲ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೈಸೂರು ವಿಭಾಗ ಮಟ್ಟದಲ್ಲಿ ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರ ಪ್ರಥಮ ಸ್ಥಾನಕ್ಕೆ ಪಾತ್ರವಾಗಿದೆ.


ಇದನ್ನೂ ಓದಿ: ಮಕ್ಕಳು ಬಾಲ ನಟ, ನಟಿಯಾಗಿ ನಟನಾ ಕೆಲಸ ಮಾಡಲು ಅನುಮತಿ ಕಡ್ಡಾಯ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.