ಚಾಮರಾಜನಗರ: ಸಾಲಬಾಧೆ ತಾಳಲಾರದೇ ದಂಪತಿ ಆತ್ಮಹತ್ಯೆ

ಸಾಲಬಾಧೆ ತಾಳಲಾರದೇ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.

Written by - Manjunath N | Last Updated : Aug 18, 2024, 12:26 PM IST
  • ಕೊಳ್ಳೇಗಾಲದಲ್ಲಿ ಕುರುಕುರೆ ಏಜೆನ್ಸಿಯನ್ನು ಪಡೆದುಕೊಂಡಿದ್ದ ಇವರು ವ್ಯಾಪಾರದಲ್ಲಿ ಸಾಕಷ್ಟು ನಷ್ಟ ಅನುಭವಿಸಿದ್ದರು.
  • ಖಾಸಗಿ ಹಣಕಾಸು ಕಂಪನಿಯಲ್ಲಿ ಮನೆ ಅಡಮಾನವಿಟ್ಟು ಸಾಲವನ್ನೂ ಪಡೆಯುವ ಜೊತೆಗೆ ಕೈ ಸಾಲಗಳನ್ನು ಮಾಡಿಕೊಂಡು ಸಾಲದ ಭಾರವನ್ನು ಹೊತ್ತುಕೊಂಡಿದ್ದರು
 ಚಾಮರಾಜನಗರ: ಸಾಲಬಾಧೆ ತಾಳಲಾರದೇ ದಂಪತಿ ಆತ್ಮಹತ್ಯೆ title=

ಚಾಮರಾಜನಗರ: ಸಾಲಬಾಧೆ ತಾಳಲಾರದೇ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.

ಕೊಳ್ಳೇಗಾಲದ ಲಕ್ಷ್ಮೀ ನಾರಾಯಣಸ್ವಾಮಿ ದೇವಾಸ್ಥಾನದ ಬೀದಿಯಲ್ಲಿ ವಾಸವಿದ್ದ ಪಿ.ಆರ್.ನಾಗೇಶ್(55) ಹಾಗೂ ಸತ್ಯಲಕ್ಷ್ಮೀ(44) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ.  ಸಾಲಬಾಧೆ ತಾಳಲಾರದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ಸಾಯುವ ಮುನ್ನ ಮಗ ಗಣೇಶ್ ಮತ್ತು ಆತ್ಮೀಯರಿಗೆ ವಾಯ್ಸ್ ಮೆಸೆಜ್ ಕಳುಹಿಸಿದ್ದಾರೆ.

 ಕೊಳ್ಳೇಗಾಲದಲ್ಲಿ ಕುರುಕುರೆ ಏಜೆನ್ಸಿಯನ್ನು ಪಡೆದುಕೊಂಡಿದ್ದ ಇವರು ವ್ಯಾಪಾರದಲ್ಲಿ ಸಾಕಷ್ಟು ನಷ್ಟ ಅನುಭವಿಸಿದ್ದರು. ಖಾಸಗಿ ಹಣಕಾಸು ಕಂಪನಿಯಲ್ಲಿ ಮನೆ ಅಡಮಾನವಿಟ್ಟು ಸಾಲವನ್ನೂ ಪಡೆಯುವ ಜೊತೆಗೆ ಕೈ ಸಾಲಗಳನ್ನು ಮಾಡಿಕೊಂಡು ಸಾಲದ ಭಾರವನ್ನು ಹೊತ್ತುಕೊಂಡಿದ್ದರು. 

ಸಾಲಬಾಧೆ ತಾಳಲಾರದೇ ಭಾನುವಾರ ನಸುಕಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News